ಕರ್ನಾಟಕ: ಸೋಮವಾರದಿಂದ 3 ದಿನಗಳ ವಿಶೇಷ ಅಧಿವೇಶನ

ಇಂದು ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರ ಸೋಮವಾರದಿಂದ 3 ದಿನಗಳ ವಿಶೇಷ ಅಧಿವೇಶನ ನಡೆಸುವುದಾಗಿ ಹೇಳಿದೆ.

Vidhanasoudha

ಬೆಂಗಳೂರು: ಇಂದು ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರ ಸೋಮವಾರದಿಂದ 3 ದಿನಗಳ ವಿಶೇಷ ಅಧಿವೇಶನ ನಡೆಸುವುದಾಗಿ ಹೇಳಿದೆ.

ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ಬಳಿಕ ವಿಧಾನಸೌಧಕ್ಕೆ ಆಗಮಿಸಿ ಸಚಿವ ಸಂಪುಟ ಸಭೆ ನಡೆಸಿದ ಸಿದ್ದರಾಮಯ್ಯ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಸೋಮವಾರದಿಂದ 3 ದಿನಗಳ ವಿಶೇಷ ಅಧಿವೇಶನ ನಡೆಸುವ ಕುರಿತು ಮಾಹಿತಿ ನೀಡಿದರು. 

ನಮ್ಮ ಸರ್ಕಾರ ರಚನೆ ಮೇಲೆ ಇದು ಮೊದಲ ಸುದ್ದಿಗೋಷ್ಠಿ. ನಾನು, ಡಿಕೆ ಶಿವಕುಮಾರ್, 8 ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದೇವೆ. ಬೇರೆ ರಾಜ್ಯಗಳ ಸಿಎಂಗಳು, ವಿಪಕ್ಷ ನಾಯಕರು ಬಂದಿದ್ದರು. ಬಿಜೆಪಿಯೇತರ ಪಕ್ಷಗಳ ಅಧ್ಯಕ್ಷರು ಬಂದು ಶುಭಕೋರಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕೆ.ಸಿ.ವೇಣುಗೋಪಾಲ್​, ಸುರ್ಜೇವಾಲ ಶುಭ ಕೋರಿದ್ದಾರೆ. ನಾವು ಸಹ ರಾಜ್ಯದ ಜನರಿಗೆ ಧನ್ಯವಾದ ಸಲ್ಲಿಸಿದ್ದೇವೆ ಎಂದರು.

ಇದೇ ವೇಳೆ ನೂತನವಾಗಿ ಆಯ್ಕೆಯಾಗಿರುವ ಶಾಸಕರಿಗೆ ಪ್ರಮಾಣ ವಚನ ಭೋದಿಸಬೇಕಿರುವ ಕಾರಣ ಸೋಮವಾರದಿಂದ  3 ದಿನಗಳ ವಿಶೇಷ ಅಧಿವೇಶನ ನಡೆಸಲಾಗುತ್ತದೆ. ಹಂಗಾಮಿ ಸ್ಪೀಕರ್​ ಆಗಿ ಆರ್​.ವಿ.ದೇಶಪಾಂಡೆ ನೇಮಕಗೊಳ್ಳಲಿದ್ದಾರೆ. ಬಳಿಕ ನೂತನ ಸ್ಪೀಕರ್ ಅವರನ್ನು ಆಯ್ಕೆ ಮಾಡಲಾಗುತ್ತದೆ ಸೋಮವಾರ, ಮಂಗಳವಾರ, ಬುಧವಾರ ವಿಧಾನಸಭೆ ಅಧಿವೇಶನ ಕರೆಯುತ್ತಿದ್ದೇವೆ, ಹೊಸ ಸಭಾಪತಿಯನ್ನು ಆಯ್ಕೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.


 
ಸಿಎಂ ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಜಿ.ಪರಮೇಶ್ವರ್​, ಕೆ.ಹೆಚ್​.ಮುನಿಯಪ್ಪ, ಕೆ.ಜೆ. ಜಾರ್ಜ್, ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಪ್ರಿಯಾಂಕ್ ಖರ್ಗೆ, ಜಮೀರ್​ ಅಹ್ಮದ್ ಖಾನ್ ಉಪಸ್ಥಿತರಿದ್ದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

abc

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

ಸಮಾಜಮುಖಿ ಡಾಟ್‌ ನೆಟ್‌ ಬ್ರೇಕಿಂಗ್……‌ ಅವರಗುಪ್ಪಾದ ಮಹಿಳೆ ಸೊರಬಾದಲ್ಲಿ ಆತ್ಮಹತ್ಯೆ

ಸೊರಬಾದ ವಸತಿನಿಲಯದ ಮುಖ್ಯ ಅಡುಗೆ ಸಿಬ್ಬಂದಿ ಮಹಿಳೆ ವಸತಿ ನಿಲಯದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಸಿದ್ಧಾಪುರದ ಅವರಗುಪ್ಪಾ ಮೂಲದ ನೇತ್ರಾವತಿ ನಾಯ್ಕ ಆತ್ಮಹತ್ಯೆಗೆ...

ಹೋರಾಟಗಳ ಮೂಲಕ ಸುಧಾರಣೆ ಇಂದಿನ ಅನಿವಾರ್ಯತೆ

ಬಹುಜನ ಚಳವಳಿಗಳಿಗೆ ನಾರಾಯಣ ಗುರುಗಳು ಮತ್ತು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಚಿಂತನೆಗಳು ಪೂರಕ ಎಂದಿರುವ ಯುವ ಚಿಂತಕ ಲೋಹಿತ್‌ ನಾಯ್ಕ ಈಗಲೂ ಸೈದ್ಧಾಂತಿಕ...

ಅಕ್ರಮ ಮದ್ಯ ಮಾರಾಟ, ಮದ್ಯ ಸೇವಿಸಿ ವಾಹನ ಚಾಲನೆ ನಿಯಂತ್ರಣಕ್ಕೆ ಭೀಮಣ್ಣ ಆದೇಶ

ಶಿರಸಿ-ಸಿದ್ಧಾಪುರಗಳಲ್ಲಿ ಸಾಮಾಜಿಕ ಪಿಡುಗಾಗಿ ಜನರ ಜನಜೀವನಕ್ಕೆ ತೊಂದರೆ ಕೊಡುತ್ತಿರುವ ಅಕ್ರಮ ಮದ್ಯ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವ ಬಗ್ಗೆ ಸ್ಥಳೀಯ ಶಾಸಕ ಭೀಮಣ್ಣ...

ಪಿ.ಎಂ.ಶ್ರೀ ಎಲ್.ಕೆ.ಜಿ.ಗೆ ಚಾಲನೆ ನೀಡಿದ ಶಾಸಕ ಭೀಮಣ್ಣ

ಸಿದ್ದಾಪುರ: ತಾಲೂಕಿನ ಕೋಲಶಿರ್ಸಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ಸಾಲಿನಿಂದ ಪ್ರಾರಂಭವಾಗಿರುವ ಪಿ.ಎಮ್.ಶ್ರೀ ಪೂರ್ವ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಗೆ ಶಿರಸಿ-ಸಿದ್ದಾಪುರ ಕ್ಷೇತ್ರದ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

abc

Recommended For You

About the Author: Kanneshwar Naik

Leave a Reply

Your email address will not be published. Required fields are marked *