‘ಕಠಿಣ ಶ್ರಮ -ಕಲಿಕೆಯ ಮೇಲೆ ಆಸಕ್ತಿಯಿದ್ದರೆ ಸಾಮಾನ್ಯ ಬಾಲಕ ರಾಜ್ಯದ ಸಿಎಂ ಆಗಬಹುದು ಎನ್ನುವುದಕ್ಕೆ ನಾನೇ ಸಾಕ್ಷಿ’

ಬೇಸಿಗೆ ರಜೆ ಕಳೆದು ನಿನ್ನೆಯಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದೆ. ರಾಜ್ಯಾದ್ಯಂತ ಶಾಲೆಗಳು ಪ್ರಾರಂಭವಾಗಿವೆ, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಲೆಯ ಮಕ್ಕಳಿಗೆ ಪತ್ರ ಬರೆದಿದ್ದು, ಶಾಲೆಗೆ ಬರುವಂತೆ ಸ್ವಾಗತ ಬಯಸಿ ಶುಭಾಶಯ ಕೋರಿದ್ದಾರೆ.

Cm Letter to School kids

ಬೆಂಗಳೂರು: ಬೇಸಿಗೆ ರಜೆ ಕಳೆದು ನಿನ್ನೆಯಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದೆ. ರಾಜ್ಯಾದ್ಯಂತ ಶಾಲೆಗಳು ಪ್ರಾರಂಭವಾಗಿವೆ, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಲೆಯ ಮಕ್ಕಳಿಗೆ ಪತ್ರ ಬರೆದಿದ್ದು, ಶಾಲೆಗೆ ಬರುವಂತೆ ಸ್ವಾಗತ ಬಯಸಿ ಶುಭಾಶಯ ಕೋರಿದ್ದಾರೆ.

ರಜಾದಿನಗಳನ್ನು ತಂದೆ-ತಾಯಿ, ಗೆಳೆಯ-ಗೆಳತಿಯರ ಜೊತೆ ಆನಂದದಿಂದ ಕಳೆದ ನಿಮ್ಮನ್ನು ಶಾಲೆಗಳು ಕೈಬೀಸಿ ಕರೆಯುತ್ತಿವೆ. ಕಳೆದ ಎರಡು –ಮೂರು ವರ್ಷಗಳಲ್ಲಿ ಕೊರೊನಾ ವೈರಾಣುವಿನಿಂದಾಗಿ ನೀವೆಲ್ಲ ವಿದ್ಯಾರ್ಥಿ ಜೀವನವನ್ನು ಸಂಪೂರ್ಣ ಅನುಭವಿಸಲಾಗದೆ ಅನೇಕ ಬಗೆಯ ಸಂಕಟ-ಸಂಕಷ್ಟಕ್ಕೆ ಈಡಾಗಿದ್ದೀರಿ. ಈಗ ನಾವು ಆ ಸವಾಲನ್ನು ಗೆದ್ದಿದ್ದೇವೆ, ಆರೋಗ್ಯದ ಪಾಠವನ್ನು ಕಲಿತಿದ್ದೇವೆ. ರಾಜ್ಯದ ಈ ಬಾರಿಯ ಶೈಕ್ಷಣಿಕ ವರ್ಷ ಇಂತಹ ಬದಲಾವಣೆಯ ತಂಗಾಳಿಯೊಂದಿಗೆ ಪ್ರಾರಂಭವಾಗಿದೆ. ಜ್ಞಾನ ದೇಗುಲಕ್ಕೆ ನಿಮಗೆಲ್ಲರಿಗೂ ಸ್ವಾಗತ. ಕೈಮುಗಿದು ಒಳಗೆ ಬನ್ನಿ.

ಶಾಲೆಯೆಂದರೆ ಬರೀ ಕಲ್ಲು ಕಟ್ಟಡವಲ್ಲ. ಅದೊಂದು ಜ್ಞಾನ ದೇಗುಲ. ಹೆತ್ತ ತಂದೆ-ತಾಯಿಗಳಂತೆ ಕಲಿಸುವ ಗುರುಗುಳು ಕೂಡಾ ವಿದ್ಯಾರ್ಥಿಗಳ ಪಾಲಿನ ದೇವರು. ಈ ಶ್ರದ್ದೆ ಮತ್ತು ಗೌರವ ಸದಾ ನಿಮ್ಮಲ್ಲಿರಲಿ. ‘ಪ್ರತಿಯೊಬ್ಬರು ಹುಟ್ಟಿದಾಗ ವಿಶ್ವಮಾನವ, ಬೆಳೆಯುತ್ತಾ ಅಲ್ಪ ಮಾನವನಾಗುತ್ತಾನೆ’ ಎಂದು ರಾಷ್ಟ್ರಕವಿ ಕುವೆಂಪು ಎಚ್ಚರಿಸಿದ್ದರು. ಪರೀಕ್ಷೆ-ಫಲಿತಾಂಶ ಎಲ್ಲವೂ ಮುಖ್ಯವಾದರೂ ಶಿಕ್ಷಣ ಎಂದರೆ ಅಷ್ಟೇ ಅಲ್ಲ. ಶಿಕ್ಷಣ ಎನ್ನವುದು ನಮ್ಮಲ್ಲಿ ವೈಜ್ಞಾನಿಕ ಮತ್ತು ವೈಚಾರಿಕ ಅರಿವು ಮೂಡಿಸಬೇಕು, ಸತ್ಯ ಹೇಳುವ ಧೈರ್ಯವನ್ನು,ನ್ಯಾಯದ ಮಾರ್ಗದಲ್ಲಿ ಮುನ್ನಡೆಯುವ ಶಕ್ತಿಯನ್ನು ನೀಡಬೇಕು. ಅಂತಹ ಶಿಕ್ಷಣ ನಿಮ್ಮ ಪಾಲಿಗೆ ಒದಗಿಬಂದು ನೀವೆಲ್ಲರೂ ಮಹಾಮಾನವರಾಗಿ ಎಂದು ಹಾರೈಸುತ್ತೇನೆ.

ನಾನು ಹಳ್ಳಿಯ ಸಾಮಾನ್ಯ ರೈತ ಕುಟುಂಬದಿಂದ ಬಂದ ವ್ಯಕ್ತಿ. ಈಗ ನಿಮಗೆ ಇರುವ ಕಲಿಕೆಯ ಅವಕಾಶ ನನ್ನಂತಹವನಿಗೆ ಇರಲಿಲ್ಲ. ಒಂದನೇ ತರಗತಿಯಿಂದಲೇ ಶಾಲೆಗೆ ಹೋಗಲಾಗದೆ ಮರಳ ಮೇಲೆ ಕೈಬೆರಳಗಳನ್ನೊತ್ತಿ ಅಕ್ಷರಾಭ್ಯಾಸ ಮಾಡಿ ನಾಲ್ಕನೇ ತರಗತಿಗೆ ನೇರವಾಗಿ ಸೇರಿದವನು ನಾನು. ಅಲ್ಲಿಂದ ಕಾನೂನು ವ್ಯಾಸಂಗ ಮುಗಿಸುವವರೆಗೆ ನನ್ನ ವಿದ್ಯಾರ್ಥಿ ಜೀವನ ಹೂವಿನ ಹಾದಿಯಾಗಿರಲಿಲ್ಲ. ಅಮಾಯಕರಾಗಿದ್ದ ಹೆತ್ತವರ ವಿರೋಧ, ಶೋಷಕರ ಅಡ್ಡಗಾಲು, ಹಣಕಾಸಿನ ಸಮಸ್ಯೆಗಳ ಜೊತೆ ಹೋರಾಡುತ್ತಲೇ ಬಂದವನು. ಕಠಿಣ ಶ್ರಮ ಮತ್ತು ಕಲಿಕೆಯ ಮೇಲೆ ಆಸಕ್ತಿ-ಶ್ರದ್ದೆಗಳಿದ್ದರೆ ಸಾಮಾನ್ಯ ಕುಟುಂಬದಿಂದ ಬಂದ ಒಬ್ಬ ಬಾಲಕ ಕೂಡಾ ಮುಂದೊಂದು ದಿನ ರಾಜ್ಯದ ಮುಖ್ಯಮಂತ್ರಿಯೂ ಆಗಬಹುದು ಎನ್ನುವುದಕ್ಕೆ ನಾನೇ ಸಾಕ್ಷಿ. ಇದೇ ರೀತಿ ನಿಮ್ಮ ಆಸಕ್ತಿಯ ಕ್ಷೇತ್ರಗಳಲ್ಲಿ ಉನ್ನತ ಸ್ಥಾನಗಳಿಗೇರಬೇಕೆಂದು ನನ್ನ ಆಸೆ.

ಇದೇ ಉದ್ದೇಶದಿಂದ ಕಳೆದ ಬಾರಿ ನಾನು ಮುಖ್ಯಮಂತ್ರಿಯಾಗಿದ್ದಾಗ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಧ್ಯಾಹ್ನದ ಬಿಸಿ ಊಟ, ಕ್ಷೀರಭಾಗ್ಯ, ವಿದ್ಯಾಸಿರಿ,ವಿದ್ಯಾರ್ಥಿ ವೇತನ ಶೂ ಮತ್ತು ಸಾಕ್ಸ್ ಮೊದಲಾದ ಯೋಜನೆಗಳನ್ನು ಜಾರಿಗೊಳಿಸಿದ್ದೆ. ಇವುಗಳಿಗೆ ಎದುರಾಗಿರುವ ಸಣ್ಣಪುಟ್ಟ ಅಡ್ಡಿ-ಆತಂಕಗಳನ್ನು ನಿವಾರಿಸಿ ಪುನರ್ ಚಾಲನೆ ನೀಡುವೆ.

ನೀವು ಪಡೆಯುವ ಶಿಕ್ಷಣ ನಿಮ್ಮನ್ನು ತಂದೆ-ತಾಯಿ ಹೆಮ್ಮೆ ಪಡುವಂತಹ ಮಕ್ಕಳನ್ನಾಗಿ ಮತ್ತು ಸಮಾಜ ಪ್ರೀತಿಸುವ ಜವಾಬ್ದಾರಿಯುತ ನಾಗರಿಕರನ್ನಾಗಿ ರೂಪಿಸಲಿ. ಮುಂದಿನ ಜನಾಂಗವಾಗಿರುವ ನಿಮ್ಮಿಂದ ರಾಜ್ಯದ ಸರ್ವಜನಾಂಗದ ಶಾಂತಿಯ ತೋಟ ಸದಾ ನಳನಳಿಸುತ್ತಾ ಇರಲಿ. ಪಠ್ಯಪುಸ್ತಕಗಳಿಗಷ್ಟೇ ನಿಮ್ಮ ಓದನ್ನು ಸೀಮಿತಗೊಳಿಸಬೇಡಿ.

ನಿಮಗೆಲ್ಲರಿಗೂ ಹೊಸ ಶೈಕ್ಷಣಿಕ ವರ್ಷಕ್ಕೆ ಮತ್ತೊಮ್ಮೆ ಸ್ವಾಗತ ಮತ್ತು ಶುಭಾಶಯಗಳು.

ನಿಮ್ಮೆಲ್ಲರ ಪ್ರೀತಿಯ ಮುಖ್ಯಮಂತ್ರಿ

ಸಿದ್ದರಾಮಯ್ಯ (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *