ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಮತ್ತು ಬಿಜೆಪಿ ವಿರುದ್ಧ ಒಗ್ಗಟ್ಟಿನಿಂದ ಹೋರಾಡುತ್ತೇವೆ

ಪಾಟ್ನಾ ಸಭೆ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಒಗ್ಗಟ್ಟಿನಿಂದ ಹೋರಾಡಲು 17 ಪ್ರತಿಪಕ್ಷಗಳಿಂದ ನಿರ್ಧಾರ

2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಒಗ್ಗಟ್ಟಿನಿಂದ ಹೋರಾಡಲು ಮತ್ತು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಉತ್ಸಾಹದಿಂದ ಕೆಲಸ ಮಾಡಲು 17 ವಿರೋಧ ಪಕ್ಷಗಳು ಶುಕ್ರವಾರ ನಿರ್ಧರಿಸಿವೆ.

patnameet

ಪಾಟ್ನಾ: 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಒಗ್ಗಟ್ಟಿನಿಂದ ಹೋರಾಡಲು ಮತ್ತು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಉತ್ಸಾಹದಿಂದ ಕೆಲಸ ಮಾಡಲು 17 ವಿರೋಧ ಪಕ್ಷಗಳು ಶುಕ್ರವಾರ ನಿರ್ಧರಿಸಿವೆ.

ಸುಮಾರು ನಾಲ್ಕು ಗಂಟೆಗಳ ಕಾಲ ನಡೆದ ಪ್ರತಿಪಕ್ಷಗಳ ಸುದೀರ್ಘ ಸಭೆಯ ನಂತರ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಿಹಾರ ಮುಖ್ಯಮಂತ್ರಿ ಹಾಗೂ ಜೆಡಿಯು ವರಿಷ್ಠ ನಿತೀಶ್ ಕುಮಾರ್ ಅವರು, ಸಭೆಯಲ್ಲಿ 17 ಪಕ್ಷಗಳ ನಾಯಕರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಮುಂದಿನ ಕೆಲವು ದಿನಗಳಲ್ಲಿ ನಾಯಕರು ಒಟ್ಟಾಗಿ ಹೋರಾಡುವ ಯೋಜನೆಗೆ ಅಂತಿಮ ರೂಪ ನೀಡಲಾಗುವುದು ಎಂದು ಹೇಳಿದರು.

“ನಾವು ಉತ್ತಮ ಸಭೆ ನಡೆಸಿದ್ದೇವೆ ಮತ್ತು ಸಭೆಯಲ್ಲಿ ಹಲವಾರು ನಾಯಕರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. 17 ಪಕ್ಷಗಳು ಒಟ್ಟಾಗಿ ಕೆಲಸ ಮಾಡಲು ಮತ್ತು ಲೋಕಸಭೆ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಸ್ಪರ್ಧಿಸಲು ನಿರ್ಧರಿಸಿವೆ” ಎಂದು ಬಿಹಾರ ಸಿಎಂ ತಿಳಿಸಿದ್ದಾರೆ.

ನಾವು ರಾಷ್ಟ್ರೀಯ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡುತ್ತಿದ್ದೇವೆ. ದೇಶದ ಇತಿಹಾಸವನ್ನು ತಿರುಚಲು ಪ್ರಯತ್ನಿಸುತ್ತಿರುವ ಬಿಜೆಪಿ ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ನಿತೀಶ್ ಕುಮಾರ್ ಆರೋಪಿಸಿದರು.

ಮುಂದಿನ ತಿಂಗಳು ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಪ್ರತಿಪಕ್ಷ ನಾಯಕರ ಮುಂದಿನ ಸಭೆ ನಡೆಯಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಿಸಿದ್ದಾರೆ.

ಸಾಮಾನ್ಯ ಕಾರ್ಯಸೂಚಿ ಸಿದ್ಧಪಡಿಸಲು ನಿರ್ಧರಿಸಿದ್ದು, ಮುಂದಿನ ಸಭೆಯಲ್ಲಿ ಯಾವ ರೀತಿ ಮುನ್ನಡೆಯಬೇಕು ಎಂಬ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಖರ್ಗೆ ತಿಳಿಸಿದ್ದಾರೆ.

ನಾವು ಪ್ರತಿ ರಾಜ್ಯಕ್ಕೂ ಪ್ರತ್ಯೇಕ ಯೋಜನೆಗಳನ್ನು ರೂಪಿಸಬೇಕು ಮತ್ತು ಕೇಂದ್ರದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಅವರು ಹೇಳಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ನಮ್ಮಲ್ಲಿ ಕೆಲವು ಭಿನ್ನಾಭಿಪ್ರಾಯಗಳಿರಬಹುದು. ಆದರೆ ಪರಸ್ಪರ ಅರ್ಥ ಮಾಡಿಕೊಂಡು ಒಟ್ಟಾಗಿ ಕೆಲಸ ಮಾಡಲು ನಿರ್ಧರಿಸಿದ್ದೇವೆ ಮತ್ತು ನಮ್ಮ ಸಿದ್ಧಾಂತವನ್ನು ರಕ್ಷಿಸಲು ಕೆಲಸ ಮಾಡುತ್ತೇವೆ” ಎಂದರು.

ಈ ವೇಳೆ ಮಾತನಾಡಿದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು, ಪಾಟ್ನಾದಲ್ಲಿ ಮೊದಲ ಪ್ರತಿಪಕ್ಷ ನಾಯಕರ ಸಭೆ ಆಯೋಜಿಸಲಾಗಿದ್ದು, “ಪಾಟ್ನಾದಿಂದ ಏನೇ ಆರಂಭವಾದರೂ ಅದು ಸಾರ್ವಜನಿಕ ಚಳುವಳಿಯ ರೂಪ ಪಡೆದುಕೊಳ್ಳುತ್ತದೆ” ಎಂದರು.

ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಮತ್ತು ಬಿಜೆಪಿ ವಿರುದ್ಧ ಒಗ್ಗಟ್ಟಿನಿಂದ ಹೋರಾಡುತ್ತೇವೆ. ಬಿಜೆಪಿ ಇತಿಹಾಸವನ್ನು ತಿರುಚಲು ಬಯಸುತ್ತದೆ. ಆದರೆ ನಾವು ಇತಿಹಾಸವನ್ನು ಉಳಿಸುತ್ತೇವೆ ಎಂದು ಪಶ್ಚಿಮ ಬಂಗಾಳ ಸಿಎಂ ಹೇಳಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *