ಸಿದ್ಧಾಪುರದಲ್ಲಿ ನಡೆದ ಲಂಚಮರಳಿಸುವ ಪ್ರಹಸನಕ್ಕೆ ಸಾರ್ವಜನಿಕರ ಮೆಚ್ಚುಗೆ!

ಭೂಮಾಪನಾ ಇಲಾಖೆಯಲ್ಲಿ ವ್ಯಕ್ತಿಯೊಬ್ಬರಿಂದ ಪಡೆದಿದ್ದ ಲಂಚದ ಹಣವನ್ನು ಸಾರ್ವಜನಿಕರ ಎದುರು ಸಿಬ್ಬಂದಿಯೊಬ್ಬ ಮರಳಿಸಿದ ನಾಟಕೀಯ ಘಟನೆ ನಡೆದಿದೆ. ಈ ಘಟನೆ ನಡೆದಿದ್ದು ಸಿದ್ಧಾಪುರ ತಾಲೂಕಿನ ಆಡಳಿತ ಸೌಧದಲ್ಲಿ!

ವ್ಯಕ್ತಿಯೊಬ್ಬರ ಭೂಮಿ ಮಾಪನಕ್ಕೆ ಲಂಚ ಪಡೆದಿದ್ದ ಸಿಬ್ಬಂದಿಯೊಬ್ಬ ಹಣವನ್ನೂ ನೀಡದೆ, ಕೆಲಸವನ್ನೂ ಮಾಡಿಕೊಡದೆ ಸತಾಯಿಸುತಿದ್ದ. ಈ ರೀತಿ ಸಾರ್ವಜನಿಕರನ್ನು ಹಿಂಸಿಸುವ ಕೆಲಸ ಸಿದ್ಧಾಪುರದಲ್ಲಿ ಕಳೆದ ಏಳೆಂಟು ವರ್ಷಗಳಿಂದಲೂ ನಿರಾಯಾಸವಾಗಿ ನಡೆಯುತಿತ್ತು. ಪ್ರಭಾವಿಗಳಿಗೆ, ರಾಜಕೀಯ ನಾಯಕರಿಗೆ ಕೆಲಸಮಾಡಿಕೊಡುತಿದ್ದ ಭೂಮಾಪನಾ ಇಲಾಖೆಯ ಸಿಬ್ಬಂದಿಗಳು ಅಸಹಾಯಕರು, ಅಮಾಯಕರಿಗೇ ಸತಾಯಿಸಿ ಕಾಸು ಮಾಡುತಿದ್ದರು. ಈ ಬಗ್ಗೆ ಕೆಲವು ವರ್ಷಗಳಿಂದಲೂ ದೂರುಗಳಿದ್ದರೂ ಕೂಡಾ ಸಾರ್ವಜನಿಕರು ಒಟ್ಟಾಗಿ ಪ್ರತಿಭಟಿಸಿರಲಿಲ್ಲ.

ಇಂದು ಮಧ್ಯಾಹ್ನದ ಸಮಯಕ್ಕೆ ಭೂಮಾಪನಾ ಇಲಾಖೆಯ ನೌಕರರಿಂದ ನೊಂದಿದ್ದ ಕೆಲವರು ಸೇರಿದ್ದರು. ಅವರೊಂದಿಗೆ ಜೊತೆಯಾಗಿದ್ದ ಕೆಲವರು ರಾಜಕೀಯ ನಾಯಕರು, ಸಾಮಾಜಿಕ ಕಾರ್ಯಕರ್ತರು ನೇರವಾಗಿ ಭೂಮಾಪನಾ ಇಲಾಖೆಗೆ ಧಾವಿಸಿದ್ದಾರೆ. ಅಲ್ಲಿದ್ದ ಸಿಬ್ಬಂದಿಗಳು ಒಬ್ಬ ಸಿಬ್ಬಂದಿ ಕಛೇರಿಯಲ್ಲೇ ಇಲ್ಲ, ಹೊರಗಡೆ ಇದ್ದಾರೆ ಎಂದು ಬಚಾವು ಮಾಡುಲು ಮುಂದಾಗಿದ್ದಾರೆ. ಇದರಿಂದ ಕೆರಳಿದ ಸಾರ್ವಜನಿಕರು ತಹಸಿಲ್ಧಾರರ ಮೂಲಕ ಸಿಬ್ಬಂದಿಯನ್ನು ಕರೆಸುವಂತೆ ದುಂಬಾಲು ಬಿದ್ದಿದ್ದಾರೆ.

ಇದೇ ವೇಳೆ ಕೆಲವರು ಪ್ರತಿಭಟನಾ ರೀತಿಯಲ್ಲಿ ಘೋಷಣೆಗಳನ್ನೂ ಕೂಗಿದ್ದಾರೆ. ಕೆಲವು ವರ್ಷಗಳಿಂದ ಅನಾಯಾಸವಾಗಿ ದುಡಿಮೆ ಮಾಡಿಕೊಂಡಿದ್ದ ಈ ನೌಕರರಿಗೆ ಆಡಳಿತ ಪಕ್ಷದವರೇ ವಿರೋಧಿಗಳಾಗಿ ವರ್ತಿಸಿದ್ದು ದಿಗ್ಭ್ರಮೆಯಾಗಿದೆ. ಸಾರ್ವಜನಿಕರ ಪರವಾಗಿ ನೇತೃತ್ವ ವಹಿಸಿದ ರಾಜಕೀಯ ನಾಯಕರು, ಸಾಮಾಜಿಕ ಕಾರ್ಯಕರ್ತರ ಬಗ್ಗೆ ಸ್ಥಳೀಯರ ಮೆಚ್ಚುಗೆ ವ್ಯಕ್ತವಾಗಿದೆ. ಕಛೇರಿಯ ಹೊರಗೆ ಸೇರಿದ್ದ ಸಾರ್ವಜನಿಕರೂ ಕೂಡಾ ಹಲವು ವರ್ಷಗಳಿಂದ ಜಿಡ್ಡುಗಟ್ಟಿದ ಆಡಳಿತಕ್ಕೆ ಸೂಕ್ತ ಚಿಕಿತ್ಸೆ ನೀಡುವ ಮೂಲಕ ಸ್ಥಳೀಯ ನಾಯಕರು ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ತಾಂತ್ರಿಕ ಕಾರಣ, ಆಧುನಿಕತೆ ಹೆಸರಲ್ಲಿ ಸತಾಯಿಸುವ ಭೂಮಾಪನಾ ಇಲಾಖೆಯ ನೌಕರರು ಬಡವರಿಂದ ಲಂಚ ಪಡೆದು ಕೊಬ್ಬಿದ್ದು ಇಡೀ ಕಛೇರಿಯ ಸಿಬ್ಬಂದಿಗಳನ್ನು ಸಾಮೂಹಿಕವಾಗಿ ವರ್ಗಾಯಿಸಬೇಕೆಂಬ ಬೇಡಿಕೆ ವ್ಯಕ್ತವಾಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *