ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಬಿಡುಗಡೆ; ಬಜರಂಗದಳ, ಪಿಎಫ್ಐ ವಿರುದ್ಧ ಕ್ರಮದ ಭರವಸೆ

ಸರ್ವ ಜನಾಂಗದ ಶಾಂತಿಯ ತೋಟ: ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಬಿಡುಗಡೆ; ಬಜರಂಗದಳ, ಪಿಎಫ್ಐ ವಿರುದ್ಧ ಕ್ರಮದ ಭರವಸೆ

ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಎಲ್ಲಾ ಅನ್ಯಾಯದ ಕಾನೂನುಗಳು ಮತ್ತು ಜನವಿರೋಧಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಕಾಂಗ್ರೆಸ್ ಮಂಗಳವಾರ ತನ್ನ ಮೇ 10 ರ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ.

Congress released its manifesto in Bengaluru ahead of election

ಬೆಂಗಳೂರು: ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಎಲ್ಲಾ ಅನ್ಯಾಯದ ಕಾನೂನುಗಳು ಮತ್ತು ಜನವಿರೋಧಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಕಾಂಗ್ರೆಸ್ ಮಂಗಳವಾರ ತನ್ನ ಮೇ 10 ರ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ.

ಜಾತಿ ಮತ್ತು ಧರ್ಮದ ಆಧಾರದ ಮೇಲೆ ಸಮುದಾಯಗಳ ವಿರುದ್ಧ ದ್ವೇಷ ಹರಡುವ ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ದೃಢ ಮತ್ತು ನಿರ್ಣಾಯಕ ಕ್ರಮ ಕೈಗೊಳ್ಳಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ ಎಂದು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ತಿಳಿಸಿದೆ.

ಬಜರಂಗದಳ, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಇತರ ಸಂಘಟನೆಗಳನ್ನು ನಿಷೇಧಿಸುವುದು ಸೇರಿದಂತೆ ಕಾನೂನಿನ ಪ್ರಕಾರ “ನಿರ್ಣಾಯಕ ಕ್ರಮ” ತೆಗೆದುಕೊಳ್ಳುತ್ತದೆ ಎಂದು ಪಕ್ಷ ಹೇಳಿದೆ.

ಅಂತಹ ಯಾವುದೇ ಸಂಘಟನೆಗಳ ಮೇಲೆ ನಿಷೇಧ ಹೇರುವುದು ಸೇರಿದಂತೆ ಕಾನೂನು ಪ್ರಕಾರ ನಾವು ನಿರ್ಣಾಯಕ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿ ತಿಳಿಸಿದರು.

“ಕಾನೂನು ಮತ್ತು ಸಂವಿಧಾನವು ಪವಿತ್ರವಾಗಿದೆ ಮತ್ತು ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಸಮುದಾಯಗಳ ನಡುವೆ ಶತ್ರುತ್ವ ಅಥವಾ ದ್ವೇಷವನ್ನು ಉತ್ತೇಜಿಸುವ ಬಜರಂಗದಳ, ಪಿಎಫ್‌ಐ ಅಥವಾ ಇತರರಂತಹ ವ್ಯಕ್ತಿಗಳು ಮತ್ತು ಸಂಸ್ಥೆಗಳು ಅದನ್ನು ಉಲ್ಲಂಘಿಸುವುದಿಲ್ಲ ಎಂದು ನಾವು ನಂಬುತ್ತೇವೆ” ಎಂದು ಕಾಂಗ್ರೆಸ್ ಹೇಳಿದೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರಮುಖ ನಾಯಕರಾದ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್, ರಂದೀಪ್ ಸಿಂಗ್ ಸುರ್ಜೆವಾಲಾ, ಡಾ ಜಿ ಪರಮೇಶ್ವರ್ ಮೊದಲಾದ ನಾಯಕರ ಸಮ್ಮುಖದಲ್ಲಿ ಬಿಡುಗಡೆಯಾಯಿತು.

‘ಸರ್ವ ಜನಾಂಗದ ಶಾಂತಿಯ ತೋಟ, ಇದುವೆ ಕಾಂಗ್ರೆಸ್‌ ಬದ್ದತೆ’ ಹೆಸರಿನಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಕಾಂಗ್ರೆಸ್‌ ಬರಲಿದೆ ಪ್ರಗತಿ ತರಲಿದೆ ಎಂದು ಘೋಷ ವಾಕ್ಯವನ್ನು ಪ್ರಣಾಳಿಕೆಯಲ್ಲಿ ನೀಡಲಾಗಿದೆ.

