ಬಿ.ಜೆ.ಪಿ.ಯೊಂದಿಗೆ ಕುಮಾರಸ್ವಾಮಿ ರಾತ್ರಿ ದೋಸ್ತಿ ಬಹಿರಂಗ!

ಶತ್ರುವಿನ ಶತ್ರು- ಮಿತ್ರ: ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ- ಜೆಡಿಎಸ್ ಮೈತ್ರಿ ಅಸ್ತ್ರ!

: ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಬೆನ್ನಲ್ಲೇ ಮುಂಬರುವ ಚುನಾವಣೆಗಳನ್ನು ಎದುರಿಸಲು ಜೆಡಿಎಸ್ ಈಗಿನಿಂದಲೇ ತೆರೆಮರೆಯಲ್ಲಿ ಸಿದ್ಧತೆ ಆರಂಭಿಸಿದ್ದು, ಸೋಲಿನ ಸೇಡು ತೀರಿಸಿಕೊಳ್ಳಲು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯಿದೆ.

Hd kumaraswamy And narendra modi

ಬೆಂಗಳೂರು: ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಬೆನ್ನಲ್ಲೇ ಮುಂಬರುವ ಚುನಾವಣೆಗಳನ್ನು ಎದುರಿಸಲು ಜೆಡಿಎಸ್ ಈಗಿನಿಂದಲೇ ತೆರೆಮರೆಯಲ್ಲಿ ಸಿದ್ಧತೆ ಆರಂಭಿಸಿದ್ದು, ಸೋಲಿನ ಸೇಡು ತೀರಿಸಿಕೊಳ್ಳಲು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳ ಚುನಾವಣೆಗೆ ತಯಾರಿ ನಡೆಸುತ್ತಿರುವ ಜೆಡಿಎಸ್ ಸದ್ದಿಲ್ಲದೇ ಬಿಜೆಪಿ ಜೊತೆ ಮೈತ್ರಿಗೆ ಮುಂದಾಗಿದೆ ಎಂದು ಹೇಳಲಾಗುತ್ತಿದೆ.

ಬಿಬಿಎಂಪಿ ಮತ್ತು ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಯ ಫಲಿತಾಂಶದ ನಂತರ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

2024 ರ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿಯಾಗಿ ಹೋಗಲಿದೆಯೇ ಅಥವಾ ಸಮಾನ ಮನಸ್ಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುತ್ತದೆಯೇ ಎಂದು ನಿರ್ಣಯಿಸಲು ಈಗಲೇ ಸಾಧ್ಯವಿಲ್ಲ ಎಂದು ಜೆಡಿಎಸ್ ನಾಯಕರೊಬ್ಬರು ಸಮಾಜಮುಖಿ ಡಾಟ್‌ ನೆಟ್ ಗೆ ತಿಳಿಸಿದರು.

ಆದರೆ ಜೆಡಿಎಸ್‌ನ ಹಿರಿಯ ನಾಯಕ ಹಾಗೂ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಅವರು ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿದ್ದು, ಅವರು ಬಿಜೆಪಿಯ ಉನ್ನತ ನಾಯಕರೊಂದಿಗೆ ಮಾತುಕತೆ ನಡೆಸಿರುವ ಸಾಧ್ಯತೆಯಿದೆ ಎಂದು ಕೆಲವು ಬಲ್ಲ ಮೂಲಗಳು  ಹೇಳುತ್ತಿವೆ.

ಜೆಡಿಎಸ್ 2019 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿತ್ತು . ಎರಡೂ ಪಕ್ಷಗಳು ತಲಾ ಒಂದು ಸ್ಥಾನವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದವು – ಹಾಸನ (ಜೆಡಿಎಸ್) ಮತ್ತು ಬೆಂಗಳೂರು ಗ್ರಾಮಾಂತರ (ಕಾಂಗ್ರೆಸ್). ಅವರ ಜಾತ್ಯತೀತ ತಳಹದಿಯು ಒಂದೇ ಆಗಿರುವುದರಿಂದ ಸೋಲಿಗೆ ಕಾರಣವಾಗಿತ್ತು ಎನ್ನಲಾಗಿತ್ತು.

ಒಂದು ವೇಳೆ ಮೈತ್ರಿ ರಚನೆಯಾದ್ರೆ ಜೆಡಿಎಸ್ ಗೆಲ್ಲುತ್ತೆ ಅಂತ ಹೇಳುವ ಸುಮಾರು 5 ರಿಂದ 6 ಕ್ಷೇತ್ರಗಳನ್ನು ಬಿಟ್ಟುಕೊಡುವುದು. ಇನ್ನುಳಿದ ಕ್ಷೇತ್ರದಲ್ಲಿ ಸಂಪೂರ್ಣ ಬೆಂಬಲವನ್ನು ಬಿಜೆಪಿ ಕೇಳಬಹುದು,  ಪ್ರತ್ಯಕ್ಷ ಹಾಗೂ ಪರೋಕ್ಷ ಮೈತ್ರಿ ಮಾಡಿಕೊಂಡರೆ ಎರಡೂ ಪಕ್ಷಗಳಿಗೆ ಸ್ವಲ್ಪ ಮಟ್ಟಿಗೆ ಲಾಭವಾಗಬಹುದು ಎಂಬುದು ರಾಜಕೀಯ ಪಂಡಿತರ ಅಭಿಪ್ರಾಯ.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ  ಜೆಡಿಎಸ್ ಮತ್ತು ಬಿಜೆಪಿ ಒಟ್ಟಾಗಿ ಕೆಲಸ ಮಾಡುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ,  ಏತನ್ಮಧ್ಯೆ, ಬಿಜೆಪಿ ಇನ್ನೂ ವಿಧಾನಸಭೆಯಲ್ಲಿ ತನ್ನ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ.

ವಿಧಾನಸಭೆ ಅಧಿವೇಶನ ಆರಂಭಕ್ಕೂ ಮುನ್ನವೇ ನೇಮಕ ಮಾಡಲಾಗುವುದು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಇತ್ತೀಚೆಗೆ ಹೇಳಿದ್ದರು. ಜುಲೈ 3 ರಿಂದ ಬಜೆಟ್ ಅಧಿವೇಶನ ಪ್ರಾರಂಭವಾಗಲಿದೆ. ಜೆಡಿಎಸ್ ಮತ್ತು ಬಿಜೆಪಿ ಕೆಲವು ವಿಷಯಗಳಲ್ಲಿ ಸರ್ಕಾರವನ್ನು ಸಂಘಟಿಸಿ ಕೆಲಸ ಮಾಡಬಹುದು ಎನ್ನಲಾಗುತ್ತಿದೆ. (ಕಪ್ರಡಾ)‌

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *