ಲೋಕಲ್‌ ನ್ಯೂಸ್….ಸನ್ಮಾನ,ಪ್ರಶಸ್ತಿ ಪ್ರದಾನ

ಸಿದ್ದಾಪುರ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ, ಸನ್ಮಾನ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಸರಕುಳಿ ಶ್ರೀ ಜಗದಂಬಾ ಪ್ರೌಢಶಾಲಾ ಸಭಾಂಗಣದಲ್ಲಿ ಜುಲೈ.೧೩ರಂದು ಬೆಳಗ್ಗೆ ೧೦.೩೦ಕ್ಕೆ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗಂಗಾಧರ ಕೊಳಗಿವಹಿಸುವರು.
ಜಗದಂಬಾ ಪ್ರೌಢಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಮಂಜುನಾಥ ಜಿ.ಹೆಗಡೆ ತ್ಯರ‍್ಗಲ್ ಕಾರ್ಯಕ್ರಮ ಉದ್ಘಾಟಿಸುವರು.ಸರಕುಳಿ ಸಹಿಪ್ರಾ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಪ್ರಶಾಂತ ಹೆಗಡೆ ತಟ್ಟಿಕೈ ತಾಲೂಕು ಪತ್ರಕರ್ತರ ಮಾಹಿತಿ ಬಿಡುಗಡೆಮಾಡುವರು.
ಹಿರಿಯ ಪತ್ರಕರ್ತರಾದ ನರೇಂದ್ರ ಹೆಗಡೆ ಹೊಂಡಗಾಶಿ ಅವರಿಗೆ ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದಿಂದ ಸನ್ಮಾನ ಹಾಗೂ ಹಿರಿಯ ಸಾಹಿತಿ ಶ್ರೀನಿವಾಸ ಶಾನಭಾಗ ಹಾರ್ಸಿಕಟ್ಟಾ ರಿಗೆ ಗುರುಮನೆ ದತ್ತಿನಿಧಿ ಪ್ರಶಸ್ತಿ ಪ್ರದಾನ ನಡೆಯಲಿದೆ.


ಬಿಇಒ ಜಿ.ಐ.ನಾಯ್ಕ, ಉ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಿ.ಸುಬ್ರಾಯ ಭಟ್ಟ ಬಕ್ಕಳ ಹಾಗೂ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಬಸವರಾಜ್ ಪಾಟೀಲ್ ಮುಂಡಗೋಡ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುತ್ತಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

ಸಿದ್ದಾಪುರ
ಮಕ್ಕಳಿಗೆ ಸಂಸ್ಕೃತಿ ಹಾಗೂ ಸಂಸ್ಕಾರವನ್ನು ನೀಡಿದರೆ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗುತ್ತದೆ.ಪ್ರತಿಯೊಬ್ಬರ ನಡತೆ, ವ್ಯಕ್ತಿತ್ವ ಪರಿಶುದ್ಧವಾಗಿದ್ದರೆ ಮಾತ್ರ ಪರಿವರ್ತನೆ ಸಾಧ್ಯ ಎಂದು ಸಿದ್ದಾಪುರದ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕಿ ಬಿ.ಕೆ.ದೇವಿಕಾ ಹೇಳಿದರು.
ತಾಲೂಕಿನ ಹಾರ್ಸಿಕಟ್ಟಾ ಗಣೇಶಮಂಟಪದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹಾರ್ಸಿಕಟ್ಟಾ, ಮುಠ್ಠಳ್ಳಿ ಹಾಗೂ ಬಿದ್ರಕಾನ ಮಹಿಳಾ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವದಲ್ಲಿ ಅವರು ಸಂಪನ್ಮೂಲವ್ಯಕ್ತಿಗಳಾಗಿ ಸಂಸ್ಕೃತಿ ಹಾಗೂ ಸಂಸ್ಕಾರದ ಅವಶ್ಯಕತೆ ಕುರಿತು ಶನಿವಾರ ಮಾತನಾಡಿದರು.


ಸಂಸ್ಕೃತಿ ಹಾಗೂ ಸಂಸ್ಕಾರವನ್ನು ಮನೆಯಲ್ಲಿಯೇ ನೀಡಬೇಕು. ಇದು ಎಲ್ಲಿಯೂ ಸಿಗುವುದಲ್ಲ. ಮನೆಯಲ್ಲಿ ಮಕ್ಕಳಿಗೆ ರಾಮಾಯಣ, ಮಹಾಭಾರತ, ಭಗವದ್ಗೀತೆಗಳನ್ನು ತಿಳಿಸಿಕೊಡಬೇಕು ಎಂದು ಹೇಳಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ಜನಜಾಗೃತಿ ವೇದಿಕೆಯ ತಾಲೂಕು ನಿರ್ದೇಶಕ ರಮೇಶ ಹೆಗಡೆ ಹಾರ್ಸಿಮನೆ ಕಾರ್ಯಕ್ರಮ ಉದ್ಘಾಟಿಸಿ ವಾರ್ಷಿಕೋತ್ಸವದ ಅಂಗವಾಗಿ ನಡೆದ ಸ್ಫರ್ಧಾಕಾರ್ಯಕ್ರಮದ ವಿಜೇತರಿಗೆ ಬಹುಮಾನ ವಿತರಿಸಿದರು.


ಹಾರ್ಸಿಕಟ್ಟಾ ಗ್ರಾಪಂ ಅಧ್ಯಕ್ಷೆ ವಿದ್ಯಾ ಪಿ.ನಾಯ್ಕ ಅಧ್ಯಕ್ಷತೆವಹಿಸಿದ್ದರು.
ಮುಠ್ಠಳ್ಳಿ ಒಕ್ಕೂಟದ ಅಧ್ಯಕ್ಷ ತಿಮ್ಮಪ್ಪ, ಹಾರ್ಸಿಕಟ್ಟಾ ಒಕ್ಕೂಟದ ಅಧ್ಯಕ್ಷೆ ಶಶಿಕಲಾ ಆಚಾರ್ಯ, ಬಿದ್ರಕಾನ ಒಕ್ಕೂಟದ ಅಧ್ಯಕ್ಷ ಮಂಜುನಾಥ ಉಪಸ್ಥಿತರಿದ್ದರು.
ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಪ್ರಭಾಕರ ನಾಯ್ಕ ಪ್ರಾಸ್ತಾವಿಕ ಮಾತನಾಡಿದರು.
ಜ್ಞಾನವಿಕಾಸ ತಾಲೂಕು ಸಂಚಾಲಕಿ ಪ್ರಭಾವತಿ, ಪ್ರದೀಪ, ಉದಯ ಕಾರ್ಯಕ್ರಮ ನಿರ್ವಹಿಸಿದರು. ಸೇವಾನಿರತರಾದ ಹೇಮಾವತಿ, ನೇತ್ರಾವತಿ, ಚಂದ್ರಮತಿ ಸಹಕರಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *