

ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿನಾಯಕ ಸೌಹಾರ್ದ ಸಹಕಾರಿ ಈ ವರ್ಷ೪೭ ಲಕ್ಷ ೫೩ ಸಾವಿರ ೫೪೩ ರೂ. ಲಾಭ ಗಳಿಸಿದೆ ಎಂದು ಪ್ರಕಟಿಸಿದೆ. ಇತ್ತೀಚೆಗೆ ಸಿದ್ಧಾಪುರ ರಾಘವೇಂದ್ರ ಮಠದಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ವಾರ್ಷಿಕ ಅಡಾವೆ ಪತ್ರಿಕೆ ಬಿಡುಗಡೆ ಮಾಡಿದ ಸಂಸ್ಥೆ ಸಂಸ್ಥೆಯ ವಾರ್ಷಿಕ ವರದಿಯಲ್ಲಿ ಈ ವಿಷಯ ಘೋಷಿಸಿದೆ.

ಈ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಂಸ್ಥೆಯ ನಿರ್ಧೇಶಕ ಮಂಡಳಿ ಸಂಪೂರ್ಣ ಕಾರ್ಯ ಕಲಾಪಗಳನ್ನು ವಿವರಿಸಿತು. ಅಧ್ಯಕ್ಷತೆ ವಹಿಸಿದ್ದ ವಿನಾಯಕ ಸಹಕಾರಿ ಸೌಹಾರ್ದ ಅಧ್ಯಕ್ಷ ಆನಂದ ನಾಯ್ಕ ತಮ್ಮ ಸಂಸ್ಥೆ ಸಾಮಾಜಿಕ ಜವಾಬ್ಧಾರಿಗಳ ಜೊತೆ ವ್ಯಾವಹಾರಿಕ ಪಾರದರ್ಶಕತೆಯನ್ನು ಕಾಯ್ದುಕೊಂಡು ಲಾಭದತ್ತ ಮುನ್ನಡೆಯುತ್ತಿದೆ. ಇದಕ್ಕೆ ಸಂಸ್ಥೆಯ ಸದಸ್ಯರ ಸಹಕಾರ ಕಾರಣ ಎಂದರು. ಮಹಾಬಲೇಶ್ವರ ನಾಯ್ಕ ಸರ್ವರನ್ನೂ ಸ್ವಾಗತಿಸಿದರು. ಶ್ರೀಧರ ಹೆಗಡೆ ನಿರ್ವಹಿಸಿದರು.
- ಲಾಭಾಂಶ ಹಂಚಿಕೆ-೧೫%
- ಸಾಮಾನ್ಯ ಮೀಸಲು ನಿಧಿ ೧೫%
- ಸಹಕಾರಿ ಶಿಕ್ಷಣ ನಿಧಿ ೨%
- ಶ್ರೀ ವಿನಾಯಕ ಸಮಾಜಸೇವಾ ನಿಧಿ೨%
- ಸಾಮಾನ್ಯ ಸೇವಾ ನಿಧಿ ೫%
- ಕಾ.ಮೀ.ನಿಧಿ೨೦%
- ಕಟ್ಟಡ ನಿಧಿ ೧೦%
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
