ಲೋಕಸಭೆ ಚುನಾವಣೆ: ಕರಾವಳಿ ಕರ್ನಾಟಕದಲ್ಲಿ ಹಿಂದುತ್ವ ಶಕ್ತಿಗಳ ಪ್ರಾಬಲ್ಯ ಕುಗ್ಗಿಸಲು ಹರಿಪ್ರಸಾದ್ ಹೆಗಲಿಗೆ ಜಿಲ್ಲಾ ಉಸ್ತುವಾರಿ?

ಶಾಸಕ ಯು.ಟಿ.ಖಾದರ್ ವಿಧಾನಸಭಾಧ್ಯಕ್ಷರಾಗಿ ಆಯ್ಕೆಯಾದ ನಂತರ, ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಅವರಿಗೆ ಕರಾವಳಿ ಪ್ರದೇಶದಿಂದ ಸಚಿವ ಸ್ಥಾನ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ನೀಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

B K hariprasad

ಮಂಗಳೂರು: ಶಾಸಕ ಯು.ಟಿ.ಖಾದರ್ ವಿಧಾನಸಭಾಧ್ಯಕ್ಷರಾಗಿ ಆಯ್ಕೆಯಾದ ನಂತರ, ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಅವರಿಗೆ ಕರಾವಳಿ ಪ್ರದೇಶದಿಂದ ಸಚಿವ ಸ್ಥಾನ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ನೀಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

https://imasdk.googleapis.com/js/core/bridge3.575.0_en.html#goog_255902183

68 ವರ್ಷ  ವಯಸ್ಸಿನ ಹರಿಪ್ರಸಾದ್ ಪ್ರಾಬಲ್ಯ ಹೊಂದಿರುವ ಬಿಲ್ಲವ ಸಮುದಾಯದಿಂದ ಬಂದವರು. ಹಿರಿಯ ಕಾಂಗ್ರೆಸ್ ನಾಯಕ ಬಿಲ್ಲವರೂ ಆದ ಬಿ ಜನಾರ್ದನ ಪೂಜಾರಿ ಅವರು ರಾಜಕೀಯದಿಂದ ಹಿಂದೆ ಸರಿದ ನಂತರ, ಆ ಪ್ರದೇಶದಲ್ಲಿ ಬಲ ತುಂಬಲು ಯಾರೂ ಇರಲಿಲ್ಲ. ಬಿಜೆಪಿ ಮತ್ತು ಹಿಂದುತ್ವ ಶಕ್ತಿಗಳ ಬಲವನ್ನು ತನ್ನ ಭದ್ರಕೋಟೆಯಲ್ಲಿ ನಿಭಾಯಿಸುವ ಸಾಮರ್ಥ್ಯವನ್ನು ಹೊಂದಿರುವ ಹರಿಪ್ರಸಾದ್‌ಗೆ ಉಸ್ತುವಾರಿ ನೀಡಲು ಇದು ಸರಿಯಾದ ಸಮಯ ಎಂದು ಪಕ್ಷದ ನಾಯಕರು ಅಭಿಪ್ರಾಯ ಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಪಕ್ಷದ ಸಂಘಟನೆಯ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ಹರಿಪ್ರಸಾದ್‌ಗೆ  ಅಧಿಕಾರ ನೀಡುವುದನ್ನು ಬಿಟ್ಟು ಕಾಂಗ್ರೆಸ್ ಗೆ ಬೇರೆ ದಾರಿಯಿಲ್ಲ ಎಂದು ಮೂಲಗಳು ತಿಳಿಸಿವೆ. ಜಿಲ್ಲೆಯಲ್ಲಿ ಪಕ್ಷದ ಕಳಪೆ ಪ್ರದರ್ಶನದ ನಂತರ, ಜಿಲ್ಲೆಯಲ್ಲಿ ಪಕ್ಷವನ್ನು ಮುನ್ನಡೆಸಲು ಬೇರೆ ಯಾರೂ ಕಾಂಗ್ರೆಸ್ ನಾಯಕರಿಲ್ಲ.

ಕಳೆದ ಹಲವು ವರ್ಷಗಳಿಂದ ದಕ್ಷಿಣ ಕನ್ನಡದಲ್ಲಿ ಸರ್ಕಾರ ಮತ್ತು ಪಕ್ಷದಲ್ಲಿ ಉತ್ತಮ ಹುದ್ದೆಗಳನ್ನು ಅಲಂಕರಿಸಿದ್ದ ಮಾಜಿ ಸಚಿವರಾದ ಬಿ.ರಮಾನಾಥ್ ರೈ ಮತ್ತು ಖಾದರ್ ಅವರ ಕಾರಣದಿಂದ ಪಕ್ಷವು ಬಂಟ್ಸ್ ಮತ್ತು ಮುಸ್ಲಿಮರ ಹಿಡಿತದಲ್ಲಿದೆ. ಇದು ಒಂದು ರೀತಿಯಲ್ಲಿ ಬಿಲ್ಲವರನ್ನು ಕಾಂಗ್ರೆಸ್‌ನಿಂದ ದೂರವಿಟ್ಟಿತು ಮತ್ತು ಅವರು ಹೀಗಾಗಿ ಅವರು ಬಿಜೆಪಿಗೆ ಪ್ರಮುಖ ಮತಬ್ಯಾಂಕ್ ಆದರು.

ಹರಿಪ್ರಸಾದ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿಯನ್ನಾಗಿ ಮಾಡುವ ಮೂಲಕ ಪಕ್ಷವು ಬಿಲ್ಲವರನ್ನು ಮರಳಿ ಸೆಳೆಯಬಹುದು ಎಂದು ಹಲವರು ಭಾವಿಸಿದ್ದಾರೆ. ಇದು 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಕಠಿಣ ಹೋರಾಟ ನೀಡಲು ಕಾಂಗ್ರೆಸ್ ಗೆ ನೆರವಾಗಲಿದೆ.

2019 ರಲ್ಲಿ, ಜನಾರ್ದನ ಪೂಜಾರಿ ಅವರ ಸತತ ಸೋಲಿನ ನಂತರ, ಪಕ್ಷವು ಬಂಟ್ ಸಮುದಾಯದ ಮಿಥುನ್ ರೈ ಅವರನ್ನು ಕಣಕ್ಕಿಳಿಸಿತು, ಆದರೆ ಅವರು 2.73 ಲಕ್ಷ ಮತಗಳ ಅಂತರದಿಂದ ಸೋತರು. ಬಂಟ್ ಪ್ರಯೋಗ ವಿಫಲವಾದ ಕಾರಣ, ಪಕ್ಷವು ಪ್ರಬಲ ಪರ್ಯಾಯ ನಾಯಕನನ್ನು ಹುಡುಕುವ ಅನಿವಾರ್ಯತೆಗೆ ಸಿಲುಕಿತು.

ಹರಿಪ್ರಸಾದ್ ಉತ್ತಮ ಆಯ್ಕೆಯಾಗಬಹುದು ಎಂದು ಮೂಲಗಳು ತಿಳಿಸಿವೆ. ಆದರೆ ಅದಕ್ಕೂ ಮುನ್ನ ಕ್ಷೇತ್ರದ ಮೇಲೆ ಹಿಡಿತ ಸಾಧಿಸಲು ಅವರನ್ನು ಸಚಿವರನ್ನಾಗಿಸಬೇಕು. ಭೂಸುಧಾರಣಾ ಕಾಯ್ದೆಯಂತಹ ಕಾಂಗ್ರೆಸ್ ಸರ್ಕಾರದ ಮಹತ್ವದ ನಿರ್ಧಾರಗಳನ್ನು ಜನರಿಗೆ ತಲುಪಿಸುವ ಮೂಲಕ ಅವರು ಮತದಾರರೊಂದಿಗೆ, ವಿಶೇಷವಾಗಿ ಒಬಿಸಿ ಮತ್ತು ದಲಿತ ಸಮುದಾಯಗಳೊಂದಿಗೆ ಉತ್ತಮವಾಗಿ ಸಂಪರ್ಕ ಹೊಂದಿದ್ದಾರೆ, ಅದರಲ್ಲಿ ಕರಾವಳಿ ಭಾಗದಲ್ಲಿ ಹೆಚ್ಚಿನ ಸಂಖ್ಯೆಯ ಫಲಾನುಭವಿಗಳು ಇದ್ದಾರೆ.‌ (ಕಪ್ರಡಾ)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *