ಕೆ.ಪಿ.ಹೆಗಡೆಯವರಿಗೆ ಅನಂತಶ್ರೀ ಪ್ರಶಸ್ತಿ ಘೋಷಣೆ

ಸಿದ್ದಾಪುರ
ಪ್ರಸಿದ್ಧ ಯಕ್ಷಗಾನ ಗುರು, ಹೆಸರಾಂತ ಭಾಗವತ ತಾಲೂಕಿನ ಗೋಳಗೋಡಿನ ಕೆ.ಪಿ.ಹೆಗಡೆಯವರಿಗೆ ಯಕ್ಷಗಾನದ ಪ್ರಸಿದ್ಧ ಕಲಾವಿದರಾಗಿದ್ದ ಅನಂತ ಹೆಗಡೆ ಹೆಸರಿನಲ್ಲಿ ನೀಡಲಾಗುವ ಅನಂತಶ್ರೀ ಪ್ರಶಸ್ತಿ ಪ್ರಕಟಿಸಲಾಗಿದೆ.


ಈ ವಿಷಯ ತಿಳಿಸಿದ ಶ್ರೀ ಅನಂತ ಯಕ್ಷಕಲಾ ಪ್ರತಿಷ್ಠಾನದ ಅಧ್ಯಕ್ಷ ವಿ.ಎಂ.ಭಟ್ಟ ಸಿದ್ದಾಪುರ ಕಳೆದ ೧೨ ವರ್ಷಗಳಿಂದ ಕೊಳಗಿ ಅನಂತ ಹೆಗಡೆಯವರ ನೆನಪಿನಲ್ಲಿ ಪ್ರತಿಷ್ಠಾನ ಆರಂಭಿಸಲಾಗಿದ್ದು ಕಳೆದ ೭ ವರ್ಷದಿಂದ ಹಿರಿಯ,ಸಾಧಕ ಕಲಾವಿದರನ್ನು ಆಯ್ಕೆ ಮಾಡಿ ಗೌರವಿಸಲಾಗುತ್ತಿದೆ. ಈ ಬಾರಿ ಸೆಪ್ಟೆಂಬರ್ ಎರಡನೇ ವಾರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಅನಂತ ಹೆಗಡೆಯವರ ಒಡನಾಡಿಗಳೂ ಆಗಿದ್ದ ಕೆ.ಪಿ.ಹೆಗಡೆಯವರಿಗೆ ಪ್ರಶಸ್ತಿಪ್ರದಾನ ಮಾಡುವದು ಹೆಮ್ಮೆಯ ಸಂಗತಿಯಾಗಿದೆ ಎಂದು ತಿಳಿಸಿದ್ದಾರೆ.


ಕಳೆದ ೪ ದಶಕಗಳಿಗೂ ಅಧಿಕ ಕಾಲದಿಂದ ಯಕ್ಷಗಾನ ಬಡಗುತಿಟ್ಟಿನ ಭಾಗವತರಾಗಿ,ಹಂಗಾರಕಟ್ಟೆ ಯಕ್ಷಗಾನ ಕೇಂದ್ರದ ಗುರುಗಳಾ ಗಿಕಾರ್ಯನಿರ್ವಹಿಸುತ್ತಿದ್ದ ಕೃಷ್ಣ ಪರಮೇಸ್ವರ ಹೆಗಡೆ ಎಸ್.ಎಸ್.ಎಲ್.ಸಿ ಬಳಿಕ ನಾರ್ಣಪ್ಪ ಉಪ್ಪೂರು, ಗಣಪತಿ ಹೆಗಡೆ,ಮಂಜುನಾಥ ಭಾಗವತ ಹೊಸ್ತೋಟರ ಶಿಷ್ಯರಾಗಿ ತಮ್ಮ ಕಲಾ ಬದುಕನ್ನು ಆಯ್ಕೆಮಾಡಿಕೊಂಡರು.೧೯೭೯ರಿಂದ ಯಕ್ಷಗಾನ ಕ್ಷೇತ್ರಕ್ಕೆ ಭಾಗವತರಾಗಿ ಪಾದಾರ್ಪಣೆ ಮಾಡಿ, ಕೋಟ,ಪೆರ್ಡೂರು,ಸಾಲಿಗ್ರಾಮ, ಮೂಲ್ಕಿ ಸೇರಿದಂತೆ ಅನೇಕ ಮೇಳಗಳಲ್ಲಿ ಪ್ರಧಾನ ಭಾಗವತರಾಗಿ ಅನುಪಮ ಸೇವೆ ಸಲ್ಲಿಸಿದ್ದಾರೆ.
ಯಕ್ಷಗಾನ ಕಲಿಕಾ ಕೇಂದ್ರದ ಗುರುಗಳಾಗಿ ಕೆಲಸ ಮಾಡಿದ ಕೆ.ಪಿ.ಹೆಗಡೆ ಮನಾರ್ಣಪ್ಪ ಉಪ್ಪೂರರ ಛಾಪು,ಅಪೂರ್ವ ರಂಗತಂತ್ರ,ಏರುಶೃತಿಯಲ್ಲೂ ಹಾಡಬಲ್ಲ ಕಂಠ,ರಾಗ,ತಾಳ,ಲಯದಲ್ಲಿ ಅಪೂರ್ವ ಹಿಡಿತವನ್ನು ಹೊಂದಿದವರು ಎನ್ನುವುದು ವಿಶೇಷ. ಅಂದಿನಿಂದ ಈವರೆಗೆ ಅವರ ಗರಡಿಯಲ್ಲಿ ಸಾವಿರಕ್ಕೂ ಅಧಿಕ ಶಿಷ್ಯರು ಸಿದ್ಧರಾಗಿ ಹೆಸರುಗಳಿಸಿದ್ದಾರೆ. ಅವರ ಶಿಷ್ಯರಲ್ಲಿ ಪ್ರಸಿದ್ಧ ಭಾಗವತ,ಪ್ರತಿಷ್ಠಾನದ ಕಾರ್ಯದರ್ಶಿ ಕೇಶವ ಹೆಗಡೆ ಕೊಳಗಿ ಕೂಡ ಒಬ್ಬರು ಎನ್ನುವುದು ಹೆಮ್ಮೆ ಎಂದು ಅವರು ಪ್ರಕಟಣೆಯಲ್ಲಿ ಹರ್ಷ ವ್ಯಕ್ತಪಡಿಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *