ಕೇಂದ್ರ ಸರ್ಕಾರದಿಂದ ಸಾಮಾನ್ಯ ಜನರಿಗೆ ಸಿಕ್ಕಿದ್ದು ಕೇವಲ “ಸುಳ್ಳು” ಮತ್ತು “ಜುಮ್ಲಾ”

ಶೇ. 93 ರಷ್ಟು ಮಾರ್ಗಗಳಲ್ಲಿ ಉಡಾನ್ ಯೋಜನೆ ಕೆಲಸ ಮಾಡಿಲ್ಲ ಎಂದು ಸಿಎಜಿ ವರದಿ ಹೇಳಿದೆ: ಖರ್ಗೆ

ಕೇಂದ್ರದ ಪ್ರಮುಖ ಉಡಾನ್ ಯೋಜನೆಯು ಶೇ. 93 ರಷ್ಟು ಮಾರ್ಗಗಳಲ್ಲಿ ಕೆಲಸ ಮಾಡಿಲ್ಲ ಎಂದು ಸಿಎಜಿ ವರದಿಯೇ ಎತ್ತಿ ತೋರಿಸಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ಹೇಳಿದ್ದಾರೆ.

Mallikarjun Kharge

ನವದೆಹಲಿ: ಕೇಂದ್ರದ ಪ್ರಮುಖ ಉಡಾನ್ ಯೋಜನೆಯು ಶೇ. 93 ರಷ್ಟು ಮಾರ್ಗಗಳಲ್ಲಿ ಕೆಲಸ ಮಾಡಿಲ್ಲ ಎಂದು ಸಿಎಜಿ ವರದಿಯೇ ಎತ್ತಿ ತೋರಿಸಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ಹೇಳಿದ್ದಾರೆ.

ಕೇಂದ್ರ ಸರ್ಕಾರದಿಂದ ಸಾಮಾನ್ಯ ಜನರಿಗೆ ಸಿಕ್ಕಿದ್ದು ಕೇವಲ “ಸುಳ್ಳು” ಮತ್ತು “ಜುಮ್ಲಾ” ಗಳು ಮಾತ್ರ ಎಂದು ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಜನಸಾಮಾನ್ಯರಿಗೆ ವಿಮಾನ ಪ್ರಯಾಣವನ್ನು ಕೈಗೆಟುಕುವಂತೆ ಮಾಡಲು 2016 ರ ಅಕ್ಟೋಬರ್ 21 ರಂದು ಉಡಾನ್ ಹೆಸರಿನಲ್ಲಿ ಪ್ರಾದೇಶಿಕ ವಿಮಾನಯಾನ ಸಂಪರ್ಕ ಯೋಜನೆಯನ್ನು ಕೇಂದ್ರ ಸರ್ಕಾರ ಪ್ರಾರಂಭಿಸಿತು. 

ಚಪ್ಪಲಿ ಧರಿಸಿದವರಿಗೆ ವಿಮಾನದಲ್ಲಿ ಪ್ರಯಾಣಿಸಲು ಅನುವು ಮಾಡಿಕೊಡುವ ಮೋದಿ ಸರ್ಕಾರದ ಭರವಸೆ “ಅವರ ಎಲ್ಲಾ ಭರವಸೆಗಳಂತೆ” ಇದು ಸಹ ಈಡೇರಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಟ್ವೀಟ್ ಮಾಡಿದ್ದಾರೆ.

“ಇದನ್ನು ನಾವು ಹೇಳುತ್ತಿಲ್ಲ, ಸಿಎಜಿ ವರದಿಯೇ ಇದನ್ನು ಹೇಳುತ್ತಿದೆ! ಯೋಜನೆ(ಉಡಾನ್) ಶೇ. 93 ರಷ್ಟು ಮಾರ್ಗಗಳಲ್ಲಿ ಕೆಲಸ ಮಾಡಲಿಲ್ಲ. ವಿಮಾನಯಾನ ಸಂಸ್ಥೆಗಳ ಸ್ವತಂತ್ರ ಲೆಕ್ಕಪರಿಶೋಧನೆ ಕೂಡ ಮಾಡಲಾಗಿಲ್ಲ. ಹೆಚ್ಚು ಪ್ರಚಾರ ಮಾಡಿದ ಹೆಲಿಕಾಪ್ಟರ್ ಸೇವೆಗಳು ಸಹ ಸ್ಥಗಿತಗೊಂಡಿವೆ” ಎಂದು ಖರ್ಗೆ  ಆರೋಪಿಸಿದ್ದಾರೆ.

“ಉಡಾನ್’ ಸಿಗಲಿಲ್ಲ, ಜನತೆಗೆ ಸಿಕ್ಕಿದ್ದು ಕೇವಲ ಸುಳ್ಳು ಭರವಸೆ ಮತ್ತು ಜುಮ್ಲಾಗಳು! ಅಂತಹ ಅಸಮರ್ಥ ಸರ್ಕಾರವನ್ನು ಭಾರತ ಈಗ ಕ್ಷಮಿಸುವುದಿಲ್ಲ!” ಎಂದು ಕಾಂಗ್ರೆಸ್ ಅಧ್ಯಕ್ಷರು ಹೇಳಿದ್ದಾರೆ. (ಕಪ್ರಡಾ)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *