ತಪ್ಪಿದ ಸಚಿವ ಸ್ಥಾನ, ಪಕ್ಷ ನಿಷ್ಠೆಗೆ ಬೆಲೆ ಸಿಗದಿದ್ದಕ್ಕೆ ಅಸಮಾಧಾನ; ಎಂಎಲ್ ಸಿ ಹುದ್ದೆಗೆ ಹರಿಪ್ರಸಾದ್ ರಾಜಿನಾಮೆ?

ಸಿದ್ದರಾಮಯ್ಯ ಸರ್ಕಾರದ ಸಂಪುಟ ಸೇರ್ಪಡೆಗೆ ಬಾರೀ ಲಾಬಿ ಏರ್ಪಟ್ಟಿದ್ದು, ಕೊನೆಗೂ 24 ಜನರ ಶಾಸಕರಿಗೆ ಸಚಿವ ಸ್ಥಾನ ಒಲಿದು ಬಂದಿದೆ. ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕರಾಗಿದ್ದ ಬಿ.ಕೆ ಹರಿಪ್ರಸಾದ್ ಸಚಿವ ಸ್ಥಾನ ಕೈ ತಪ್ಪಿದ್ದು, ರಾಜೀನಾಮೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.

B.k Hari prasad

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದ ಸಂಪುಟ ಸೇರ್ಪಡೆಗೆ ಬಾರೀ ಲಾಬಿ ಏರ್ಪಟ್ಟಿದ್ದು, ಕೊನೆಗೂ 24 ಜನರ ಶಾಸಕರಿಗೆ ಸಚಿವ ಸ್ಥಾನ ಒಲಿದು ಬಂದಿದೆ. ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕರಾಗಿದ್ದ ಬಿ.ಕೆ ಹರಿಪ್ರಸಾದ್ ಸಚಿವ ಸ್ಥಾನ ಕೈ ತಪ್ಪಿದ್ದು, ರಾಜೀನಾಮೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.

https://imasdk.googleapis.com/js/core/bridge3.575.0_en.html#goog_1257540510

16 ವಿವಿಧ ರಾಜ್ಯಗಳಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ, ಪರಿಷತ್ತಿನಲ್ಲಿ ವಿರೋಧ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿರುವ ಹಿರಿಯ ಕಾಂಗ್ರೆಸ್ ನಾಯಕ ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ಸಿಗಲಿಲ್ಲ. ಪಕ್ಷದ ಕೆಲವರ ನಡೆಯಿಂದ ಅಸಮಾಧಾನಗೊಂಡು ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಡಲು ನಿರ್ಧಾರ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಸಾಮಾಜಿಕ ಜಾಲತಾಣಗಳಲ್ಲೂ ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಒತ್ತಾಯ ಕೇಳಿಬಂದಿತ್ತು. ಕರಾವಳಿಯಲ್ಲಿ ಬಿಲ್ಲವ ಸಮುದಾಯ ದೊಡ್ಡ ಮಟ್ಟದಲ್ಲಿ ಇರುವುದಿಂದ ಈ ಭಾಗದವರಾಗಿರುವ ಬಿ.ಕೆ ಹರಿ ಪ್ರಸಾದ್ ಅವರಿಗೆ ಸಂಪುಟದಲ್ಲಿ ಸ್ಥಾನ ಸಿಗುವ ನಿರೀಕ್ಷೆ ಇತ್ತು.

ಹರಿಪ್ರಸಾದ್ ಅವರನ್ನು ಸಂಪರ್ಕಿಸಿದಾಗ ಪ್ರತಿಕ್ರಿಯಿಸಲು ನಿರಾಕರಿಸಿದರು. ಹರಿಪ್ರಸಾದ್ ಬದಲಿಗೆ ರಾಜು ಸಮುದಾಯಕ್ಕೆ ಸೇರಿದ ಹಾಗೂ ಎರಡೂ ಸದನದ ಸದಸ್ಯರಲ್ಲದ ಎನ್.ಎಸ್.ಬೋಸರಾಜು ಅವರಿಗೆ ಸಚಿವ ಸ್ಥಾನ ನೀಡಲಾಗಿದೆ.

ರಾಯಚೂರು ಲೋಕಸಭಾ ಸ್ಥಾನದ ಆಕಾಂಕ್ಷಿಯಾಗಿದ್ದ ಬೋಸರಾಜು ಅವರಿಗೆ ರಾಯಚೂರು ನಗರದಿಂದ ಟಿಕೆಟ್ ನಿರಾಕರಿಸಲಾಗಿದ್ದು, ಮತ್ತೋರ್ವ ಆಕಾಂಕ್ಷಿ ಯಾಸಿನ್‌ಗೆ ಅವಕಾಶ ನೀಡಬೇಕೆಂದು ಕೆಲವು ಮುಖಂಡರು ಪಟ್ಟು ಹಿಡಿದಿದ್ದರು ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಬೋಸರಾಜು ಅವರಿಗೆ ಸಚಿವ ಸ್ಥಾನ ನೀಡುವುದಾಗಿ ಕಾಂಗ್ರೆಸ್ ನಾಯಕತ್ವ ಭರವಸೆ ನೀಡಿತ್ತು. ಅದರಂತೆ ಬೋಸರಾಜು ಅವರಿಗೆ ಸಚಿವ ಸ್ಥಾನ ನೀಡಲಾಗಿದೆ. ಯಾರೇ ಸಚಿವರಾಗಿದ್ದರೂ ಉಭಯ ಸದನಗಳ ಒಂದರಲ್ಲಿ ಸದಸ್ಯರಾಗಿರಬೇಕು ಎಂಬುದು ನಿಯಮ.  ಹೀಗಾಗಿ ಬೋಸರಾಜು ಎಂಎಲ್‌ಸಿಯಾಗಿ ಆಯ್ಕೆಯಾಗಲು ಆರು ತಿಂಗಳ ಕಾಲಾವಕಾಶವಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್‌, ಮುಖ್ಯ ಸಚೇತಕ ಪ್ರಕಾಶ್‌ ರಾಥೋಡ್‌ ಅವರಂತ ಹಲವರು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು, ಆದರೆ ಹಿರಿಯ ನಾಯಕರಲ್ಲಿ ಯಾರೊಬ್ಬರಿಗೂ ಸ್ಥಾನ ಸಿಗದ ಕಾರಣ ಕಾಂಗ್ರೆಸ್‌ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತವಾಗಿದೆ. ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗಲು ಸಾಕಷ್ಟು ಕಸರತ್ತು ನಡೆಸಿದ್ದ ಹಾಗೂ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಕೆಲವರು ಹೊರಗುಳಿದಿದ್ದಾರೆ.. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *