



ಸಿದ್ದಾಪುರ
ತಾಲೂಕಿನ ಹಿರೇಹದ್ದದ ಆಧಾರ ಷಡ್ಜ ಗುರುಕುಲ ದ ಸ್ವರ ಸಮ್ಮಿಲನ ಸಂಗೀತ ಕಾರ್ಯಕ್ರಮ ಹೆಗ್ಗರಣಿಯ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಿತು.

ಆರಂಭದಲ್ಲಿ ಆಧಾರ ಷಡ್ಜ ಗುರುಕುಲದ ಹಿರಿ-ಕಿರಿಯ ವಿದ್ಯಾರ್ಥಿಗಳಿಂದ ಗಾಯನ ನಡೆಯಿತು ಅವರಿಗೆ ತಬಲಾದಲ್ಲಿ ಶಂಕರ ಹೆಗಡೆ ಹಿರೇಮಕ್ಕಿ ಹಾಗೂ ಗಣೇಶ ಹೆಗಡೆ ಬಿಳೆಕಲ್ ಸಹಕರಿಸಿದರು.
ನಿಲ್ಕುಂದ ಗ್ರಾಪಂ ಅಧ್ಯಕ್ಷ ರಾಜಾರಾಮ ಹೆಗಡೆ ಬಿಳೆಕಲ್ ಕಾರ್ಯಕ್ರಮ ಉದ್ಘಾಟಿಸಿದರು. ನಿವೃತ್ತ ಮುಖ್ಯಾಧ್ಯಾಪಕ ಜಿ.ಆರ್.ಭಾಗ್ವತ್ ತ್ಯಾರಗಲ್, ಎಸ್.ವಿ.ಹೆಗಡೆ ಹಿರೇಹದ್ದ, ಹೆಗ್ಗರಣಿ ಪ್ರೌಢಶಾಲೆಯ ಮುಖ್ಯಾಧ್ಯಾಪಕ ಗುರುಶಾಂತ ಸಿ.ಎಂ, ವೇ.ವಿನಾಯಕ ಭಟ್ಟ ಹೆಗ್ಗಾರಬೈಲ್, ಅನಂತ ಹೆಗಡೆ ವಾಜಗರು, ಲಕ್ಷ್ಮೀಶ ಭಟ್ಟ ಉಂಚಳ್ಳಿ ಉಪಸ್ಥಿತರಿದ್ದರು.
ನಂತರ ನಡೆದ ಸಂಗೀತ ಕಾರ್ಯಕ್ರಮದಲ್ಲಿ ವಿನಾಯಕ ಹೆಗಡೆ ಹಿರೇಹದ್ದ ಅವರ ಗಾಯನಕ್ಕೆ ಅನಂತ ಹೆಗಡೆ ವಾಜಗಾರ ತಬಲಾದಲ್ಲಿ ಹಾಗೂ ಅಜಯ್ ಹೆಗಡೆ ಬೆಣ್ಣೆಮನೆ ಸಂವಾದಿನಿಯಲ್ಲಿ ಸಾಥ್ ನೀಡಿದರು. ತಂಬೂರದಲ್ಲಿ ಗಣೇಶ ಹೆಗಡೆ, ಅನೀಶ್ ಹೆಗಡೆ ಹಾಗೂ ಶಶಾಂಕ ಮಡಿವಾಳ ಸಹಕರಿಸಿದರು.
ರವಿ ಹಾಸ್ಯಗಾರ ಹುಕ್ಕಳಿ ಹಾಗೂ ಎಸ್.ಕೆ.ಮಡಿವಾಳ ಕಾರ್ಯಕ್ರಮ ನಿರ್ವಹಿಸಿದರು.

_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
