


ಇಲಾಖೆ, ಹುದ್ದೆಗಳ ವ್ಯತ್ಯಾಸ ಮಾಡದೆ ಎಲ್ಲಾ ಸರ್ಕಾರಿ ನೌಕರರು ಪ್ರವಾಹ ನಿರ್ವಹಣೆಯಲ್ಲಿ ಕೈಜೋಡಿಸಲು ಶಾಸಕ ಭೀಮಣ್ಣ ನಾಯ್ಕ ಆದೇಶಿಸಿದರು. ಸಿದ್ಧಾಪುರ ತಹಸಿಲ್ಧಾರ ಕಛೇರಿಯಲ್ಲಿ ಪ್ರವಾಹ ನಿರ್ವಹಣೆ ಸಭೆ ನಡೆಸಿ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು ಎಲ್ಲಾ ಅಧಿಕಾರಿಗಳು,ನೌಕರರು ತಮ್ಮ ಸೇವೆಯ ಸ್ಥಳದಲ್ಲೇ ಇರಬೇಕು. ಆಯಾ ಇಲಾಖೆಗಳು ತಮಗೆ ಸಂಬಂಧಿಸಿದ ಪ್ರವಾದ ನಿರ್ವಹಣೆ, ವರದಿ ಒಪ್ಪಿಸುವ ಕೆಲಸ ಮಾಡಬೇಕು ರೈತರು, ಜನಸಾಮಾನ್ಯರು ಯಾರಿಗೂ ಪ್ರವಾಹದಿಂದ ತೊಂದರೆಯಾಗದಂತೆ ಸ್ಪಂದಿಸಬೇಕು ಎಂದರು.

ಗೃಹಲಕ್ಷ್ಮಿ ಯೋಜನೆ ಸೇರಿದಂತೆ ಯಾವುದೇ ಸರ್ಕಾರಿ ಯೋಜನೆಯ ಫಲಾನುಭವಿಗಳನ್ನು ಹುಡುಕಿ ಅವರಿಗೆ ನೆರವಾಗುವುದು ತಾಲೂಕಾ ಆಡಳಿತದ ಜವಾಬ್ಧಾರಿ ಶಿರಸಿ-ಸಿದ್ಧಾಪುರ ಕ್ಷೇತ್ರದಲ್ಲಿ ಹೆಚ್ಚಿನ ಜನರಿಗೆ ಈ ಯೋಜನೆಯ ಲಾಭ ದೊರೆಯುವಂತೆ ನೌಕರವರ್ಗ ಸಹಕರಿಸಬೇಕು ಎಂದು ಮನವಿ ಮಾಡಿದರು.
ಮಳೆ,ಅನಾಹುತ,ಪ್ರವಾಹಗಳಿಂದ ಹಾನಿಗೊಳಗಾಗುವ ಮನೆ, ಬೆಳೆ ಗಳಿಗೆ ನೀಡುವ ಪರಿಹಾರ ಅತ್ಯಲ್ಪವಾಗಿದ್ದು ಬಾಧಿತರಿಗೆ ಹೆಚ್ಚಿನ ಪರಿಹಾರ ದೊರಕಿಸುವ ಹಿನ್ನೆಲೆಯಲ್ಲಿ ಸರ್ಕಾರದ ಗಮನ ಸೆಳೆಯಲಾಗುವುದು.-ಭೀಮಣ್ಣ ನಾಯ್ಕ
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
