

ಹಿಂದಿನ ಬಿಜೆಪಿ ಸರ್ಕಾರ ತಂದಿದ್ದ ಎಪಿಎಂಸಿ ಮಾರುಕಟ್ಟೆಗಳನ್ನು ನಾಶ ಮಾಡುವ ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ಸಂವಿಧಾನಬದ್ದ ಧಾರ್ಮಿಕ ಸ್ವಾತಂತ್ರ್ಯ ನಿರಾಕರಿಸುವ ಮತಾಂತರ ನಿಷೇಧ ಕಾಯ್ದೆ ಯನ್ನು ವಾಪಸ್ಸು ಪಡೆಯಲು ನಿರ್ಧರಿಸಿರುವ ರಾಜ್ಯ ಸರಕಾರದ ಸಂಪುಟ ಸಭೆಯ ತೀರ್ಮಾನವನ್ನು ಕರ್ನಾಟಕ ಪ್ರಾಂತ ರೈತ ಸಂಘ (ಏPಖS) ಉತ್ತರ ಕನ್ನಡ ಜಿಲ್ಲಾ ಸಮಿತಿ ಸ್ವಾಗತಿಸಿದೆ.
ಇದೇ ರೀತಿ ಉಳಿದ ರೈತ ವಿರೋಧಿ ಕೃಷಿ ಕಾಯ್ದೆಗಳಾದ ಕರ್ನಾಟಕ ರಾಜ್ಯ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ೨೦೨೦, ಕರ್ನಾಟಕ ಜಾನುವಾರು ಸಂರಕ್ಷಣಾ ಹಾಗೂ ಹತ್ಯೆ ನಿಷೇಧ ಕಾಯ್ದೆ ೨೦೨೦, ಕರ್ನಾಟಕ ರಾಜ್ಯ ಭೂ ಸ್ವಾಧೀನ ಕಾಯ್ದೆ ೨೦೨೦ ಅನ್ನು ಕೂಡ ರದ್ದುಪಡಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ (ಏPಖS) ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ಈ ಬಗ್ಗೆ ಮಾಧ್ಯಮಪ್ರಕಟಣೆ ನೀಡಿರುವ ಸಂಘ

ರೈತಾಪಿ ಕೃಷಿ ನಾಶ ಮಾಡಿ, ಕಾರ್ಪೊರೇಟ್ ಕೃಷಿ ಉತ್ತೇಜಿಸುವ ಉದ್ದೇಶ ಸಾಧನೆಗೆ ತಂದಿದ್ದ ಕೇಂದ್ರ ಕೃಷಿ ಕಾಯ್ದೆಗಳು ರದ್ದಾದ ನಂತರವೂ ಅದೇ ಉದ್ದೇಶದ ರಾಜ್ಯ ಕೃಷಿ ಕಾಯ್ದೆಗಳು ಮುಂದುವರೆಸಿದ್ದನ್ನು ರಾಜ್ಯದ ರೈತರು ಪ್ರಬಲವಾಗಿ ವಿರೋಧಿಸಿದ್ದರು. ಕೃಷಿ ಬಿಕ್ಕಟ್ಟು ನ್ನು ತೀವ್ರಗೊಳಿಸುವ ,ರಾಜ್ಯದ ರೈತರಿಗೆ ಬೆಂಬಲ ಬೆಲೆ ನಿರಾಕರಿಸುವ ವ್ಯಾಪಾರಿಗಳ ಮರ್ಜಿಗೆ ರೈತರನ್ನು ದಯನೀಯವಾಗಿ ನೂಕುವ ಎಪಿಎಂಸಿ ತಿದ್ದುಪಡಿ ಕಾಯ್ದೆ ೨೦೨೦ ರದ್ದತಿ ನಿರ್ಧಾರ ರೈತ ಹೋರಾಟಕ್ಕೆ ಜಯವಾಗಿದೆ. ದುರ್ಬಲ ಗೊಂಡಿರುವ ಎಪಿಎಂಸಿಯನ್ನು ಬಲಪಡಿಸಲು, ರೈತ ಸ್ನೇಹಿಯಾಗಿಸಲು, ಎಪಿಎಂಸಿ ಸೆಸ್ ಮೂಲಕ ಸಂಗ್ರಹವಾಗುವ ಅವರ್ಥ ನಿಧಿಯನ್ನು ಸಮರ್ಥವಾಗಿ ರೈತರ ಹಿತ ರಕ್ಷಣೆಗೆ ಬಳಸಲು ಕರ್ನಾಟಕ ಪ್ರಾಂತ ರೈತ ಸಂಘ (ಏPಖS) ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತದೆ. ಎಂದು ತಿಳಿಸಿದ್ದಾರೆ.
ತನ್ನ ಪೂರ್ಣ ವ್ಯಾಪ್ತಿಗೆ ಎಪಿಎಂಸಿ ಸಮಿತಿಗಳ ಅಧಿಕಾರವನ್ನು ಪುನರ್ ಸ್ಥಾಪಿಸುವ ಈ ರದ್ದತಿ ಒಂದೇ ಎಪಿಎಂಸಿ ಬಲಪಡಿಸಲು ಸಾಕಾಗುವುದಿಲ್ಲ. ಉದಾರೀಕರಣ ನೀತಿಗಳ ಒತ್ತಡಕ್ಕೆ ತಂದಿರುವ ಖಾಸಗಿ ಕಂಪನಿಗಳ ಪರವಾದ ಈ ಹಿಂದಿನ ತಿದ್ದಪಡಿಗಳಾದ ಆನ್ ಲೈನ್ ಮಾರಾಟ, ಕೋಲ್ಡ್ ಸ್ಟೋರೇಜ್, ಹಣ್ಣು-ತರಕಾರಿ ಮಾರುಕಟ್ಟೆಯಲ್ಲಿ ಎಪಿಎಂಸಿಯನ್ನು ಬೈಪಾಸ್ ಮಾಡುವ ರೈತ ವಿರೋಧಿ ತಿದ್ದುಪಡಿಗಳು ಕೂಡ ರದ್ದಾಗಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ (ಏPಖS) ಉತ್ತರ ಕನ್ನಡ ಜಿಲ್ಲಾ ಸಮಿತಿ ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತದೆ ಎಂದು ಜಿಲ್ಲಾ ಸಮಿತಿ ಅಧ್ಯಕ್ಷ ಶಾಂತಾರಾಮ ನಾಯಕ ಮತ್ತು ಕಾರ್ಯದರ್ಶಿ ಶ್ಯಾಮನಾಥ ನಾಯ್ಕ ತಿಳಿಸಿದ್ದಾರೆ.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
