ಮೇ 31 ರಿಂದ ವಿದ್ಯಾರ್ಥಿಗಳಿಗೆ ಸಿಹಿ ನೀಡುವ ಮೂಲಕ ಶಾಲೆಗಳು ಪ್ರಾರಂಭ: ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮೇ 31ರಿಂದ ರಾಜ್ಯದ 23-24 ನೇ ಸಾಲಿನ ಶೈಕ್ಷಣಿಕ ವರ್ಷದ ಕಾರ್ಯಾರಂಭವಾಗುತ್ತಿದ್ದು, ಮೊದಲ ದಿನ ಶಾಲೆಗೆ ಬರುವ ಎಲ್ಲಾ ವಿದ್ಯಾರ್ಥಿಗಳಿಗೆ ಸಿಹಿ ನೀಡುವ ಮೂಲಕ ಪ್ರಾರಂಭವಾಗಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ.

ಶಿಕ್ಷಣ ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಮೇ 31ರಿಂದ ರಾಜ್ಯದ 23-24 ನೇ ಸಾಲಿನ ಶೈಕ್ಷಣಿಕ ವರ್ಷದ ಕಾರ್ಯಾರಂಭವಾಗುತ್ತಿದ್ದು, ಮೊದಲ ದಿನ ಶಾಲೆಗೆ ಬರುವ ಎಲ್ಲಾ ವಿದ್ಯಾರ್ಥಿಗಳಿಗೆ ಸಿಹಿ ನೀಡುವ ಮೂಲಕ ಪ್ರಾರಂಭವಾಗಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ.

https://imasdk.googleapis.com/js/core/bridge3.575.0_en.html#goog_47767248

ಶಾಲಾ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುವ ಮೂಲಕ ವಿದ್ಯಾರ್ಥಿಗಳಿಗೆ ಮಧು ಬಂಗಾರಪ್ಪ ಅವರು ಶುಭ ಹಾರೈಸಿದ್ದಾರೆ.

ಶಾಲೆಯಲ್ಲಿ ಪೂರಕ ಸಿದ್ಧತೆಗಳು ಇಂದಿನಿಂದಲೇ ಆರಂಭಗೊಂಡಿವೆ. ಆರೋಗ್ಯಕರ ವಾತಾವರಣದಲ್ಲಿ ಖುಷಿಯ ಕಲಿಕೆ ನಿಮ್ಮದಾಗಲಿ. ಮಾದರಿ ಶಿಕ್ಷಣ ವ್ಯವಸ್ಥೆಗೆ ಶಿಕ್ಷಕರ, ಪೋಷಕರ ಹಾಗೂ ಕನ್ನಡಿಗರ ಸಹಕಾರವಿರಲಿ ಎಂದು ಹೇಳಿದ್ದಾರೆ.

ಈ ನಡುವೆ ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆಯೊಂದನ್ನು ಹೊರಡಿಸಿದ್ದು, ಸುತ್ತೋಲೆಯಲ್ಲಿ ಎಲ್ಲಾ ಮಕ್ಕಳಿಗೆ ಶಾಲೆಯ ಮೊದಲ ದಿನ ಕಡ್ಡಾಯವಾಗಿ ಸಿಹಿತಿಂಡಿಗಳನ್ನು ನೀಡಬೇಕು ಮತ್ತು ಮೊದಲ ದಿನದಿಂದಲೇ ಪ್ರತಿದಿನ ಮಧ್ಯಾಹ್ನದ ಊಟವನ್ನು ನೀಡಬೇಕು ಎಂದು ತಿಳಿಸಿದೆ.

ಬೇಸಿಗೆ ರಜೆ ಬಳಿಕ ಶಾಲೆಗಳು ಪುನರಾರಂಭವಾಗುತ್ತಿರು ಹಿನ್ನೆಲೆಯಲ್ಲಿ ಮೇ.29 ಮತ್ತು 30 ರಂದು ಶಾಲೆಗಳನ್ನು ಸ್ವಚ್ಛಗೊಳಿಸುವ ಕಾರ್ಯಗಳನ್ನು ನಡೆಸಬೇಕು. ಇತರೆ ಸಿದ್ಧತೆಗಳನ್ನೂ ಮಾಡಿಕೊಳ್ಳಬೇಕು ಎಂದು ಸೂಚಿಸಿದೆ.

ಬಳಕೆಯಾಗದ ವಸ್ತುಗಳ ವಿಲೇವಾರಿ ಸೇರಿದಂತೆ ಶಾಲಾ ಆವರಣವನ್ನು ಸೂಕ್ತ ರೀತಿಯಲ್ಲಿ ಸ್ವಚ್ಛಗೊಳಿಸುವಂತೆ ಮತ್ತು ಶೈಕ್ಷಣಿಕ ವೇಳಾಪಟ್ಟಿಯನ್ನು ಸರಿಯಾಗಿ ರೂಪಿಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ಇಲಾಖೆ ಅಧಿಕಾರಿಗಳಿಗೆ ಆದೇಶಿಸಿದೆ.

2023-24ನೇ ಸಾಲಿನ ಶೈಕ್ಷಣಿಕ ವರ್ಷದ ದಿನಗಳ ಸಂಖ್ಯೆಯನ್ನು 26 ದಿನಗಳು ಕಡಿತಗೊಳಿಸಿದ್ದು, ಒಟ್ಟು 244 ದಿನಗಳು ಮಾತ್ರ ಶಾಲೆಗಳು ತೆರೆದಿರುತ್ತವೆ. ಅದರಲ್ಲಿ 180 ದಿನಗಳು ಮಾತ್ರ ಬೋಧನಾ ದಿನಗಳು ಇರಲಿವೆ. ದಸರಾ ರಜೆ ಕೂಡ ಅಕ್ಟೋಬರ್ 8 ರಿಂದ 24ರವರೆಗೆ ಇರಲಿದೆ ಎನ್ನಲಾಗಿದೆ. (ಕಪ್ರಡಾ)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.

ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *