ಶಿರಸಿಯ ನೆಲಸಿರಿ- ಭೀಮಣ್ಣ ನಾಯ್ಕರಿಗೆ ಪತ್ರಕರ್ತರಿಂದ ಅಭಿನಂದನೆ

ಸಿದ್ದಾಪುರ
ತಾಲೂಕಿನ ಹಸರಗೋಡ ಗ್ರಾಪಂ ವ್ಯಾಪ್ತಿಯ ಶಮೇಮನೆಯಲ್ಲಿ ಸಿರಸಿಯ ನೆಲಸಿರಿ ರೈತ ಉತ್ಪಾದಕ ಕಂಪನಿಯ ಮೂಲಕ ನನ್ನ ಜಿಲ್ಲೆ ನನ್ನ ಉತ್ಪನ್ನ ಯೋಜನೆಯಲ್ಲಿ ಹಲಸು ಮತ್ತು ಬಾಳೆಯ ಸಂಸ್ಕರಣಾ ಘಟಕವನ್ನು ನಬಾರ್ಡನ ಪ್ರಧಾನ ವ್ಯವಸ್ಥಾಪಕ (ಸಿಜಿಎಂ) ಟಿ.ರಮೇಶ ಉದ್ಘಾಟಿಸಿ ಉತ್ಪನ್ನಗಳನ್ನು ವೀಕ್ಷಿಸಿದರು.


ಉದ್ಘಾಟಿಸಿ ಮಾತನಾಡಿದ ಟಿ.ರಮೇಶ ಅವರು ಕೌಶಲಗಳ ಮೂಲಕ ಉತ್ಪನ್ನ ಸಂಸ್ಕರಿಸಿದರೆ ಸಾಲದು ಅದಕ್ಕೆ ಸರಿಯಾದ ತರಬೇತಿ, ಮಾರ್ಗದರ್ಶನ ದೊರೆತಾಗ ಮಾತ್ರ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಇರುತ್ತದೆ.
ಮಹಿಳೆಯರು ತಮ್ಮಲ್ಲಿರುವ ಕೌಶಲವನ್ನು ಸಮರ್ಪಕವಾಗಿ ಉಪಯೋಗಿಸಿಕೊಳ್ಳುವುದಕ್ಕೆ ಇಂತಹ ಸಂಸ್ಕರಣ ಘಟಕ ಹೆಚ್ಚು ಉಪಯುಕ್ತವಾಗುತ್ತದೆ.ನಬಾರ್ಡ ಈ ರೀತಿಯ ಘಟಕಗಳಿಗೆ ಹೆಚ್ಚಿನ ಪ್ರೋತ್ಸಾಹವನ್ನು ಯಾವತ್ತೂ ನೀಡುವುದರೊಂದಿಗೆ ತರಬೇತಿಯನ್ನು ನೀಡುತ್ತದೆ ಎಂದು ಹೇಳಿದರು.


ನಬಾರ್ಡನ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕ ರೇಜಿಸ್ ಇಮ್ಯಾನ್ಯುಯಲ್, ಕದಂಬ ಮಾರ್ಕೆಟಿಂಗ್‌ನ ಉಪಾಧ್ಯಕ್ಷ ಎಂ.ವಿ.ಭಟ್ಟ ತಟ್ಟಿಕೈ, ನೆಲಸಿರಿ ಕಂಪನಿಯ ನಿರ್ದೇಶಕ ನಾರಾಯಣ ಹೆಗಡೆ ಗಡಿಕೈ, ಉತ್ತರ ಕನ್ನಡ ಸಾವಯವ ಒಕ್ಕೂಟದ ಅಧ್ಯಕ್ಷ ವಿಶ್ವೇಶ್ವರ ಭಟ್ಟ ಕೋಟೆಮನೆ ಇತರರಿದ್ದರು.
ಜಿ.ವಿ.ಹೆಗಡೆ ಹುಳಗೋಳ ಹಲಸಿನಬೆಳೆ ಕುರಿತು ಮಾಹಿತಿ ನೀಡಿದರು.
ಮಮತಾ ವಿನಾಯಕ ಭಟ್ಟ ಶಮೆಮನೆ ಇವರು ಶಮೆಮನೆಯಲ್ಲಿ ಮಹಿಳೆಯರು ಸಂಘಟನೆಯ ಮೂಲಕ ಯಾವ ರೀತಿ ನೆಲಸಿರಿ ಉತ್ಪಾದಕ ಕಂಪನಿಯ ಮೂಲಕ ಕಾರ್ಯನಿರ್ವಹಿಸುತ್ತಿದೆ ಎಂದು ಮಾಹಿತಿ ನೀಡಿದರು.
ಶಿರಸಿಯ ನೆಲಸಿರಿ ರೈತ ಉತ್ಪಾದಕ ಕಂಪನಿಯ ವ್ಯವಸ್ಥಾಪಕ ಮಂಜುನಾಥ ಹೆಗಡೆ ಕಾರ್ಯಕ್ರಮ ನಿರ್ವಹಿಸಿದರು.

ಶಿರಸಿ-ಸಿದ್ದಾಪುರ ಕ್ಷೇತ್ರದ ನೂತನ ಶಾಸಕರಾದ ಭೀಮಣ್ಣ ನಾಯ್ಕ ಅವರು ಇಂದು ಸಿದ್ದಾಪುರಕ್ಕೆ ಆಗಮಿಸಿದಾಗ ಅವರನ್ನು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಅಭಿನಂದಿಸಿ ಗೌರವಿಸಲಾಯಿತು. ಸಂಘದ ಅಧ್ಯಕ್ಷ ಗಂಗಾಧರ ಕೊಳಗಿ, ಕಾರ್ಯದರ್ಶಿ ರಮೇಶ ಹಾರ್ಸಿಮನೆ, ಉಪಾಧ್ಯಕ್ಷ ಯಶವಂತ ತ್ಯಾರ್ಸಿ, ಪದಾಧಿಕಾರಿಗಳಾದ ನಾಗರಾಜ ಭಟ್ಟ ಕೆಕ್ಕಾರ, ಗಣೇಶ ಭಟ್ಟ, ಶಿವಶಂಕರ ಕೋಲಶಿರ್ಸಿ, ಪತ್ರಕರ್ತರಾದ ನಾಗರಾಜ ನಾಯ್ಕ ಮಾಳ್ಕೋಡು, ದಿವಾಕರ ನಾಯ್ಕ, ಕನ್ನೇಶ ಕೋಲಶಿರ್ಸಿ ಇದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *