ಭೀಮಣ್ಣ ನಾಯ್ಕ ಸಚಿವರಾಗಲು ಕೋರಿ ಚಂದ್ರಗುತ್ತಿಯಲ್ಲಿ ಪೂಜೆ

ನೆಚ್ಚಿನ ನಾಯಕನ ಗೆಲುವಿಗೆ ಬೆಟ್ಟುಕಟ್ಟಿ ಅಭಿಮಾನ ಮೆರೆದವರನ್ನು ನೋಡಿದ್ದೇವೆ. ತಮ್ಮ ನಾಯಕ ಗೆದ್ದರೆ ಹರಕೆ, ಸೇವೆ ನೀಡುವವರನ್ನು ಕಂಡಿದ್ದೇವೆ.ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದು ಹೆಜ್ಜೆ ಮುಂದೆ ಹೋಗಿ ಉರುಳುಸೇವೆ ಸಲ್ಲಿಸಿ ಈಡುಗಾಯಿ ಒಡೆಯುವ ಮೂಲಕ ಅಭಿಮಾನ ಮರೆದ ಘಟನೆ ನಡೆದಿದೆ.


ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಈ ಬಾರಿ ಭೀಮಣ್ಣ ನಾಯ್ಕ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಹಲವು ಬಾರಿ ಸೋತಿದ್ದ ಭೀಮಣ್ಣ ನಾಯ್ಕ ಈ ಬಾರಿ ಗೆದ್ದರೆ ದೇವರಿಗೆ ಹರಕೆ ಒಪ್ಪಿಸುವುದಾಗಿ ಬೇಡಿಕೊಂಡವರು ಅನೇಕ ಜನ. ಸಿದ್ಧಾಪುರದ ಗೋಳಗೋಡಿನ ಜನತೆ ಈ ಬಾರಿ ತಮ್ಮ ನಾಯಕ ಬೀಮಣ್ಣ ನಾಯ್ಕ ವಿಜಯಶಾಲಿಯಾದರೆ ತಮ್ಮ ಗ್ರಾಮದ ಈಶ್ವರ ದೇವರಿಗೆ ಉರುಳು ಸೇವೆ ಸಲ್ಲಿಸುವುದಾಗಿ ಬೇಡಿಕೊಂಡಿದ್ದರು. ಕಳೆದ ವಾರದ ಚುನಾವಣೆಯಲ್ಲಿ ಜಯಗಳಿಸಿದ ಭೀಮಣ್ಣ ನಾಯ್ಕರ ಪರವಾಗಿ ಹರಕೆ ಹೊತ್ತಿದ್ದ ಕೆಲವರು ಶುಭ ಸೋಮುವಾರವಾದ ಇಂದು ಈಡುಗಾಯಿ ಒಡೆದು, ಉರುಳುಸೇವೆ ಸಲ್ಲಿಸುವ ಮೂಲಕ ತಮ್ಮ ಸೇವೆ ಅರ್ಪಿಸಿದರು.


ಬೀಮಣ್ಣ ನಾಯ್ಕರ ಪರವಾಗಿ ಗೋಳಗೋಡಿನಲ್ಲಿ ಹರಕೆ ಪೂರೈಸಿದರೆ ಸಂಪಖಂಡದ ಯುವಕರು ಚಂದ್ರಗುತ್ತಿ ರೇಣಿಕಾದೇವಿಗೆ ಪೂಜೆ ಸಲ್ಲಿಸಿ ಭೀಮಣ್ಣ ನಾಯ್ಕ ಸಚಿವರಾಗುವಂತೆ ಬೇಡಿಕೊಂಡರು.


ಉತ್ತರ ಕನ್ನಡ ಜಿಲ್ಲೆಯ ಅನೇಕ ಕಡೆ ತಮ್ಮ ನೆಚ್ಚಿನ ನಾಯಕರ ಗೆಲುವಿಗೆ ಪ್ರತಿಯಾಗಿ ಅನೇಕ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸುವ ಮೂಲಕ ಅಭಿಮಾನ ಮೆರೆದಿದ್ದಾರೆ.ಸಿದ್ಧಾಪುರದ ಜನ ದೇವರಿಗೆ ಪೂಜೆ ಸಲ್ಲಿಸಿ, ಹರಕೆ ಪೂರೈಸಿ ಪ್ರಾರ್ಥಿಸುತ್ತಿರುವುದು ಈ ಬಾರಿ ವಿಶೇಶ ಎನಿಸಿಕೊಂಡಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *