ಶಿರಸಿಯ ಅಡಕೆ,ಸಾಗರದ ಅಪ್ಪೆಮಿಡಿ ನಂತರ ಈಗ ಅಂಕೋಲಾದ ಈಶಾಡು!

ಅಂಕೋಲಾ ಇಶಾಡು ಮಾವಿಗೆ ‘ಜಿಐ’ ಮಾನ್ಯತೆ!

ಅಂಕೋಲಾದ ಪ್ರಸಿದ್ಧ ಇಶಾಡು ಮಾವಿಗೆ ಜಿಐ ಟ್ಯಾಗ್ (ಭೌಗೋಳಿಕ ಗುರುತು) ಲಭ್ಯವಾಗಿದೆ.

ishad mango

ಕಾರವಾರ: ಅಂಕೋಲಾದ ಪ್ರಸಿದ್ಧ ಇಶಾಡು ಮಾವಿಗೆ ಜಿಐ ಟ್ಯಾಗ್ (ಭೌಗೋಳಿಕ ಗುರುತು) ಲಭ್ಯವಾಗಿದೆ.

https://imasdk.googleapis.com/js/core/bridge3.578.0_en.html#goog_2026330032

ಇದರೊಂದಿಗೆ ಅಲ್ಫೋನ್ಸೋ ಮಾವಿನ ಹಣ್ಣಿನಂತೆಯೇ ಅಂತರಾಷ್ಟ್ರೀಯ ಮನ್ನಣೆಯೊಂದಿಗೆ ಇಶಾಡು ಮಾವು ಕೂಡ ತನ್ನ ಪ್ರಯಾಣವನ್ನು ಆರಂಭಿಸಿದೆ.

ಹುಳಿಯನ್ನು ತಿರಸ್ಕರಿಸಿ ಸಿಹಿಯ ತಿರುಳನ್ನಷ್ಟೇ ಕವಚದೊಳಗೆ ತುಂಬಿಕೊಂಡಿರುವ ಅಂಕೋಲಾ ಇಶಾಡು ಹಣ್ಣಿನ ಸವಿಯನ್ನು ತಿಂದೇ ಅನುಭವಿಸಬೇಕು. ಹಸಿರು–ಹಳದಿ ಮಿಶ್ರಿತ ಬಣ್ಣ ಹೊದ್ದುಕೊಂಡ ಈ ಹಣ್ಣುಗಳನ್ನು ಹಾಲಕ್ಕಿ ಮಹಿಳೆಯರು ಬಿದಿರು ಬುಟ್ಟಿಯಲ್ಲಿಟ್ಟು ಮಾರುತ್ತಾರೆ.

ಐಷಾರಾಮಿ ಕಾರುಗಳಲ್ಲಿ ಹೆದ್ದಾರಿಯಲ್ಲಿ ಹೋಗುವವರೂ ಇಶಾಡಿನ ಸುವಾಸನೆಗೆ ಮಾರುಹೋಗಿ, ಬ್ರೇಕ್ ಹಾಕಿ, ಇಡೀ ಬುಟ್ಟಿಯ ಹಣ್ಣನ್ನು ಖರೀದಿಸಿ ಕಾರಿನಲ್ಲಿ ತುಂಬಿಕೊಂಡು ಹೋಗುವುದೂ ಉಂಟು.

ಹಣ್ಣಿಗೆ ಜಿಐ ಮಾನ್ಯತೆ ಲಭ್ಯವಾಗಿರುವ ಹಿನ್ನೆಲೆಯಲ್ಲಿ ಪ್ರಾದೇಶಿಕ ವಿಶೇಷತೆಯನ್ನು ಈ ಹಣ್ಣು ಜಗತ್ತಿಗೆ ವಿಸ್ತರಿಸಲಿದೆ. ಮರಕ್ಕೆ ಮಾನ್ಯತೆ ದೊರೆತಿರುವುದರಿಂದ ಮರಗಳನ್ನು ನೋಡುವ ರೀತಿ ಬದಲಾಗಲಿದೆ. ನಿರ್ಮಾಣದ ನೆಪದಲ್ಲಿ ಬರಿದಾಗುತ್ತಿರುವ ಕರಾವಳಿಯನ್ನು ಪರಿಸರಸ್ನೇಹಿಯಾಗಿ ಕಾಣಲು ಇದೊಂದು ಒಳ್ಳೆಯ ಅಸ್ತ್ರ ಆಗಬೇಕಿದೆ.

ಹಣ್ಣನ್ನು ಈ ಹಿಂದೆ ಡಬ್ಬಿಯಲ್ಲಿಟ್ಟು ರಫ್ತು ಮಾಡಲಾಗಿತ್ತು. ಹಣ್ಣಿಗೆ ಜಿಐ ಟ್ಯಾಗ್ ಲಭ್ಯವಾಗಿರುವ ಹಿನ್ನೆಲೆಯಲ್ಲಿ ವೈಭವ ಮರುಕಳಿಸುವ ಭರವಸೆಗಳಿವೆ ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಸತೀಶ್ ಕುಮಾರ್ ಅವರು ಹೇಳಿದ್ದಾರೆ.

ಅಂಕೋಲಾದ ಮಾತಾ ತೋಟಗಾರ್ಸ್ ಫಾರ್ಮರ್ಸ್ ಪ್ರೊಡ್ಯೂಸರ್ ಕಂಪನಿ (ಎಂಟಿಎಫ್‌ಪಿಸಿ) ಲಿಮಿಟೆಡ್ 2022ರ ಮಾರ್ಚ್ ತಿಂಗಳಿನಲ್ಲಿ ಅರ್ಜಿ ಸಲ್ಲಿಸಿತ್ತು. ಚೆನ್ನೈನಲ್ಲಿರುವ ಜಿಯೋ ಇಂಡಿಕೇಟರ್ ಸ್ಪೆಸೀಸ್’ನ ನಿರ್ದೇಶಾನಲಯಕ್ಕೂ ಅಗತ್ಯ ದಾಖಲೆಗಳನ್ನು ಸಲ್ಲಿಸಲಾಗಿತ್ತು. ಅವರು ಮತ್ತಷ್ಟು ದಾಖಲೆಗಳ ನೀಡುವಂತೆ ಸೂಚಿಸಿದ್ದರು. ದಾಖಲೆಗಳ ನೀಡಿದ ಬಳಿಕ ಅಂತಿಮವಾಗಿ ಹಣ್ಣಿಗೆ ಜಿಐ ಮಾನ್ಯತೆ ಲಭ್ಯವಾಗಿದೆ ಎಂದು ತಿಳಿಸಿದ್ದಾರೆ.

ಎಂಟಿಎಫ್‌ಪಿಸಿ ನಿರ್ದೇಶಕ ಮಾಧವ ಇಂದ್ರಗೌಡ ಮಾತನಾಡಿ, ಕಳೆದ 400 ವರ್ಷಗಳಿಂದ ಈ ಮಾವಿನ ತಳಿಯನ್ನು ಬೆಳೆಯಲಾಗುತ್ತಿದೆ. ಇದೀಗ ಹಣ್ಣಿಗೆ ಜಿಐ ಟ್ಯಾಗ್ ದೊರೆತಿದ್ದು, 300 ರೈತರ ಸಂಘಟನೆಯಾದ ಎಂಟಿಎಫ್‌ಪಿಸಿ ಈ ಸಸಿಗಳನ್ನು ಪ್ರಚಾರ ಮಾಡಲು ಮತ್ತು ಈ ವಿಶೇಷ ಮಾವಿನ ಕೃಷಿಯನ್ನು ಪ್ರೋತ್ಸಾಹಿಸಲು ನಿರ್ಧರಿಸಿದೆ ಎಂದು ಹೇಳಿದ್ದಾರೆ.

ಏನಿದು ಜಿಯೋ ಟ್ಯಾಗ್?
ದೇಶದ ಉತ್ಪನ್ನಗಳಿಗೆ ಜಾಗತಿಕ ಮನ್ನಣೆ ನೀಡಿ, ಅದರ ಮೌಲ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಒಂದು ಭಾಗ ಈ ಪ್ರಮಾಣಪತ್ರವನ್ನು ನೀಡುತ್ತದೆ.

ಪ್ರಮಾಣಪತ್ರ ನೀಡುವುದಕ್ಕೂ ಪೂರ್ವದಲ್ಲಿ ಸಾಕಷ್ಟು ಹಿನ್ನೆಲೆಗಳನ್ನು ಅಧ್ಯಯನ ಮಾಡಲಾಗುತ್ತದೆ. ಇದೂವರೆಗೆ ಕರ್ನಾಟಕದ ಕೆಲವೇ ಉತ್ಪನ್ನಗಳಿಗೆ ಮಾತ್ರ ಈ ಮಾನ್ಯತೆ ಲಭಿಸಿದೆ. ಶಿರಸಿಯ ಅಡಕೆಗೆ, ಸಾಗರದಲ್ಲಿ ಅಪ್ಪೆಮಿಡಿಗೆ ಜಿಯೋ ಟ್ಯಾಗಿಂಗ್ ಲಭ್ಯವಾಗಿದೆ. (ಕಪ್ರಡಾ)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

ಸಮಾಜಮುಖಿ ಡಾಟ್‌ ನೆಟ್‌ ಬ್ರೇಕಿಂಗ್……‌ ಅವರಗುಪ್ಪಾದ ಮಹಿಳೆ ಸೊರಬಾದಲ್ಲಿ ಆತ್ಮಹತ್ಯೆ

ಸೊರಬಾದ ವಸತಿನಿಲಯದ ಮುಖ್ಯ ಅಡುಗೆ ಸಿಬ್ಬಂದಿ ಮಹಿಳೆ ವಸತಿ ನಿಲಯದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಸಿದ್ಧಾಪುರದ ಅವರಗುಪ್ಪಾ ಮೂಲದ ನೇತ್ರಾವತಿ ನಾಯ್ಕ ಆತ್ಮಹತ್ಯೆಗೆ...

ಹೋರಾಟಗಳ ಮೂಲಕ ಸುಧಾರಣೆ ಇಂದಿನ ಅನಿವಾರ್ಯತೆ

ಬಹುಜನ ಚಳವಳಿಗಳಿಗೆ ನಾರಾಯಣ ಗುರುಗಳು ಮತ್ತು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಚಿಂತನೆಗಳು ಪೂರಕ ಎಂದಿರುವ ಯುವ ಚಿಂತಕ ಲೋಹಿತ್‌ ನಾಯ್ಕ ಈಗಲೂ ಸೈದ್ಧಾಂತಿಕ...

ಅಕ್ರಮ ಮದ್ಯ ಮಾರಾಟ, ಮದ್ಯ ಸೇವಿಸಿ ವಾಹನ ಚಾಲನೆ ನಿಯಂತ್ರಣಕ್ಕೆ ಭೀಮಣ್ಣ ಆದೇಶ

ಶಿರಸಿ-ಸಿದ್ಧಾಪುರಗಳಲ್ಲಿ ಸಾಮಾಜಿಕ ಪಿಡುಗಾಗಿ ಜನರ ಜನಜೀವನಕ್ಕೆ ತೊಂದರೆ ಕೊಡುತ್ತಿರುವ ಅಕ್ರಮ ಮದ್ಯ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವ ಬಗ್ಗೆ ಸ್ಥಳೀಯ ಶಾಸಕ ಭೀಮಣ್ಣ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *