ಸಿದ್ಧಾಪುರಕ್ಕೂ ಕಾಲಿಟ್ಟ ಆನ್ಲೈನ್‌ ಸೆಕ್ಸ್!‌ ಪರರಾಜ್ಯದ ಹುಡುಗಿಯರಿಗೆ ಪಡ್ಡೆಗಳೇ ಟಾರ್ಗೆಟ್!!

ಸಭ್ಯ-ಸುಸಂಸ್ಕೃತರ ಊರಾದ ಸಿದ್ಧಾಪುರದಲ್ಲಿ ಹೊರರಾಜ್ಯದ ವಿದ್ಯಾರ್ಥಿನಿಯರು ಪಡ್ಡೆಗಳನ್ನು ಗುರಿಯಾಗಿಸಿ ಹಣ ಮಾಡುವ ದಂಧೆಗಿಳಿದಿರುವ ಬಗ್ಗೆ ಗಲ್ಲಿ ಚರ್ಚೆ ಪ್ರಾರಂಭವಾಗಿದೆ.

ನಗರದ ಹೊರವಲಯದ ಕಾಲೇಜಿನಲ್ಲಿ ಕಲಿಯುತ್ತಿರುವ ಹೊರರಾಜ್ಯದ ವಿದ್ಯಾರ್ಥಿನಿಯರು ತಮ್ಮ ಖಾಸಗಿ ಜಾಲದ ಮೂಲಕ ಪಡ್ಡೆಗಳನ್ನು ಆಕರ್ಷಿಸುತಿದ್ದು ಹಣದ ಆಸೆಗಾಗಿ ಪಡ್ಡೆಗಳನ್ನು ಖೆಡ್ಡಾಕ್ಕೆ ಕೆಡುವುತ್ತಿರುವ ಬಗ್ಗೆ ಜನಮಾನಸದಲ್ಲಿ ಆತಂಕ ಶುರುವಾಗಿದೆ.

ತಮ್ಮ ಆಪ್ತರು, ಖಾಸಗಿ ಸಂಪರ್ಕಗಳ ಮೂಲಕ ಮೊಬೈಲ್‌ ನಂಬರ್‌ ಸಂಗ್ರಹಿಸಿ ಕರೆಮಾಡುವ ಪಡ್ಡೆಗಳಿಗೆ ವಿಡಿಯೋ ಮೂಲಕ ಲೈಂಗಿಕ ಆಮಿಷ ಒಡ್ಡುವ ಕೆಲವು ವಿದ್ಯಾರ್ಥಿನಿಯರು ಇದನ್ನೇ ಬಳಸಿಕೊಂಡು ಹಣಕ್ಕಾಗಿ ಬ್ಲ್ಯಾಕ್‌ ಮೇಲ್‌ ಮಾಡುತ್ತಿರುವ ಬಗ್ಗೆ ತಾಲೂಕಿನಾದ್ಯಂತ ಗುಸುಗುಸು ಪ್ರಾರಂಭವಾಗಿದೆ.

ಒಂದೆರಡು ಪ್ರಕರಣಗಳಲ್ಲಿ ಹೊರರಾಜ್ಯದ ಸುಂದರ ಹುಡುಗಿಯರು ಪಡ್ಡೆಗಳಿಗೆ ತಮ್ಮ ಮೊಬೈಲ್‌ ಸಂಪರ್ಕ ಸಂಖ್ಯೆ ಕೊಟ್ಟು ಹುಡುಗರ ಕುತೂಹಲ ತಣಿಸಿದರು. ಈ ಗುಪ್ತ ಸುದ್ದಿ ಪಿಸುಮಾತಾಗಿ ಅನೇಕರನ್ನು ತಲುಪಿ ಶಿರಸಿ ರಸ್ತೆಯ ಹೊರ ರಾಜ್ಯದ ಹುಡುಗಿಯರು ಹಣಕ್ಕಾಗಿ ಎಲ್ಲವನ್ನೂ ಕೊಡುತ್ತಾರೆ ಎನ್ನುವುದು ಗುಲ್ಲಾಯಿತು. ಈ ಗುಟ್ಟು-ಗುಲ್ಲಿನ ವಿಚಾರಗಳೆಲ್ಲಾ ಮೋಬೈಲ್‌ ಗಳಲ್ಲಿ ಹರಿದಾಡಿ ಈಗ ಇದು ಬೀದಿ ಚರ್ಚೆಯ ವಿಷಯವಾಗಿದೆ.

ಈ ಬಗ್ಗೆ ಕಾಲೇಜು, ಪೊಲೀಸರವರೆಗೂ ಸುದ್ದಿ ತಲುಪಿದ್ದರೂ ಇದರ ಮೇಲೆ ಕ್ರಮ ಜರುಗಿಸಿದ ಮಾಹಿತಿ ಇಲ್ಲ.

ಹಣ, ಸೆಕ್ಸು,ಸುಖಕ್ಕಾಗಿ ಏನೆಲ್ಲಾ ನಡೆಯುತ್ತಿರುವ ಕಾಲದಲ್ಲಿ ನಮ್ಮೂರಲ್ಲೊಂದು ಇಂಥದ್ದೆಲ್ಲಾ ಇಲ್ಲ ಎಂದು ಬೀಗುತಿದ್ದ ಜನತೆ ಈ ವಿಚಾರ ತಿಳಿದು ಆಶ್ಚರ್ಯ ಚಕಿತರಾಗಿದ್ದಾರೆ. ಈ ದಂಧೆ,ಹಣದ ವಹಿವಾಹಿಟಿನ ಅನೈತಿಕ ಆನ್‌ ಲೈನ್‌ ವ್ಯವಹಾರ ನಿಲ್ಲದಿದ್ದರೆ ದೊಡ್ಡ ಅಪಾಯ ಎನ್ನುವ ಹಿನ್ನೆಲೆಯಲ್ಲಿ ಸಮಾಜಮುಖಿ ಡಾಟ್‌ ನೆಟ್‌ ಈ ಸಾಮಾಜಿಕ ಕಾಳಜಿ ಮತ್ತು ಜಾಗೃತಿಯ ಬದ್ಧತೆಯಿಂದಾಗಿ ಈ ವರದಿ ಪ್ರಕಟಿಸುತ್ತಿದೆ. ಈ ಬಗ್ಗೆ ಎಲ್ಲಾ ಮಾಹಿತಿ,ದಾಖಲೆಗಳನ್ನು ಸಂಗ್ರಹಿಸಿರುವ ಸಮಾಜಮುಖಿ ಡಾಟ್‌ ನೆಟ್‌ ಅವುಗಳನ್ನು ಸಾಮದಾಯಿಕಹಿತಾಸಕ್ತಿ,ಗುಣಮಟ್ಟಗಳ ಹಿನ್ನೆಲೆಯಲ್ಲಿ ಗುಪ್ತವಾಗಿಟ್ಟಿದೆ.

ಈ ಪ್ರಕರಣದ ವ್ಯಕ್ತಿ ಸಿದ್ಧಾಪುರದವರಾದರೂ ಮಹಿಳೆ ಇಲ್ಲಿಗೆ ಸಂಬಂಧಿಸಿದವರಲ್ಲ ಈ ವೈರಲ್‌ ವಿಡಿಯೋ ವಿಚಾರವನ್ನು ಕೋಲಶಿರ್ಸಿ ಗ್ರಾ.ಪಂ. ವ್ಯಾಪ್ತಿಯ ಪ್ರತಿಷ್ಠಿತ ಕಾಲೇಜಿನ ವಿಷಯ ಎಂದು ಅಪಪ್ರಚಾರ ಮಾಡಲಾಗುತ್ತಿದೆ. ವಾಸ್ತವದಲ್ಲಿ ಈ ಪ್ರಕರಣ ಮತ್ತು ಯಾವ ಕಾಲೇಜಿಗೂ ಯಾವ ಸಂಬಂಧವೂ ಇಲ್ಲ. ಇದನ್ನು ಕಾಲೇಜಿನ ವಿರೋಧಿ ಹಿತಾಸಕ್ತಿಗಳು ದುರುಪಯೋಗಪಡಿಸಿಕೊಳ್ಳುತಿದ್ದಾರೆ. ಈ ಬಗ್ಗೆ ಸೈಬರ್‌ ಕ್ರೈಂ ನಲ್ಲಿ ದೂರು ದಾಖಲಾಗಿದ್ದು ಬಾಧಿತರು ತಮ್ಮ ಮೇಲೆ ಉದ್ದೇಶಪೂರ್ವಕವಾಗಿ ಷಡ್ಯಂತ್ರ ಮಾಡುವವರು ಸೃಷ್ಟಿಸಿದ ನಕಲಿ ವಿಡಿಯೋ ಇದು. ಇದರ ಬಗ್ಗೆ ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಕೋರಿದ್ದಾರೆ. ಎಂಬುದನ್ನು ಪೊಲೀಸ್‌ ಮೂಲಗಳು ಖಚಿತಪಡಿಸಿವೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *