ಮಾವಿನಗುಂಡಿ ಪ್ರಕರಣ- ಅಮಾಯಕರ ತಲೆದಂಡ!

ರಾಜಕೀಯ ಸಮಯಸಾಧಕರಾದ ಗೋಪ್ರೇಮಿಗಳ ಹಫ್ತಾ ವಸೂಲಿಗೆ ಲಾಭ ತರುವ ಏಕೈಕ ಉದ್ದೇಶದಿಂದ ಹಿಂದಿನ ಸರ್ಕಾರ ಜಾರಿ ಮಾಡಿದ್ದ ಗೋಹತ್ಯೆ ನಿಷೇಧ ಮತ್ತು ಮತಾಂತರ ನಿಷೇಧ ಕಾಯಿದೆಗಳನ್ನು ಕಸದ ಬುಟ್ಟಿಗೆ ಎಸೆಯಲು ಹೊಸ ಸರ್ಕಾರ ತೀರ್ಮಾನ ಕೈಗೊಂಡಿದೆ.

ಈ ತೀರ್ಮಾನದ ನಂತರ ಸರ್ಕಾರದ ವಿರುದ್ಧ ಸಾರ್ವಜನಿಕರನ್ನು ಉತ್ತೇಜಿಸುವ ಸಂಘಿ ನಾಟಕ ತೆರೆಮರೆಯಲ್ಲಿ ನಡೆಯುತ್ತಿದೆ. ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಾದ್ಯಂತ ಹಫ್ತಾ ವಸೂಲಿಯ ರುಚಿ ಕಂಡಿರುವ ಸಂಘಿದಳವೊಂದು ಹಿಂದಿನ ಸರ್ಕಾರದ ಅವಧಿಯಲ್ಲಿ ಜಾನುವಾರು ಸಾಗಾಟಕ್ಕೆ ಬೆಲೆ ನಿಗದಿಪಡಿಸಿಕೊಂಡಿತ್ತಂತೆ! ಹೀಗೆ ಹಫ್ತಾ ನೀಡದ ರೈತರು, ಜಾನುವಾರು ವ್ಯಾಪಾರಿಗಳಿಗೆ ತೊಂದರೆ ಮಾಡುವ ಲಾಭದ ವ್ಯವಹಾರ ನಡೆಸುವ ಮತಾಂಧ ಸಂಘಿಗಳು ಈಗ ಕೆಲಸವಿಲ್ಲದ ಮಂಗಗಳಾದಂತಾಗಿದ್ದಾರೆ. ಇದೇ ಹಿನ್ನೆಲೆಯಲ್ಲಿ ಶಿರಸಿಯಲ್ಲಿ ಭಜರಂಗಿ ಪ್ರಹಸನ ಶುರುವಾಗಿದೆ.

ಇಂಥ ಸಂಘಿ ಕುತಂತ್ರಗಳ ಫಲವಾಗಿ ಕಳೆದ ವಾರ ಸಿದ್ಧಾಪುರ ಪೊಲೀಸರು ಮೂರು ಜನರನ್ನು ಜಾನುವಾರು ಸಾಗಾಟದ ಹಿನ್ನೆಲೆಯಲ್ಲಿ ಬಂಧಿಸಿದ್ದರು. ಈ ಬಂಧಿತ ಆರೋಪಿಗಳಲ್ಲಿ ಒಬ್ಬ ಬಕ್ರೀದ್‌ ಮತ್ತು ಹೆಂಡತಿ ತುಂಬು ಗರ್ಭಿಣಿ ಎನ್ನುವ ಕಾರಣಕ್ಕೆ ಪರಾರಿಯಾಗಿದ್ದ. ಈ ಪರಾರಿ ನಂತರ ಪೊಲೀಸರಿಂದ ತಪ್ಪಿಸಿಕೊಂಡಿದ್ದ ಆರೋಪಿಯನ್ನು ಅದೇ ದಿನ ಬಂಧಿಸಿದ್ದಾರೆ. ಈ ಪ್ರಕರಣ ಇಷ್ಟಕ್ಕೇ ಮುಗಿದು ಹೋಗಿದ್ದರೆ ಯಾವ ಸುದ್ದಿ-ವಿಶ್ಲೇಷಣೆಗಳಾಗುತ್ತಿರಲಿಲ್ಲ.

ದುರಂತವೆಂದರೆ… ಈ ಪ್ರಕರಣದ ನಂತರ ಪರಾರಿ ವೇಳೆ ಕರ್ತವ್ಯದಲ್ಲಿದ್ದ ಮೂರು ಜನ ಪೊಲೀಸರನ್ನು ಅಮಾನತ್ತು ಮಾಡಲಾಯಿತು. ಮೂರು ಜನ ಪೊಲೀಸರ ಅಮಾನತ್ತಿಗೆ ಕಾರಣ ಕರ್ತವ್ಯನಿರ್ಲಕ್ಷ!

ವಿರೇಶ್‌ ಚಲವಾದಿ,ಉದಯ ಮೇಸ್ತ,ಪ್ರಸನ್ನಕುಮಾರ್‌ ಎಂಬ ಮೂರು ಜನ ಪೊಲೀಸರನ್ನು ಅಮಾನತ್ತು ಮಾಡುತ್ತಲೇ ಪ್ರಕರಣದ ವಿಚಾರ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯರ ಬಳಿ ಹೋಗಿದೆ. ನಿರೀಕ್ಷೆಯಂತೆ ಈ ಪ್ರಕರಣ ಹಿರಿಯ ಪೊಲೀಸ್‌ ಅಧಿಕಾರಿಗಳ ತಲೆಬಿಸಿಗೆ ಕಾರಣವಾಗಿದೆ. ಈ ಪ್ರಕರಣದ ದುಷ್ಪರಿಣಾಮ ಎನ್ನುವಂತೆ ಹಿರಿಯ ಅಧಿಕಾರಿಗಳು ಆದ ಲೋಪಕ್ಕೆ ಸಾಮಾನ್ಯ ಪೇದೆಗಳ ಮೇಲೇಕೆ ಬ್ರಹ್ಮಾಸ್ತ್ರ ಎಂದು ಪ್ರಶ್ನಿಸಿ ಪಿ.ಎಸ್.ಐ. ತಲೆ ದಂಡ ಕೇಳಿದ್ದಾರೆ. ಹೀಗೆ ಸಂಘಿ ಕಳ್ಳ ದಳದವರಿಂದ ಪ್ರಾರಂಭವಾದ ಬೆಂಕಿಯ ಜ್ವಾಲೆ ಅಮಾಯಕ ಪೊಲೀಸರನ್ನು ಬಲಿ ಪಡೆದಿದೆ.

ಈ ಪ್ರಕರಣದಲ್ಲಿ ಬಾಧಿತರಾದವರೆಲ್ಲ ಬಹುತೇಕ ದಲಿತರು ಎನ್ನುವುದು ವಾಸ್ತವ. ಧರ್ಮ, ದೇವರು,ಗೋಪ್ರೇಮದ ಹೆಸರಿನ ಸಮಯಸಾಧಕ ಸಂಘಿಗಳ ಉದ್ದೇಶ ಅಂತಿಮವಾಗಿ ದಲಿತರು, ಹಿಂದುಳಿದವರು. ಈ ಸಂಘಿ ಕಾರ್ಯಾಚರಣೆಯ ಬಲಿಪಶುಗಳು ಅಮಾಯಕರು. ಸಂಘಿಗಳ ರಾಜಕೀಯ ಕಪಟನಾಟಕದ ಬಲಿಪಶುಗಳು ಎಂದಿನಂತೆ ಈಗ ಕೂಡಾ ಅಮಾಯಕರೆ.

ಸಿದ್ಧಾಪುರ ಪೊಲೀಸರ ಮೇಲಿನ ಈ ಕ್ರಮ ಅರ್ಥವಾದರೆ ಶಿರಸಿ ಸಂಘಿ ನಾಟಕದ ಸೂತ್ರ ಅರ್ಥವಾಗುತ್ತದೆ. ಕವಿ ಬ್ರೆಕ್ಟ್‌ ಹೇಳಿದಂತೆ ಪಟ್ಟಬದ್ರರ ಹುಡುಗಾಟಕ್ಕೆ ಸಿಗುವವರು ಅಮಾಯಕರಾದರೆ ನ್ಯಾಯ ಸಿಗಲು ಸಾಧ್ಯವೆ?

ಸರಳ,ಸಂಭಾವಿತ ಮಾನತಪ್ಪ ಕುಂಬಾರ ಮತ್ತು ಅಮಾಯಕ ಪೊಲೀಸರಿಗೆ ನ್ಯಾಯ ಸಿಗುವಂತಾಗಲಿ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Pak ಸೇನಾಧಿಕಾರಿಗಳು ಸೇರಿ 40 ಸೈನಿಕರು, 100ಕ್ಕೂ ಹೆಚ್ಚು ಉಗ್ರರ ಹತ್ಯೆ: Operation Sindoor ಬಗ್ಗೆ ಭಾರತದ DGMO ಕ್ಷಣ ಕ್ಷಣದ ಮಾಹಿತಿ!

ಹತ್ಯೆಯಾದ ಭಯೋತ್ಪಾದಕರಲ್ಲಿ ಯೂಸುಫ್ ಅಜರ್, ಅಬ್ದುಲ್ ಮಲಿಕ್ ರೌಫ್ ಮತ್ತು ಮುದಾಸೀರ್ ಅಹ್ಮದ್ ನಂತಹ ಕುಖ್ಯಾತ ಭಯೋತ್ಪಾದಕರು ಸೇರಿದ್ದಾರೆ ಎಂದು ಡಿಜಿಎಂಒ ತಿಳಿಸಿದ್ದಾರೆ. ನವದೆಹಲಿ:...

Latest Posts

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ ಅಂಥದ್ದೇ ಸಂಭವನೀಯ ದುರಂತದಿಂದ ಸಿದ್ಧಾಪುರ ಬಚಾವಾಗಿದೆ. ಸಿದ್ಧಾಪುರದಿಂದ ಸಾಗರ ಗ್ರಾಮೀಣ ಭಾಗದ ಮೂಲಕ ಹೊನ್ನಾಳಿಗೆ ತೆರಳುವ ಖಾಸಗಿ ಬಸ್‌ ಎಂದಿನಂತೆ ಇಂದು ಕೂಡಾ ಮಧ್ಯಾನ್ಹ ೨.೩೦ ರ ಸುಮಾರಿಗೆ...

Recommended For You

About the Author: Kanneshwar Naik

Leave a Reply

Your email address will not be published. Required fields are marked *