ಎಪಿಎಂಸಿ ಮತ್ತು ಮತಾಂತರ ಕಾಯ್ದೆ ವಾಪಸ್ಸಿಗೆ ಸಂಪುಟ ನಿರ್ಧಾರ : ರೈತ ಸಂಘ ಸ್ವಾಗತ


ಹಿಂದಿನ ಬಿಜೆಪಿ ಸರ್ಕಾರ ತಂದಿದ್ದ ಎಪಿಎಂಸಿ ಮಾರುಕಟ್ಟೆಗಳನ್ನು ನಾಶ ಮಾಡುವ ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ಸಂವಿಧಾನಬದ್ದ ಧಾರ್ಮಿಕ ಸ್ವಾತಂತ್ರ‍್ಯ ನಿರಾಕರಿಸುವ ಮತಾಂತರ ನಿಷೇಧ ಕಾಯ್ದೆ ಯನ್ನು ವಾಪಸ್ಸು ಪಡೆಯಲು ನಿರ್ಧರಿಸಿರುವ ರಾಜ್ಯ ಸರಕಾರದ ಸಂಪುಟ ಸಭೆಯ ತೀರ್ಮಾನವನ್ನು ಕರ್ನಾಟಕ ಪ್ರಾಂತ ರೈತ ಸಂಘ (ಏPಖS) ಉತ್ತರ ಕನ್ನಡ ಜಿಲ್ಲಾ ಸಮಿತಿ ಸ್ವಾಗತಿಸಿದೆ.
ಇದೇ ರೀತಿ ಉಳಿದ ರೈತ ವಿರೋಧಿ ಕೃಷಿ ಕಾಯ್ದೆಗಳಾದ ಕರ್ನಾಟಕ ರಾಜ್ಯ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ೨೦೨೦, ಕರ್ನಾಟಕ ಜಾನುವಾರು ಸಂರಕ್ಷಣಾ ಹಾಗೂ ಹತ್ಯೆ ನಿಷೇಧ ಕಾಯ್ದೆ ೨೦೨೦, ಕರ್ನಾಟಕ ರಾಜ್ಯ ಭೂ ಸ್ವಾಧೀನ ಕಾಯ್ದೆ ೨೦೨೦ ಅನ್ನು ಕೂಡ ರದ್ದುಪಡಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ (ಏPಖS) ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ಈ ಬಗ್ಗೆ ಮಾಧ್ಯಮಪ್ರಕಟಣೆ ನೀಡಿರುವ ಸಂಘ


ರೈತಾಪಿ ಕೃಷಿ ನಾಶ ಮಾಡಿ, ಕಾರ್ಪೊರೇಟ್ ಕೃಷಿ ಉತ್ತೇಜಿಸುವ ಉದ್ದೇಶ ಸಾಧನೆಗೆ ತಂದಿದ್ದ ಕೇಂದ್ರ ಕೃಷಿ ಕಾಯ್ದೆಗಳು ರದ್ದಾದ ನಂತರವೂ ಅದೇ ಉದ್ದೇಶದ ರಾಜ್ಯ ಕೃಷಿ ಕಾಯ್ದೆಗಳು ಮುಂದುವರೆಸಿದ್ದನ್ನು ರಾಜ್ಯದ ರೈತರು ಪ್ರಬಲವಾಗಿ ವಿರೋಧಿಸಿದ್ದರು. ಕೃಷಿ ಬಿಕ್ಕಟ್ಟು ನ್ನು ತೀವ್ರಗೊಳಿಸುವ ,ರಾಜ್ಯದ ರೈತರಿಗೆ ಬೆಂಬಲ ಬೆಲೆ ನಿರಾಕರಿಸುವ ವ್ಯಾಪಾರಿಗಳ ಮರ್ಜಿಗೆ ರೈತರನ್ನು ದಯನೀಯವಾಗಿ ನೂಕುವ ಎಪಿಎಂಸಿ ತಿದ್ದುಪಡಿ ಕಾಯ್ದೆ ೨೦೨೦ ರದ್ದತಿ ನಿರ್ಧಾರ ರೈತ ಹೋರಾಟಕ್ಕೆ ಜಯವಾಗಿದೆ. ದುರ್ಬಲ ಗೊಂಡಿರುವ ಎಪಿಎಂಸಿಯನ್ನು ಬಲಪಡಿಸಲು, ರೈತ ಸ್ನೇಹಿಯಾಗಿಸಲು, ಎಪಿಎಂಸಿ ಸೆಸ್ ಮೂಲಕ ಸಂಗ್ರಹವಾಗುವ ಅವರ್ಥ ನಿಧಿಯನ್ನು ಸಮರ್ಥವಾಗಿ ರೈತರ ಹಿತ ರಕ್ಷಣೆಗೆ ಬಳಸಲು ಕರ್ನಾಟಕ ಪ್ರಾಂತ ರೈತ ಸಂಘ (ಏPಖS) ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತದೆ. ಎಂದು ತಿಳಿಸಿದ್ದಾರೆ.


ತನ್ನ ಪೂರ್ಣ ವ್ಯಾಪ್ತಿಗೆ ಎಪಿಎಂಸಿ ಸಮಿತಿಗಳ ಅಧಿಕಾರವನ್ನು ಪುನರ್ ಸ್ಥಾಪಿಸುವ ಈ ರದ್ದತಿ ಒಂದೇ ಎಪಿಎಂಸಿ ಬಲಪಡಿಸಲು ಸಾಕಾಗುವುದಿಲ್ಲ. ಉದಾರೀಕರಣ ನೀತಿಗಳ ಒತ್ತಡಕ್ಕೆ ತಂದಿರುವ ಖಾಸಗಿ ಕಂಪನಿಗಳ ಪರವಾದ ಈ ಹಿಂದಿನ ತಿದ್ದಪಡಿಗಳಾದ ಆನ್ ಲೈನ್ ಮಾರಾಟ, ಕೋಲ್ಡ್ ಸ್ಟೋರೇಜ್, ಹಣ್ಣು-ತರಕಾರಿ ಮಾರುಕಟ್ಟೆಯಲ್ಲಿ ಎಪಿಎಂಸಿಯನ್ನು ಬೈಪಾಸ್ ಮಾಡುವ ರೈತ ವಿರೋಧಿ ತಿದ್ದುಪಡಿಗಳು ಕೂಡ ರದ್ದಾಗಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ (ಏPಖS) ಉತ್ತರ ಕನ್ನಡ ಜಿಲ್ಲಾ ಸಮಿತಿ ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತದೆ ಎಂದು ಜಿಲ್ಲಾ ಸಮಿತಿ ಅಧ್ಯಕ್ಷ ಶಾಂತಾರಾಮ ನಾಯಕ ಮತ್ತು ಕಾರ್ಯದರ್ಶಿ ಶ್ಯಾಮನಾಥ ನಾಯ್ಕ ತಿಳಿಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

ಸಮಾಜಮುಖಿ ಡಾಟ್‌ ನೆಟ್‌ ಬ್ರೇಕಿಂಗ್……‌ ಅವರಗುಪ್ಪಾದ ಮಹಿಳೆ ಸೊರಬಾದಲ್ಲಿ ಆತ್ಮಹತ್ಯೆ

ಸೊರಬಾದ ವಸತಿನಿಲಯದ ಮುಖ್ಯ ಅಡುಗೆ ಸಿಬ್ಬಂದಿ ಮಹಿಳೆ ವಸತಿ ನಿಲಯದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಸಿದ್ಧಾಪುರದ ಅವರಗುಪ್ಪಾ ಮೂಲದ ನೇತ್ರಾವತಿ ನಾಯ್ಕ ಆತ್ಮಹತ್ಯೆಗೆ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *