


ಸಿದ್ಧಾಪುರ,ಮೇ,೨೩- ಏಂಜಿಸಿ ಮತ್ತು ಧನ್ವಂತರಿ ಆಯುರ್ವೇದ ಮಹಾವಿದ್ಯಾಲಯಗಳ ಶೌಚಾಲಯಗಳ ಇಂಗು ಗುಂಡಿಗಳ ನಿರ್ವಹಣೆ ಇಲ್ಲದೆ ಸ್ಥಳೀಯ ನಿವಾಸಿಗಳಿಗೆ ತೊಂದರೆ ಆಗಿದೆ ಎಂದು ಅವರಗುಪ್ಪಾದ ನಿವಾಸಿಗಳು ಆರೋಪಿಸಿದ್ದು ಈ ತೊಂದರೆ ನಿವಾರಣೆಗೆ ಕೋರಿ ಕೋಲಶಿರ್ಸಿ ಗ್ರಾ.ಪಂ. ಗೆ ಲಿಖಿತ ದೂರು ನೀಡಿದ್ದಾರೆ.

ಕೋಲಶಿರ್ಸಿ ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಎಂ.ಜಿ.ಸಿ. ಕಾಲೇಜು ಮತ್ತು ಧನ್ವಂತರಿ ಆಯುರ್ವೇದ ಕಾಲೇಜುಗಳ ಬಾಲಕರ ವಸತಿ ನಿಲಯಗಳಿಗೆ ತ್ಯಾಜ್ಯ ವಿಲೇವಾರಿಗೆ ಸೂಕ್ತ ವ್ಯವಸ್ಥೆಗಳಿಲ್ಲ. ಶೌಚಾಲಯದ ಇಂಗು ಗುಂಡಿಗಳ ಸಾಮರ್ಥ್ಯಕ್ಕಿಂತ ಹೆಚ್ಚು ತ್ಯಾಜ್ಯ ತುಂಬಿ ಬಯಲಿನಲ್ಲಿ ಹರಿಯುವುದರಿಂದ ಈ ಭಾಗದ ಜನರಿಗೆ ದುರ್ವಾಸನೆ, ಸೊಳ್ಳೆಕಾಟ ತಡೆಯಲಾಗುತ್ತಿಲ್ಲ. ಈ ಬಗ್ಗೆ ಸಂಬಂಧಿಸಿದ ವ್ಯಕ್ತಿಗಳು, ಸಂಸ್ಥೆಯ ಪ್ರಮುಖರಿಗೆ ತಿಳಿಸಿದರೆ ಅವರು ಉಪೇಕ್ಷಿಸುತ್ತಾರೆ.
ಈ ಬಗ್ಗೆ ಗ್ರಾ.ಪಂ. ಆಡಳಿತಕ್ಕೆ ಲಿಖಿತ ದೂರು ನೀಡಿದ್ದೇವೆ. ಸಂಬಂಧಿಸಿದವರು ಈ ಬಗ್ಗೆ ಸೂಕ್ತ ಕ್ರಮಕೈಗೊಂಡು ಈ ಅವ್ಯವಸ್ಥೆಯಿಂದ ಸ್ಥಳಿಯರಿಗೆ ಆಗುತ್ತಿರುವ ತೊಂದರೆ ತಪ್ಪಿಸಬೇಕೆಂದು ವಿನಂತಿಸಿದ್ದಾರೆ.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