ಪ್ರಣಾಳಿಕೆಯಲ್ಲಿ ರಾಜ್ಯದ ಜನತೆಗೆ ಘೋಷಿಸಿರುವ ಪ್ರಮುಖ ಯೋಜನೆಗಳು:

  • ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್​ ಉಚಿತ ವಿದ್ಯುತ್​, ಅನ್ನ ಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 10 ಕೆಜಿ ಉಚಿತ ಅಕ್ಕಿ, ಗೃಹಲಕ್ಷ್ಮೀ ಯೋಜನೆಯಡಿ ಮನೆ ಯಜಮಾನಿಗೆ 2 ಸಾವಿರ ರೂ, ಯುವನಿಧಿ ಯೋಜನೆಯಡಿ ನಿರುದ್ಯೋಗ ಯುವಕರಿಗೆ ನೆರವು, ಪದವೀಧರರಿಗೆ 3 ಸಾವಿರ ರೂ., ಡಿಪ್ಲೊಮೊ ಪದವೀಧರರಿಗೆ 1,500 ರೂ,
  • ಸರ್ಕಾರದಲ್ಲಿ ಒಂದು ವರ್ಷದಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳ ಭರ್ತಿ, ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡ್ತಿರುವ ನೌಕರರಿಗೆ ಖಾಯಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೌಕರರ ಖಾಯಂ,  
  •  ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ, ಪಿಎಫ್ಐ ವಿರುದ್ಧ ದೃಢ ಮತ್ತು ನಿರ್ಣಾಯಕ ಕ್ರಮ,
  • ಅಂಗನವಾಡಿ ಕಾರ್ಯಕರ್ತೆಯರ ವೇತನ 11,500 ರಿಂದ 15 ಸಾವಿರಕ್ಕೆ ಹೆಚ್ಚಳ, ಆಶಾ ಕಾರ್ಯಕರ್ತೆಯರ ಗೌರವಧನ 8 ಸಾವಿರ ರೂ.ಗೆ ಹೆಚ್ಚಳ, ಬಿಸಿಯೂಟ ನೌಕರರ ಮಾಸಿಕ ಗೌರವಧನ 6 ಸಾವಿರ ರೂ.ಗೆ ಹೆಚ್ಚಳ,
  • ರಾತ್ರಿ ಪಾಳಿಯ ಪೊಲೀಸ್​ ಸಿಬ್ಬಂದಿಗೆ 5 ಸಾವಿರ ರೂ. ವಿಶೇಷ ಭತ್ಯೆ, ಎಲ್ಲಾ ಪೊಲೀಸರಿಗೆ ವರ್ಷಕ್ಕೆ ಒಂದು ತಿಂಗಳ ವೇತನ ಹೆಚ್ಚುವರಿ ಪಾವತಿ, ಆದ್ಯತೆಯ ಮೇರೆಗೆ ಕಾಲ ಕಾಲಕ್ಕೆ ಎಲ್ಲಾ ಖಾಲಿ ಹುದ್ದೆಗಳ ಭರ್ತಿ,
  • ನಾಲ್ಕು ವರ್ಷದೊಳಗೆ ಎಲ್ಲಾ ಪೊಲೀಸ್ ಸಿಬ್ಬಂದಿಗೂ ವಸತಿ ಸೌಲಭ್ಯ, ಪ್ರತಿ ಜಿಲ್ಲೆಯಲ್ಲೂ ಸುಸಜ್ಜಿತ ಸೈಬರ್ ಪೊಲೀಸ್ ಠಾಣೆಗಳ ನಿರ್ಮಾಣ, ಕನಕಪುರದಲ್ಲಿ ವಿಶ್ವದರ್ಜೆಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವ ಭರವಸೆಯನ್ನು ಕಾಂಗ್ರೆಸ್ ನೀಡಿದೆ. 
  • ಬಿಬಿಎಂಪಿ ನಿರ್ವಹಣೆಗಾಗಿಯೇ ಸಮಗ್ರ ಶಾಸನ ಜಾರಿ, ಒಂದೇ ವೇದಿಕೆ ಅಡಿ ಸಾರಿಗೆ ವಿದ್ಯುತ್ ವಸತಿ ಒಳಚರಂಡಿ, ನೀರು ಸರಬರಾಜು ಸೌಕರ್ಯ, ಬೆಂಗಳೂರು ನಗರದ ವಿವಿಧ ಪ್ರದೇಶಗಳಿಗೆ ರಾತ್ರಿ 1 ಗಂಟೆ ತನಕ ಬಸ್ ವ್ಯವಸ್ಥೆ, NEP ರದ್ದು ಮಾಡಿ ಕರ್ನಾಟಕ ಶಿಕ್ಷಣ ನೀತಿಯ ಅನುಷ್ಠಾನ,
  • ಸರ್ಕಾರದಿಂದಲೇ ಮನೆಗಳ ನಿರ್ಮಾಣ, ಮಂಗಳಮುಖಿರಿಗಾಗಿ ಮಂಡಳಿ ಸ್ಥಾಪನೆ (100 ಕೋಟಿ ಅನುದಾನ), ಆಟೋ ಚಾಲಕರ ಮಂಡಳಿ ಹಾಗೂ ಟ್ಯಾಕ್ಸಿ ಚಾಲಕರ ಮಂಡಳಿ ಸ್ಥಾಪನೆ, ಪತ್ರಕರ್ತರ ಕಲ್ಯಾಣ ನಿಧಿಗೆ 500 ಕೋಟಿ ರೂ ಮೀಸಲು (ಪತ್ರಕರ್ತರಿಗೆ ಸಾಮಾಜಿಕ ಭದ್ರತಾ ಯೋಜನೆ ಜಾರಿ, ಮೊದಲ ಅಧಿವೇಶನದಲ್ಲಿ ಸದಾಶಿವ ಆಯೋಗದ ವರದಿ ಮಂಡನೆ), SC-ST ಒಳ ಮೀಸಲಾತಿಗೆ ನ್ಯಾಯ ಕೊಡಿಸಲು ಕಾಂಗ್ರೆಸ್ ಬದ್ದ.
  • ಒಂದು ಬಾರಿಯ ನೆರವಿನ ರೂಪದಲ್ಲಿ ಬೀದಿ ವ್ಯಾಪಾರಿಗಳಿಗೆ 20 ಸಾವಿರ ಅನುದಾನ, ಹಿರಿಯ ನಾಗರಿಕರಿಗೆ ಎರಡು ವರ್ಷಕ್ಕೊಮ್ಮೆ ರಾಜ್ಯದ 15 ದೇಶದ 10 ಪವಿತ್ರ ಸ್ಥಳಗಳಿಗೆ ಉಚಿತ ಪ್ರವಾಸ, ಕಾಶಿ, ಮಥುರ, ಕೈಲಾಸ, ಮಾನಸ ಸರೋವರ ಯಾತ್ರೆಯ ಸಬ್ಸಿಡಿ ಹೆಚ್ಚಳ,
  • ವಿಶೇಷ ಚೇತನರಿಗೆ ಪ್ರತಿ ಜಿಲ್ಲೆಯಲ್ಲಿ ವಿಶೇಷ ಶಾಲೆ ಸ್ಥಾಪನೆ, ಅಂಗವಿಕಲ ಮಹಿಳೆಯರಿಗೆ ಸ್ವ ಉದ್ಯೋಗಕ್ಕೆ 3 ಲಕ್ಷದವರೆಗೂ ಬಡ್ಡಿ ರಹಿತ ಸಾಲ, ಎಸ್.ಸಿ ಎಸ್.ಟಿ ಮೀಸಲಾತಿ ಸೇರಿದಂತೆ ಶೇ.50 ರಿಂದ ಶೇ.75ಕ್ಕೆ ಏರಿಕೆಗೆ ಸೂಕ್ತ ಕ್ರಮ (ಎಸ್.ಸಿ ಮೀಸಲಾತಿ ಶೇ.17ಕ್ಕೆ ಏರಿಕೆ, ಎಸ್.ಟಿ ಮೀಸಲಾತಿ ಶೇ. 7ಕ್ಕೆ ಏರಿಕೆ. ಅಲ್ಪ ಸಂಖ್ಯಾತರಿಗೆ ಶೇ.4 ರ ಮೀಸಲಾತಿ ಮರು ಸ್ಥಾಪನೆ, ಹಿಂದುಳಿದ ವರ್ಗಗಳ ಜನಗಣತಿ ವರದಿ ಅನುಷ್ಠಾನ)

ಸಾಂಪ್ರದಾಯಿಕ ಟಚ್: ವೀಳ್ಯದೆಲೆ ಅಡಿಕೆ, ಅರಿಶಿನ, ಕುಂಕುಮ ಇಟ್ಟು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದೆ. ಪ್ರಣಾಳಿಕೆ ಪುಸ್ತಕಕ್ಕೆ ಕನ್ನಡದ ಬಾವುಟದ ಬಣ್ಣ ಹಚ್ಚಲಾಗಿದೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *