ಶಿರಸಿಯ ಅಡಕೆ,ಸಾಗರದ ಅಪ್ಪೆಮಿಡಿ ನಂತರ ಈಗ ಅಂಕೋಲಾದ ಈಶಾಡು!

ಅಂಕೋಲಾ ಇಶಾಡು ಮಾವಿಗೆ ‘ಜಿಐ’ ಮಾನ್ಯತೆ!

ಅಂಕೋಲಾದ ಪ್ರಸಿದ್ಧ ಇಶಾಡು ಮಾವಿಗೆ ಜಿಐ ಟ್ಯಾಗ್ (ಭೌಗೋಳಿಕ ಗುರುತು) ಲಭ್ಯವಾಗಿದೆ.

ishad mango

ಕಾರವಾರ: ಅಂಕೋಲಾದ ಪ್ರಸಿದ್ಧ ಇಶಾಡು ಮಾವಿಗೆ ಜಿಐ ಟ್ಯಾಗ್ (ಭೌಗೋಳಿಕ ಗುರುತು) ಲಭ್ಯವಾಗಿದೆ.

https://imasdk.googleapis.com/js/core/bridge3.578.0_en.html#goog_2026330032

ಇದರೊಂದಿಗೆ ಅಲ್ಫೋನ್ಸೋ ಮಾವಿನ ಹಣ್ಣಿನಂತೆಯೇ ಅಂತರಾಷ್ಟ್ರೀಯ ಮನ್ನಣೆಯೊಂದಿಗೆ ಇಶಾಡು ಮಾವು ಕೂಡ ತನ್ನ ಪ್ರಯಾಣವನ್ನು ಆರಂಭಿಸಿದೆ.

ಹುಳಿಯನ್ನು ತಿರಸ್ಕರಿಸಿ ಸಿಹಿಯ ತಿರುಳನ್ನಷ್ಟೇ ಕವಚದೊಳಗೆ ತುಂಬಿಕೊಂಡಿರುವ ಅಂಕೋಲಾ ಇಶಾಡು ಹಣ್ಣಿನ ಸವಿಯನ್ನು ತಿಂದೇ ಅನುಭವಿಸಬೇಕು. ಹಸಿರು–ಹಳದಿ ಮಿಶ್ರಿತ ಬಣ್ಣ ಹೊದ್ದುಕೊಂಡ ಈ ಹಣ್ಣುಗಳನ್ನು ಹಾಲಕ್ಕಿ ಮಹಿಳೆಯರು ಬಿದಿರು ಬುಟ್ಟಿಯಲ್ಲಿಟ್ಟು ಮಾರುತ್ತಾರೆ.

ಐಷಾರಾಮಿ ಕಾರುಗಳಲ್ಲಿ ಹೆದ್ದಾರಿಯಲ್ಲಿ ಹೋಗುವವರೂ ಇಶಾಡಿನ ಸುವಾಸನೆಗೆ ಮಾರುಹೋಗಿ, ಬ್ರೇಕ್ ಹಾಕಿ, ಇಡೀ ಬುಟ್ಟಿಯ ಹಣ್ಣನ್ನು ಖರೀದಿಸಿ ಕಾರಿನಲ್ಲಿ ತುಂಬಿಕೊಂಡು ಹೋಗುವುದೂ ಉಂಟು.

ಹಣ್ಣಿಗೆ ಜಿಐ ಮಾನ್ಯತೆ ಲಭ್ಯವಾಗಿರುವ ಹಿನ್ನೆಲೆಯಲ್ಲಿ ಪ್ರಾದೇಶಿಕ ವಿಶೇಷತೆಯನ್ನು ಈ ಹಣ್ಣು ಜಗತ್ತಿಗೆ ವಿಸ್ತರಿಸಲಿದೆ. ಮರಕ್ಕೆ ಮಾನ್ಯತೆ ದೊರೆತಿರುವುದರಿಂದ ಮರಗಳನ್ನು ನೋಡುವ ರೀತಿ ಬದಲಾಗಲಿದೆ. ನಿರ್ಮಾಣದ ನೆಪದಲ್ಲಿ ಬರಿದಾಗುತ್ತಿರುವ ಕರಾವಳಿಯನ್ನು ಪರಿಸರಸ್ನೇಹಿಯಾಗಿ ಕಾಣಲು ಇದೊಂದು ಒಳ್ಳೆಯ ಅಸ್ತ್ರ ಆಗಬೇಕಿದೆ.

ಹಣ್ಣನ್ನು ಈ ಹಿಂದೆ ಡಬ್ಬಿಯಲ್ಲಿಟ್ಟು ರಫ್ತು ಮಾಡಲಾಗಿತ್ತು. ಹಣ್ಣಿಗೆ ಜಿಐ ಟ್ಯಾಗ್ ಲಭ್ಯವಾಗಿರುವ ಹಿನ್ನೆಲೆಯಲ್ಲಿ ವೈಭವ ಮರುಕಳಿಸುವ ಭರವಸೆಗಳಿವೆ ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಸತೀಶ್ ಕುಮಾರ್ ಅವರು ಹೇಳಿದ್ದಾರೆ.

ಅಂಕೋಲಾದ ಮಾತಾ ತೋಟಗಾರ್ಸ್ ಫಾರ್ಮರ್ಸ್ ಪ್ರೊಡ್ಯೂಸರ್ ಕಂಪನಿ (ಎಂಟಿಎಫ್‌ಪಿಸಿ) ಲಿಮಿಟೆಡ್ 2022ರ ಮಾರ್ಚ್ ತಿಂಗಳಿನಲ್ಲಿ ಅರ್ಜಿ ಸಲ್ಲಿಸಿತ್ತು. ಚೆನ್ನೈನಲ್ಲಿರುವ ಜಿಯೋ ಇಂಡಿಕೇಟರ್ ಸ್ಪೆಸೀಸ್’ನ ನಿರ್ದೇಶಾನಲಯಕ್ಕೂ ಅಗತ್ಯ ದಾಖಲೆಗಳನ್ನು ಸಲ್ಲಿಸಲಾಗಿತ್ತು. ಅವರು ಮತ್ತಷ್ಟು ದಾಖಲೆಗಳ ನೀಡುವಂತೆ ಸೂಚಿಸಿದ್ದರು. ದಾಖಲೆಗಳ ನೀಡಿದ ಬಳಿಕ ಅಂತಿಮವಾಗಿ ಹಣ್ಣಿಗೆ ಜಿಐ ಮಾನ್ಯತೆ ಲಭ್ಯವಾಗಿದೆ ಎಂದು ತಿಳಿಸಿದ್ದಾರೆ.

ಎಂಟಿಎಫ್‌ಪಿಸಿ ನಿರ್ದೇಶಕ ಮಾಧವ ಇಂದ್ರಗೌಡ ಮಾತನಾಡಿ, ಕಳೆದ 400 ವರ್ಷಗಳಿಂದ ಈ ಮಾವಿನ ತಳಿಯನ್ನು ಬೆಳೆಯಲಾಗುತ್ತಿದೆ. ಇದೀಗ ಹಣ್ಣಿಗೆ ಜಿಐ ಟ್ಯಾಗ್ ದೊರೆತಿದ್ದು, 300 ರೈತರ ಸಂಘಟನೆಯಾದ ಎಂಟಿಎಫ್‌ಪಿಸಿ ಈ ಸಸಿಗಳನ್ನು ಪ್ರಚಾರ ಮಾಡಲು ಮತ್ತು ಈ ವಿಶೇಷ ಮಾವಿನ ಕೃಷಿಯನ್ನು ಪ್ರೋತ್ಸಾಹಿಸಲು ನಿರ್ಧರಿಸಿದೆ ಎಂದು ಹೇಳಿದ್ದಾರೆ.

ಏನಿದು ಜಿಯೋ ಟ್ಯಾಗ್?
ದೇಶದ ಉತ್ಪನ್ನಗಳಿಗೆ ಜಾಗತಿಕ ಮನ್ನಣೆ ನೀಡಿ, ಅದರ ಮೌಲ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಒಂದು ಭಾಗ ಈ ಪ್ರಮಾಣಪತ್ರವನ್ನು ನೀಡುತ್ತದೆ.

ಪ್ರಮಾಣಪತ್ರ ನೀಡುವುದಕ್ಕೂ ಪೂರ್ವದಲ್ಲಿ ಸಾಕಷ್ಟು ಹಿನ್ನೆಲೆಗಳನ್ನು ಅಧ್ಯಯನ ಮಾಡಲಾಗುತ್ತದೆ. ಇದೂವರೆಗೆ ಕರ್ನಾಟಕದ ಕೆಲವೇ ಉತ್ಪನ್ನಗಳಿಗೆ ಮಾತ್ರ ಈ ಮಾನ್ಯತೆ ಲಭಿಸಿದೆ. ಶಿರಸಿಯ ಅಡಕೆಗೆ, ಸಾಗರದಲ್ಲಿ ಅಪ್ಪೆಮಿಡಿಗೆ ಜಿಯೋ ಟ್ಯಾಗಿಂಗ್ ಲಭ್ಯವಾಗಿದೆ. (ಕಪ್ರಡಾ)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *