ನಟ ಸುದೀಪ್‌ & ಬ್ರಾಹ್ಮಣರ ವಿರುದ್ಧ ಮಾತನಾಡಿದರೆ…ರಾಜಣ್ಣ!

ಯಾವ ಬ್ರಾಹ್ಮಣರು ಒಂದು ರೂಪಾಯಿ ಕೊಟ್ಟು ಹೂವು, ಊದಿನಕಡ್ಡಿ ತರೋದಿಲ್ಲ: ಕೆ.ಎನ್ ರಾಜಣ್ಣ

ಯಾವ ಬ್ರಾಹ್ಮಣರು ಕೂಡ ಒಂದು ರೂಪಾಯಿ ಕೊಟ್ಟು ಊದಿನಕಡ್ಡಿ ತರೋದಿಲ್ಲ, ಹಚ್ಚೋದಿಲ್ಲ ಎಂದು  ಸಹಕಾರ ಸಚಿವ ಕೆ.ಎನ್‌. ರಾಜಣ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

K N Rajanna

ದಾವಣಗೆರೆ: ಯಾವ ಬ್ರಾಹ್ಮಣರು ಕೂಡ ಒಂದು ರೂಪಾಯಿ ಕೊಟ್ಟು ಊದಿನಕಡ್ಡಿ ತರೋದಿಲ್ಲ, ಹಚ್ಚೋದಿಲ್ಲ ಎಂದು  ಸಹಕಾರ ಸಚಿವ ಕೆ.ಎನ್‌. ರಾಜಣ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ದಾವಣಗೆರೆ ಜಿಲ್ಲೆ, ಹರಿಹರ ತಾಲೂಕಿನ ರಾಜನಹಳ್ಳಿ‌ ವಾಲ್ಮೀಕಿ ಪೀಠದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಯಾರನ್ನೂ ಮೇಲ್ವರ್ಗದವರೆಂದು ಕರೆಯಬಾರದು, ಹಾಗೆ ಕರೆದರೆ ನಾವು ಕೆಳವರ್ಗದವರು ಎಂದಾಗುತ್ತದೆ. ನಾವೇನು ಕೆಳವರ್ಗದವರಾ ಎಂಬಿತ್ಯಾದಿ ವ್ಯಾಖ್ಯಾನಗಳನ್ನು ಮಾಡಿದ ಅವರು ಈಗಿನ ಸಾಮಾಜಿಕ ಸ್ಥಿತಿಗತಿಗಳನ್ನು ವಿವರಿಸುತ್ತಾ ಮೇಲಿನ ಮಾತನ್ನು ಹೇಳಿದರು.

https://imasdk.googleapis.com/js/core/bridge3.578.0_en.html#goog_1395883958

ಬ್ರಾಹ್ಮಣರು ಈಗ ಹೋಮ ಹವನ ಕಡಿಮೆ ಮಾಡಿದ್ದಾರೆ. ಆದರೆ ನಾವೇ ಶೂದ್ರರೇ ಹೆಚ್ಚು ಹೋಮ, ಹವನ ಮಾಡುತ್ತಿದ್ದೇವೆ. . ಅವರು ಒಂದು ರೂಪಾಯಿ ಖರ್ಚು ಮಾಡಿ ಹೂವ, ಊದುಬತ್ತಿ ತರಲ್ಲ, ಬೇರೆಯವರು ತಂದಿದ್ದರಲ್ಲಿ ಪೂಜೆ ಮಾಡ್ತಾರೆ, ಹೀಗೆ ಹೇಳಿದರೆ ನಾನು ಬ್ರಾಹ್ಮಣರ ವಿರೋಧಿ ಅಂತ ಅಲ್ಲ, ಇದು ನಾನು ಹೇಳಿದ್ದಲ್ಲ ನನ್ನ ಸ್ನೇಹಿತರು ಹೇಳಿದ್ದು ಎಂದರು.

ನಾಯಕ ಸಮುದಾಯವರು ಈಗ ಡಿಸಿಎಂ ಆಗಬೇಕು ಮುಂದೆ ಸಿಎಂ ಆಗಬೇಕು. ನಾಯಕ ಸಮುದಾಯದಲ್ಲಿ ಸಿಎಂ ಆಗೋ ಅರ್ಹತೆ ಇರೋದು ಸತೀಶ್ ಜಾರಕಿಹೊಳಿಗೆ ಇದೆ. ಮುಂದಿನ ದಿನಗಳಲ್ಲಿ ನಮ್ಮ ಸಮುದಾಯ ವ್ಯಕ್ತಿ ಸಿಎಂ ಆಗಬೇಕು ಎಂದು ರಾಜಣ್ಣ ಹೇಳಿದರು.

ಕಿಚ್ಚ ಸುದೀಪ್ ಅವರು ನನ್ನ ವಿರುದ್ಧವೇ ಭಾಷಣ ಮಾಡಿದ್ದಾರೆ. ಸಾಮಾನ್ಯ ಕ್ಷೇತ್ರದಲ್ಲಿ ಪ್ರಚಾರ ಮಾಡಿದ್ದರೆ ಸುಮ್ಮನಾಗಬಹುದಿತ್ತು, ಆದರೆ ಪರಿಶಿಷ್ಠ ಪಂಗಡಕ್ಕೆ ಮೀಸಲಾದ ಕ್ಷೇತ್ರದಲ್ಲಿಯೂ ಅವರು ಪ್ರಚಾರ ಮಾಡಿದ್ದು ನೋವಾಗಿದೆ. ಒಂದೇ ಸಮುದಾಯದ ಇಬ್ಬರು ಸ್ಪರ್ಧೆ ಮಾಡಿದಾಗ ಒಬ್ಬರ ಪರವಾಗಿ ನಿಂತು ಪ್ರಚಾರ ಮಾಡಿದರು. ಇದರಿಂದ ನಮಗೆಲ್ಲಾ ಬೇಸರವಾಗಿದೆ” ಎಂದರು.

ಕೆಎನ್ ರಾಜಣ್ಣ ಮತ್ತು ಸುದೀಪ್ ಒಂದೇ ಸಮುದಾಯದವಾಗಿದ್ದು, ತಮ್ಮ ಕ್ಷೇತ್ರದಲ್ಲಿ ತಮ್ಮ ವಿರುದ್ಧವೇ ಸುದೀಪ್ ಪ್ರಚಾರ ಮಾಡಿದ್ದು ಸಚಿವ ಕೆ.ಎನ್. ರಾಜಣ್ಣ ಅವರ ಬೇಸರಕ್ಕೆ ಕಾರಣವಾಗಿದೆ. “ಇಬ್ಬರೂ ಅಭ್ಯರ್ಥಿಗಳು ಒಂದೇ ಸಮುದಾಯದವರು ಸ್ಪರ್ಧೆ ಮಾಡಿದಾಗ, ನಮ್ಮ ವಿರುದ್ಧ ಸ್ಪರ್ಧೆ ಮಾಡಿದ್ದಕ್ಕೆ ಬೇಸರವಾಗಿದೆ. ಇನ್ನು ಮುಂದೆ ಅರ್ಥ ಮಾಡಿಕೊಂಡು ಮುಂದುವರೆಯಲಿ” ಎಂದು ಸಲಹೆ ನೀಡಿದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *