ಜೋಗಕ್ಕೆ ಬರಬೇಡಿ ಪ್ಲೀಜ್….ಜೋಗದ ಸಿರಿ ಬೆಳಕಿಲ್ಲ…!

ವಿಶ್ವಪ್ರಸಿದ್ಧ ಜೋಗದ ಜಲಪಾತ ನೋಡದವರುಂಟೆ? ಸಾಯೋದ್ರೊಳಗೆ ಒಮ್ಮೆ ನೋಡು ಜೋಗದ ಗುಂಡಿ ಎಂದು ಡಾ. ರಾಜ್‌ ಕುಮಾರ್‌ ಹಾಡಿ ಕುಣಿದಾದ ಮೇಲೆ ಮುಂಗಾರು ಮಳೆ ಚಿತ್ರದ ನಂತರ ಜೋಗದ ಗುಂಡಿ ಈಗಿನ ಭಾಷೆಯಲ್ಲಿ ವೈರಲ್‌, ಸೆನ್ಸೆಷನ್‌ ಆಗಿತ್ತು.
ಇದೇ ವೈಭವದ ಮಾತನ್ನು ಹಲವು ದಶಕಗಳಿಂದ ಕೇಳುತ್ತಾ ಬಂದ ಸಾರ್ವಜನಿಕರಿಗೆ ಈಗೊಂದು ಕೆಟ್ಟ ಸುದ್ದಿ ಇದೆ. ಜೋಗದ ಕಲ್ಪನೆ, ಯೋಚನೆ ಎಂದರೆ ರಮ್ಯ,ಗಮ್ಯ ಎಂದುಕೊಂಡವರು ಈಗ ಜೋಗದ ಜಲಪಾತವನ್ನು ನೋಡಲೇ ಬಾರದು. ಪ್ರತಿವರ್ಷ ಮಳೆಗಾಲದಲ್ಲಿ ಅದರಲ್ಲೂ ಜೂನ್ ನಿಂದ ಅಕ್ಟೋಬರ್‌, ನವೆಂಬರ್‌ ವರೆಗೆ ಜೋಗ ಜಲಪಾತ ನೋಡಲು ಹೇಳಿ ಮಾಡಿಸಿದ ಸಮಯ! ಎನ್ನುವ ರೂಢಿಯೊಂದಿತ್ತು. ಆದರೆ ಈಗ ಜೋಗದ ಸ್ಥಿತಿ -ಗತಿ ಹಿಂದಿನಂತಿಲ್ಲ.


ಮಲೆನಾಡಿನಲ್ಲಿ ಕೈಕೊಟ್ಟ ಮಳೆರಾಯ ದಿನಕ್ಕೆ ಆಗೊಮ್ಮೆ ಈಗೊಮ್ಮೆಯೂ ಹನಿಗಳನ್ನು ಚೆಲ್ಲಲು ತಯಾರಿಲ್ಲ. ಮಳೆ ಇಲ್ಲ,ನೀರಿಲ್ಲ ಎಂದರೆ ಜೋಗದ ಜಲಪಾತ ಎಷ್ಟು ನೀರಸವಿರಬೇಡ. ಹೌದು ಈಗ ಜೋಗ ಹಿಂದಿನಂತಿಲ್ಲ ಜೋಗದ ರಾಜ, ರಾಣಿ ರೋರರ್‌, ರಾಕೆಟ್‌ ಜಲಧಾರೆಗಳೆಲ್ಲಾ ಸೊರಗಿವೆ. ಜೋವೆಂದರೆ ಅಬ್ಬರ, ರೋಮಾಂಚನ, ಮಂಜು, ಮನೋಲ್ಲಾಸ ಎನ್ನುವ ಶಬ್ಧಗಳ ಭೌತಿಕ ರೂಪ ಈಗ ಕಾಣಿಯಾಗಿದೆ.


ಸುರಿಯದ ಮುಂಗಾರು ಮಳೆ ಜೋಗವೆಂದರೆ ನಿರ್ಲಿಪ್ತ, ನೀರಸ, ನೀರವೆನ್ನುವಂತೆ ಮಾಡಿದೆ. ಪ್ರತಿವರ್ಷ ಮಳೆಗಾಲದ ಈ ಅವಧಿಯಲ್ಲಿ ಜೋಗ ಜಲಪಾತದ ಸುತ್ತಮುತ್ತ ಮುತ್ತಿಕೊಳ್ಳುತಿದ್ದ ಜನ-ವಾಹನಗಳು ಈಗ ಜೋಗ ಕಡೆ ಮುಖ ಮಾಡುತ್ತಿಲ್ಲ. ಮಳೆಗಾಲದ ಮೂರು ತಿಂಗಳಲ್ಲಿ ವರ್ಷದ ದುಡಿಮೆ ಮಾಡುತಿದ್ದ ಸ್ಥಳೀಯ ವ್ಯಾಪಾರಿಗಳಿಗೆ ಈಗ ಹಸಿದ ಹೊಟ್ಟೆ ಮೇಲೆ ಹಸಿಬಟ್ಟೆ ಎನ್ನುವ ಸ್ಥಿತಿ ಇದೆ.


ಮಳೆಗಾಲವೇನೋ ಕೈಕೊಟ್ಟು ಜೋಗದಸಿರಿ ಬೆಳಕನ್ನು ಕತ್ತಲೆಗೆ ದೂಡಿದೆ. ಇದರ ಜೊತೆಗೇ ಜೋಗದಲ್ಲಿ ನಡೆಯುತ್ತಿರುವ ನಿರ್ಮಾಣ ಕಾಮಗಾರಿಗಳಿಂದಾಗಿ ಜೋಗ ಜ(ನ) ಲಪಾತದ ಎದುರು ಮಣ್ಣ-ಧೂಳು ರಾರಾಜಿಸುತ್ತಿದೆ. ಜೋಗದ ಅಭಿವೃದ್ಧಿ ಕಾಮಗಾರಿಗಳಿಂದಾಗಿ ಈಗ ಜೋಗ ಜಲಪಾತದ ಎದುರು ವಾಹನಗಳೂ ಹೋಗುವಂತಿಲ್ಲ ಜನರೂ ಸುಳಿಯುವಂತಿಲ್ಲ. ಪ್ರತಿವರ್ಷ ಮಳೆ ಗಾಲದಲ್ಲಿ ಜೋಗದ ಸಂಭ್ರಮ ಸವಿಯಲು ಬರುತಿದ್ದ ಜನತೆ, ಪ್ರವಾಸಿಗರಿಗೆ ಒಂದು ಸಂದೇಶವಿದೆ. ಪ್ರತಿವರ್ಷ ಮಳೆಗಾಲಕ್ಕೆ ತಪ್ಪದೆ ಜೋಗಕ್ಕೆ ಬರುತಿದ್ದವರು ಈ ವರ್ಷ ಬರಲೇ ಬೇಡಿ ಯಾಕೆಂದರೆ ಜೋಗದಲ್ಲಿ ಈಗ ನೀರಿಲ್ಲ ಬರೀ ಮಣ್ಣು ಧೂಳು ಜೋಗವೆಂದರೆ ನಿಮ್ಮ ಕಣ್ಣಲ್ಲಿದ್ದ ಚೆಂದ ಮನದಲ್ಲಿದ್ದ ಮಧುರತೆ ಅಚಲವಾಗಿರಬೇಕೆಂದರೆ ದಯವಿಟ್ಟು ಈ ವರ್ಷ ಜೋಗದ ಕಡೆ ಬರಲೇ ಬೇಡಿ.!

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *