


ಕೃಷಿ ಹುಟ್ಟುವಳಿಗಳ ಸಂಸ್ಕರಣ ಮತ್ತು ಮಾರಾಟ ಸಹಕಾರಿ ಸಂಘನಿ.ಸಿದ್ಧಾಪುರದ ವಾರ್ಷಿಕ ಸರ್ವಸಾಧಾರಣ ಸಭೆ ಆಗಸ್ಟ್ ೨೬ ರ ಶನಿವಾರ ಬೆಳಿಗ್ಗೆ ೧೧-೩೦ ಕ್ಕೆ ನಡೆಯಲಿದೆ. ಈ ಸಭೆಯಲ್ಲಿ ಸಂಘದ ಕೆಲವು ಸದಸ್ಯರಿಗೆ ಸನ್ಮಾನ ನಡೆಯಲಿದ್ದು ಸರ್ವಸದಸ್ಯರೂ ಸಕಾಲದಲ್ಲಿ ಹಾಜರಾಗಲು ಸಂಘದ ಅಧ್ಯಕ್ಷ ರಮಾನಂಧ ಹೆಗಡೆ ಮಳಗುಳಿ ಕೋರಿದ್ದಾರೆ.

ಸಮಾಜಮುಖಿ ಡಾಟ್ ನೆಟ್ ಪ್ರತಿನಿಧಿ ಜೊತೆ ಮಾತನಾಡಿದ ಅವರು ನನ್ನ ಅವಧಿಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತಿದ್ದೇನೆ. ಸಂಘದ ಸದಸ್ಯರು ಇಲ್ಲಿಯೇ ಹಣಕಾಸಿನ ವ್ಯವಹಾರ ಮಾಡಲು ಅನುಕೂಲವಾಗುವಂತೆ ಸಹಕಾರಿಯ ಬ್ಯಾಂಕಿಂಗ್ ವ್ಯವಸ್ಥೆಯೂ ಸೇರಿದಂತೆ ಸಂಸ್ಥೆಯ ಅಭಿವೃದ್ಧಿ,ಬೆಳವಣಿಗೆಗೆ ಪೂರಕ ಕೆಲಸ ಮಾಡಲು ಶಕ್ತಿ ಮೀರಿ ಪ್ರಯತ್ನಿಸುತಿದ್ದೇನೆ ಎಂದರು.
ಸಂಘದ ಸದಸ್ಯರ ಪ್ರಾಮಾಣಿಕ ವ್ಯವಹಾರ ಆಡಳಿತ ಮಂಡಳಿ ನಿರ್ಧೇಶಕರು, ಸಿಬ್ಬಂದಿಗಳ ಸಹಕಾರಗಳಿಂದ ಸಂಸ್ಥೆ ಅಭಿವೃದ್ಧಿ ಪಥದತ್ತ ಮುಖಮಾಡಿದ್ದು ವರ್ಷದಿಂದ ವರ್ಷಕ್ಕೆ ಲಾಭದ ಪ್ರಮಾಣ ಹೆಚ್ಚುತ್ತಿರುವುದು ಸಮಾಧಾನ ತಂದಿದೆ ಎಂದು ವಿವರಿಸಿದರು.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
