


ಸಿದ್ದಾಪುರ: ಅಡಿಕೆ ಬೆಳೆಗಾರರು ಸಂಕಷ್ಟದಲ್ಲಿ ರುವುದರಿಂದ ಆಮದಾಗುತ್ತಿರುವ ಅಡಿಕೆಯನ್ನು ನಿಷೇಧಿಸಬೇಕು. ರೈತರ ಸಾಲವನ್ನು ಮನ್ನಾ ಮಾಡಬೇಕು ಎಂದು ಉತ್ತರ ಕನ್ನಡ ಜಿಲ್ಲಾ ರೈತ ಸಂಘದವರು ಆಗ್ರಹಿಸಿದ್ದಾರೆ.
ಅವರು ಇಂದು ಪತ್ರಿಕಾಗೋಷ್ಠಿ ನಡೆಸಿ ಮಳೆಗಾಲದ ವೈಪರಿತ್ಯದಿಂದಾಗಿ ಅಡಿಕೆ ಬೆಳೆಗೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ ಕಾಡು ಪ್ರಾಣಿಗಳಿಂದಲೂ ಕೂಡ ಅಡಿಕೆ ಹಾನಿಯಾಗುತ್ತಿದೆ ಬರ್ಮಾ ದೇಶದಿಂದ ಆಮದಾಗುತ್ತಿರುವ ಅಡಿಕೆ ಯಿಂದ ಬೆಲೆ ಕಡಿಮೆಯಾಗಿ ರೈತರು ಸಂಕಷ್ಟದಲ್ಲಿದ್ದಾರೆ ಹೀಗಾಗಿ ಮುಂದಿನ ದಿನಗಳಲ್ಲಿ ರೈತರು ಸಾಲ ತುಂಬಲಾಗದಂತ ಸ್ಥಿತಿ ತಲುಪಿದ್ದಾರೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅವರ ಸಾಲಾ ಮನ್ನಾ ಮಾಡಬೇಕು ಕೇಂದ್ರ ಸರ್ಕಾರ ಬರ್ಮಾದಿಂದ ಆಮದು ಮಾಡಿಕೊಳ್ಳುತ್ತಿರುವ ಅಡಿಕೆಯನ್ನ ನಿಲ್ಲಿಸಬೇಕು. ಜನಸಾಮಾನ್ಯರಿಗೆ ನೀಡುತ್ತಿರುವ ಪಡಿತರವನು ನಿಲ್ಲಿಸಿ ಅವರ ಖಾತೆಗಳಿಗೆ ಹಣವನ್ನು ಜಮಾ ಮಾಡಬೇಕು ಇದರಿಂದ ಬೇರೆ ಬೇರೆ ಪ್ರದೇಶಗಳಲ್ಲಿ ವಿವಿಧ ರೀತಿಯ ಆಹಾರ ಸೇವಿಸುವವರು ಅವರದೇ ಆದ ಆಹಾರ ಪದ್ಧತಿಯನ್ನು ಬಳಸಿಕೊಳ್ಳಲು ಅನುಕೂಲವಾಗುತ್ತದೆ ಎಂದರು.


ಸೇರ್ಪಡೆ: ಇದೇ ಸಂದರ್ಭದಲ್ಲಿ ತಾಲೂಕಿನ ವಿವಿಧ ರೈತರು ರೈತ ಸಂಘವನ್ನು ಸೇರ್ಪಡೆಗೊಂಡರು. ತಲಗಾರನ ಬಿಳಿಯ ರಾಮಗೌಡ, ಸಣ್ಣು ರಾಮ ಗೌಡ ,ಮಾಮ್ಲೆಶ್ವರ್ ತಿಮ್ಮ ಗೌಡ, ವೆಂಕಟರಮಣ ಪುಟ್ಟ ಗೌಡ, ಬೀರ ರಾಮ ಗೌಡ, ಗೋಪಾಲ್ ಯಂಕ ಗೌಡ ,ರೈತ ಸಂಘವನ್ನು ಸೇರ್ಪಡೆಗೊಂಡಿದ್ದಾರೆ.
ಉತ್ತರ ಕನ್ನಡ ಜಿಲ್ಲಾ ರೈತ ಸಂಘದ ಅಧ್ಯಕ್ಷ ಕೆರಿಯಪ್ಪ, ಸೀತಾರಾಮ್ ನಾಯ್ಕ, ಜಿ ಬಿ ನಾಯ್ಕ, ರಾಧಾ ಸೀತಾರಾಮ್ ನಾಯ್ಕ, ಎಂ ಐ ನಾಯ್ಕ್, ಅಮ್ಮು ದ್ಯಾವಾ ಗೌಡ, ಗೀತಾ ಹೆಗಡೆ ಉಪಸ್ಥಿತರಿದ್ದರು

_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
