ನಟ ಸುದೀಪ್‌ & ಬ್ರಾಹ್ಮಣರ ವಿರುದ್ಧ ಮಾತನಾಡಿದರೆ…ರಾಜಣ್ಣ!

ಯಾವ ಬ್ರಾಹ್ಮಣರು ಒಂದು ರೂಪಾಯಿ ಕೊಟ್ಟು ಹೂವು, ಊದಿನಕಡ್ಡಿ ತರೋದಿಲ್ಲ: ಕೆ.ಎನ್ ರಾಜಣ್ಣ

ಯಾವ ಬ್ರಾಹ್ಮಣರು ಕೂಡ ಒಂದು ರೂಪಾಯಿ ಕೊಟ್ಟು ಊದಿನಕಡ್ಡಿ ತರೋದಿಲ್ಲ, ಹಚ್ಚೋದಿಲ್ಲ ಎಂದು  ಸಹಕಾರ ಸಚಿವ ಕೆ.ಎನ್‌. ರಾಜಣ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

K N Rajanna

ದಾವಣಗೆರೆ: ಯಾವ ಬ್ರಾಹ್ಮಣರು ಕೂಡ ಒಂದು ರೂಪಾಯಿ ಕೊಟ್ಟು ಊದಿನಕಡ್ಡಿ ತರೋದಿಲ್ಲ, ಹಚ್ಚೋದಿಲ್ಲ ಎಂದು  ಸಹಕಾರ ಸಚಿವ ಕೆ.ಎನ್‌. ರಾಜಣ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ದಾವಣಗೆರೆ ಜಿಲ್ಲೆ, ಹರಿಹರ ತಾಲೂಕಿನ ರಾಜನಹಳ್ಳಿ‌ ವಾಲ್ಮೀಕಿ ಪೀಠದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಯಾರನ್ನೂ ಮೇಲ್ವರ್ಗದವರೆಂದು ಕರೆಯಬಾರದು, ಹಾಗೆ ಕರೆದರೆ ನಾವು ಕೆಳವರ್ಗದವರು ಎಂದಾಗುತ್ತದೆ. ನಾವೇನು ಕೆಳವರ್ಗದವರಾ ಎಂಬಿತ್ಯಾದಿ ವ್ಯಾಖ್ಯಾನಗಳನ್ನು ಮಾಡಿದ ಅವರು ಈಗಿನ ಸಾಮಾಜಿಕ ಸ್ಥಿತಿಗತಿಗಳನ್ನು ವಿವರಿಸುತ್ತಾ ಮೇಲಿನ ಮಾತನ್ನು ಹೇಳಿದರು.

https://imasdk.googleapis.com/js/core/bridge3.578.0_en.html#goog_1395883958

ಬ್ರಾಹ್ಮಣರು ಈಗ ಹೋಮ ಹವನ ಕಡಿಮೆ ಮಾಡಿದ್ದಾರೆ. ಆದರೆ ನಾವೇ ಶೂದ್ರರೇ ಹೆಚ್ಚು ಹೋಮ, ಹವನ ಮಾಡುತ್ತಿದ್ದೇವೆ. . ಅವರು ಒಂದು ರೂಪಾಯಿ ಖರ್ಚು ಮಾಡಿ ಹೂವ, ಊದುಬತ್ತಿ ತರಲ್ಲ, ಬೇರೆಯವರು ತಂದಿದ್ದರಲ್ಲಿ ಪೂಜೆ ಮಾಡ್ತಾರೆ, ಹೀಗೆ ಹೇಳಿದರೆ ನಾನು ಬ್ರಾಹ್ಮಣರ ವಿರೋಧಿ ಅಂತ ಅಲ್ಲ, ಇದು ನಾನು ಹೇಳಿದ್ದಲ್ಲ ನನ್ನ ಸ್ನೇಹಿತರು ಹೇಳಿದ್ದು ಎಂದರು.

ನಾಯಕ ಸಮುದಾಯವರು ಈಗ ಡಿಸಿಎಂ ಆಗಬೇಕು ಮುಂದೆ ಸಿಎಂ ಆಗಬೇಕು. ನಾಯಕ ಸಮುದಾಯದಲ್ಲಿ ಸಿಎಂ ಆಗೋ ಅರ್ಹತೆ ಇರೋದು ಸತೀಶ್ ಜಾರಕಿಹೊಳಿಗೆ ಇದೆ. ಮುಂದಿನ ದಿನಗಳಲ್ಲಿ ನಮ್ಮ ಸಮುದಾಯ ವ್ಯಕ್ತಿ ಸಿಎಂ ಆಗಬೇಕು ಎಂದು ರಾಜಣ್ಣ ಹೇಳಿದರು.

ಕಿಚ್ಚ ಸುದೀಪ್ ಅವರು ನನ್ನ ವಿರುದ್ಧವೇ ಭಾಷಣ ಮಾಡಿದ್ದಾರೆ. ಸಾಮಾನ್ಯ ಕ್ಷೇತ್ರದಲ್ಲಿ ಪ್ರಚಾರ ಮಾಡಿದ್ದರೆ ಸುಮ್ಮನಾಗಬಹುದಿತ್ತು, ಆದರೆ ಪರಿಶಿಷ್ಠ ಪಂಗಡಕ್ಕೆ ಮೀಸಲಾದ ಕ್ಷೇತ್ರದಲ್ಲಿಯೂ ಅವರು ಪ್ರಚಾರ ಮಾಡಿದ್ದು ನೋವಾಗಿದೆ. ಒಂದೇ ಸಮುದಾಯದ ಇಬ್ಬರು ಸ್ಪರ್ಧೆ ಮಾಡಿದಾಗ ಒಬ್ಬರ ಪರವಾಗಿ ನಿಂತು ಪ್ರಚಾರ ಮಾಡಿದರು. ಇದರಿಂದ ನಮಗೆಲ್ಲಾ ಬೇಸರವಾಗಿದೆ” ಎಂದರು.

ಕೆಎನ್ ರಾಜಣ್ಣ ಮತ್ತು ಸುದೀಪ್ ಒಂದೇ ಸಮುದಾಯದವಾಗಿದ್ದು, ತಮ್ಮ ಕ್ಷೇತ್ರದಲ್ಲಿ ತಮ್ಮ ವಿರುದ್ಧವೇ ಸುದೀಪ್ ಪ್ರಚಾರ ಮಾಡಿದ್ದು ಸಚಿವ ಕೆ.ಎನ್. ರಾಜಣ್ಣ ಅವರ ಬೇಸರಕ್ಕೆ ಕಾರಣವಾಗಿದೆ. “ಇಬ್ಬರೂ ಅಭ್ಯರ್ಥಿಗಳು ಒಂದೇ ಸಮುದಾಯದವರು ಸ್ಪರ್ಧೆ ಮಾಡಿದಾಗ, ನಮ್ಮ ವಿರುದ್ಧ ಸ್ಪರ್ಧೆ ಮಾಡಿದ್ದಕ್ಕೆ ಬೇಸರವಾಗಿದೆ. ಇನ್ನು ಮುಂದೆ ಅರ್ಥ ಮಾಡಿಕೊಂಡು ಮುಂದುವರೆಯಲಿ” ಎಂದು ಸಲಹೆ ನೀಡಿದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *