ಶಿರಸಿಯ ಅಡಕೆ,ಸಾಗರದ ಅಪ್ಪೆಮಿಡಿ ನಂತರ ಈಗ ಅಂಕೋಲಾದ ಈಶಾಡು!

ಅಂಕೋಲಾ ಇಶಾಡು ಮಾವಿಗೆ ‘ಜಿಐ’ ಮಾನ್ಯತೆ!

ಅಂಕೋಲಾದ ಪ್ರಸಿದ್ಧ ಇಶಾಡು ಮಾವಿಗೆ ಜಿಐ ಟ್ಯಾಗ್ (ಭೌಗೋಳಿಕ ಗುರುತು) ಲಭ್ಯವಾಗಿದೆ.

ishad mango

ಕಾರವಾರ: ಅಂಕೋಲಾದ ಪ್ರಸಿದ್ಧ ಇಶಾಡು ಮಾವಿಗೆ ಜಿಐ ಟ್ಯಾಗ್ (ಭೌಗೋಳಿಕ ಗುರುತು) ಲಭ್ಯವಾಗಿದೆ.

https://imasdk.googleapis.com/js/core/bridge3.578.0_en.html#goog_2026330032

ಇದರೊಂದಿಗೆ ಅಲ್ಫೋನ್ಸೋ ಮಾವಿನ ಹಣ್ಣಿನಂತೆಯೇ ಅಂತರಾಷ್ಟ್ರೀಯ ಮನ್ನಣೆಯೊಂದಿಗೆ ಇಶಾಡು ಮಾವು ಕೂಡ ತನ್ನ ಪ್ರಯಾಣವನ್ನು ಆರಂಭಿಸಿದೆ.

ಹುಳಿಯನ್ನು ತಿರಸ್ಕರಿಸಿ ಸಿಹಿಯ ತಿರುಳನ್ನಷ್ಟೇ ಕವಚದೊಳಗೆ ತುಂಬಿಕೊಂಡಿರುವ ಅಂಕೋಲಾ ಇಶಾಡು ಹಣ್ಣಿನ ಸವಿಯನ್ನು ತಿಂದೇ ಅನುಭವಿಸಬೇಕು. ಹಸಿರು–ಹಳದಿ ಮಿಶ್ರಿತ ಬಣ್ಣ ಹೊದ್ದುಕೊಂಡ ಈ ಹಣ್ಣುಗಳನ್ನು ಹಾಲಕ್ಕಿ ಮಹಿಳೆಯರು ಬಿದಿರು ಬುಟ್ಟಿಯಲ್ಲಿಟ್ಟು ಮಾರುತ್ತಾರೆ.

ಐಷಾರಾಮಿ ಕಾರುಗಳಲ್ಲಿ ಹೆದ್ದಾರಿಯಲ್ಲಿ ಹೋಗುವವರೂ ಇಶಾಡಿನ ಸುವಾಸನೆಗೆ ಮಾರುಹೋಗಿ, ಬ್ರೇಕ್ ಹಾಕಿ, ಇಡೀ ಬುಟ್ಟಿಯ ಹಣ್ಣನ್ನು ಖರೀದಿಸಿ ಕಾರಿನಲ್ಲಿ ತುಂಬಿಕೊಂಡು ಹೋಗುವುದೂ ಉಂಟು.

ಹಣ್ಣಿಗೆ ಜಿಐ ಮಾನ್ಯತೆ ಲಭ್ಯವಾಗಿರುವ ಹಿನ್ನೆಲೆಯಲ್ಲಿ ಪ್ರಾದೇಶಿಕ ವಿಶೇಷತೆಯನ್ನು ಈ ಹಣ್ಣು ಜಗತ್ತಿಗೆ ವಿಸ್ತರಿಸಲಿದೆ. ಮರಕ್ಕೆ ಮಾನ್ಯತೆ ದೊರೆತಿರುವುದರಿಂದ ಮರಗಳನ್ನು ನೋಡುವ ರೀತಿ ಬದಲಾಗಲಿದೆ. ನಿರ್ಮಾಣದ ನೆಪದಲ್ಲಿ ಬರಿದಾಗುತ್ತಿರುವ ಕರಾವಳಿಯನ್ನು ಪರಿಸರಸ್ನೇಹಿಯಾಗಿ ಕಾಣಲು ಇದೊಂದು ಒಳ್ಳೆಯ ಅಸ್ತ್ರ ಆಗಬೇಕಿದೆ.

ಹಣ್ಣನ್ನು ಈ ಹಿಂದೆ ಡಬ್ಬಿಯಲ್ಲಿಟ್ಟು ರಫ್ತು ಮಾಡಲಾಗಿತ್ತು. ಹಣ್ಣಿಗೆ ಜಿಐ ಟ್ಯಾಗ್ ಲಭ್ಯವಾಗಿರುವ ಹಿನ್ನೆಲೆಯಲ್ಲಿ ವೈಭವ ಮರುಕಳಿಸುವ ಭರವಸೆಗಳಿವೆ ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಸತೀಶ್ ಕುಮಾರ್ ಅವರು ಹೇಳಿದ್ದಾರೆ.

ಅಂಕೋಲಾದ ಮಾತಾ ತೋಟಗಾರ್ಸ್ ಫಾರ್ಮರ್ಸ್ ಪ್ರೊಡ್ಯೂಸರ್ ಕಂಪನಿ (ಎಂಟಿಎಫ್‌ಪಿಸಿ) ಲಿಮಿಟೆಡ್ 2022ರ ಮಾರ್ಚ್ ತಿಂಗಳಿನಲ್ಲಿ ಅರ್ಜಿ ಸಲ್ಲಿಸಿತ್ತು. ಚೆನ್ನೈನಲ್ಲಿರುವ ಜಿಯೋ ಇಂಡಿಕೇಟರ್ ಸ್ಪೆಸೀಸ್’ನ ನಿರ್ದೇಶಾನಲಯಕ್ಕೂ ಅಗತ್ಯ ದಾಖಲೆಗಳನ್ನು ಸಲ್ಲಿಸಲಾಗಿತ್ತು. ಅವರು ಮತ್ತಷ್ಟು ದಾಖಲೆಗಳ ನೀಡುವಂತೆ ಸೂಚಿಸಿದ್ದರು. ದಾಖಲೆಗಳ ನೀಡಿದ ಬಳಿಕ ಅಂತಿಮವಾಗಿ ಹಣ್ಣಿಗೆ ಜಿಐ ಮಾನ್ಯತೆ ಲಭ್ಯವಾಗಿದೆ ಎಂದು ತಿಳಿಸಿದ್ದಾರೆ.

ಎಂಟಿಎಫ್‌ಪಿಸಿ ನಿರ್ದೇಶಕ ಮಾಧವ ಇಂದ್ರಗೌಡ ಮಾತನಾಡಿ, ಕಳೆದ 400 ವರ್ಷಗಳಿಂದ ಈ ಮಾವಿನ ತಳಿಯನ್ನು ಬೆಳೆಯಲಾಗುತ್ತಿದೆ. ಇದೀಗ ಹಣ್ಣಿಗೆ ಜಿಐ ಟ್ಯಾಗ್ ದೊರೆತಿದ್ದು, 300 ರೈತರ ಸಂಘಟನೆಯಾದ ಎಂಟಿಎಫ್‌ಪಿಸಿ ಈ ಸಸಿಗಳನ್ನು ಪ್ರಚಾರ ಮಾಡಲು ಮತ್ತು ಈ ವಿಶೇಷ ಮಾವಿನ ಕೃಷಿಯನ್ನು ಪ್ರೋತ್ಸಾಹಿಸಲು ನಿರ್ಧರಿಸಿದೆ ಎಂದು ಹೇಳಿದ್ದಾರೆ.

ಏನಿದು ಜಿಯೋ ಟ್ಯಾಗ್?
ದೇಶದ ಉತ್ಪನ್ನಗಳಿಗೆ ಜಾಗತಿಕ ಮನ್ನಣೆ ನೀಡಿ, ಅದರ ಮೌಲ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಒಂದು ಭಾಗ ಈ ಪ್ರಮಾಣಪತ್ರವನ್ನು ನೀಡುತ್ತದೆ.

ಪ್ರಮಾಣಪತ್ರ ನೀಡುವುದಕ್ಕೂ ಪೂರ್ವದಲ್ಲಿ ಸಾಕಷ್ಟು ಹಿನ್ನೆಲೆಗಳನ್ನು ಅಧ್ಯಯನ ಮಾಡಲಾಗುತ್ತದೆ. ಇದೂವರೆಗೆ ಕರ್ನಾಟಕದ ಕೆಲವೇ ಉತ್ಪನ್ನಗಳಿಗೆ ಮಾತ್ರ ಈ ಮಾನ್ಯತೆ ಲಭಿಸಿದೆ. ಶಿರಸಿಯ ಅಡಕೆಗೆ, ಸಾಗರದಲ್ಲಿ ಅಪ್ಪೆಮಿಡಿಗೆ ಜಿಯೋ ಟ್ಯಾಗಿಂಗ್ ಲಭ್ಯವಾಗಿದೆ. (ಕಪ್ರಡಾ)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *