ಮಾಲ್ಗುಡಿ ಡೇಸ್‌ ನ ಅರಸಾಳು & ಕೃಷ್ಣಪ್ಪ

ತಾಳಗುಪ್ಪಕ್ಕೆ ರೈಲು ಸಂಚಾರ ನಿಂತು ಕೇವಲ ಡಬಲ್ ಡೆಕ್ಕರ್ ನಂತಹ ಎರಡು ಭೋಗಿಗಳು ಮಾತ್ರ ಹೊಂದಿದ್ದ ರೈಲು ಟಿಲ್ಲರ್ ನಷ್ಟು ವೇಗದಲ್ಲಿ ಬೆಳಿಗ್ಗೆ ಹೋಗಿ ಸಂಜೆ ಬರುತ್ತಿತ್ತು. ಇದರಲ್ಲಿ ಒಮ್ಮೆಯಾದರೂ ಹೋಗಿ ಬರಬೇಕು ಎಂಬ ಬಯಕೆ ಈಡೇರುವುದರ ಒಳಗೆ ಅದು ನಿಂತು ಹೋಯಿತು. ನಂತರ ಶಿವಮೊಗ್ಗವೇ ಕೊನೆಯ ನಿಲ್ದಾಣವಾಯಿತು. ಶಿವಮೊಗ್ಗದಿಂದ ಬೆಂಗಳೂರು, ಮೈಸೂರಿಗೆ, ಬೆಂಗಳೂರು, ಮೈಸೂರಿನಿಂದ ಶಿವಮೊಗ್ಗದವರೆಗೆ ಮಾತ್ರ ರೈಲಿತ್ತು. ಹಿರಿಯ ಸಾಹಿತಿಗಳಾದ ನಾ.ಡಿಸೋಜ, ವಿಲಿಯಂ ಮುಂತಾದವರ ರೈಲ್ವೆ ಇಲಾಖೆಯೊಂದಿಗಿನ ಹೋರಾಟದಲ್ಲಿ ಮತ್ತೆ ತಾಳಗುಪ್ಪದವರೆಗೆ ರೈಲುಗಳು ಹೋಗಿ ಬರಲು ಆರಂಭವಾಯಿತು. ಇದರಿಂದ ಈ ಭಾಗದ ಜನರಿಗೆ ಖುಷಿಯಾದರೂ ಒಂದು ಕೊರಗಿತ್ತು. ಅದೇನೆಂದರೆ ಶಿವಮೊಗ್ಗ ಮತ್ತು ತಾಳಗುಪ್ಪ ನಡುವೆ ಬ್ರಿಟಿಷರ ಕಾಲದಲ್ಲೂ ಇದ್ದ ಕೆಲವು ನಿಲ್ದಾಣಗಳಲ್ಲಿನ ರೈಲು ನಿಲುಗಡೆ ಹೊಸದಾಗಿ ರೈಲು ಆರಂಭವಾದಾಗ ಇರಲಿಲ್ಲ. ಅದರಲ್ಲಿ ಮುಖ್ಯವಾಗಿದ್ದು ರಿಪ್ಪನ್ ಪೇಟೆ ಸಮೀಪದ ಅರಸಾಳು ರೈಲ್ವೇ ಸ್ಟೇಷನ್.

‘ಅರಸಾಳು’ ಎಂಬ ಈ ಊರಿಗೂ ಕನ್ನಡಮೂಲದ ಇಂಗ್ಲಿಷ್ ಲೇಖಕ ಕೆ.ಆರ್.ನಾರಾಯಣ್ ಅವರ ‘ಮಾಲ್ಗುಡಿ ಡೇಸ್’ ಕೃತಿಯನ್ನಾಧರಿಸಿ ಕನ್ನಡ ಚಲನಚಿತ್ರನಟ ನಿರ್ದೇಶಕ ಶಂಕರ್ ನಾಗ್ ನಿರ್ದೇಶನದಲ್ಲಿ ಮೂಡಿಬಂದ ಅದೇ ಹೆಸರಿನ ಟಿವಿ ಧಾರವಾಹಿಗೂ ಸಂಬಂಧವಿದೆ. ನಾರಾಯಣ್ ಕಲ್ಪನೆಯ ಮಾಲ್ಗುಡಿ, ಕಲಾವಿದ ಜಾನ್ ದೇವರಾಜ್ ಅವರ ಕಲೆಯ ಕುಸುರಿಯಲ್ಲಿ ಅರಸಾಳು ರೈಲ್ವೇ ನಿಲ್ದಾಣದಲ್ಲಿ ಮೂರ್ತರೂಪ ಪಡೆದಿದೆ. ಈ ಪ್ರಯತ್ನದ ಹಿಂದೆ ಸಂಸದ ಬಿ.ವೈ ರಾಘವೇಂದ್ರ ಅವರ ದೊಡ್ಡ ಪಾತ್ರವಿದೆ. ಅರಸಾಳು ರೈಲ್ವೇ ನಿಲ್ದಾಣಕ್ಕೆ ‘ಮಾಲ್ಗುಡಿ ರೈಲ್ವೆ ನಿಲ್ದಾಣ’ ಎಂದು ಮರುನಾಮಕರಣ ಮಾಡಬೇಕೆಂಬ ಸಲಹೆಯಿದ್ದರೂ ಅದಕ್ಕೆ ಸ್ಥಳೀಯರ ವಿರೋಧವಿದೆ. ಸದ್ಯ ಇದು ‘ಅರಸಾಳು ರೈಲ್ವೆ ನಿಲ್ದಾಣ’ವಾಗಿಯೇ ಮುಂದುವರೆದಿದೆ.

ತಾಳಗುಪ್ಪಕ್ಕೆ ಅರಸಾಳು ಮೂಲಕ ರೈಲು ಸಂಚರಿಸುವುದು ಆರಂಭವಾದರೂ ಇಲ್ಲಿ ನಿಲುಗಡೆ ಕೊಡುತ್ತಿಲ್ಲ. ಇಲ್ಲಿ ನಿಲುಗಡೆ ಕೊಡಬೇಕು ಎಂದು ಹೋರಾಟಗಾರ ರಿಪ್ಪನ್ ಪೇಟೆಯ ಟಿ.ಆರ್.ಕೃಷ್ಣಪ್ಪ ಹಲವು ಹೋರಾಟಗಳನ್ನು ನಡೆಸಿದ್ದರು. ರೈಲಿಗೆ ತಡೆ ಒಡ್ಡಿದ್ದರು. ರೈಲು ಹಳಿಗಳ ಮೇಲೆ ಮಲಗಿ ಪ್ರತಿಭಟಿಸಿದ್ದರು. ಆದರೆ ಯಾವುದೂ ಫಲ ಕೊಟ್ಟಿರಲಿಲ್ಲ. ತಿಂಗಳ ಹಿಂದೆ ಅವರಿಗೆ ಯೋಚನೆಯೊಂದು ಬಂದಿದೆ. ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದೆ. ಈ ಸಂದರ್ಭದಲ್ಲಿ ರಾಜಕಾರಣಿಗಳು ತುಂಬ ಜಾಗರೂಕರಾಗಿರುತ್ತಾರೆ ಎಂದು ಮನಸ್ಸಿಗೆ ಬಂದ ತಕ್ಷಣ ಕೃಷ್ಣಪ್ಪನವರು ಸಂಸದ ಬಿ.ವೈ ರಾಘವೇಂದ್ರ ಅವರಿಗೆ ಫೋನ್ ಮಾಡಿದ್ದಾರೆ. ಅವರು ಸ್ವೀಕರಿಸಿಲ್ಲ. ಅವರ ಆಪ್ತ ಕಾರ್ಯದರ್ಶಿಗಳಿಗೆ ಫೋನ್ ಮಾಡಿದ್ದಾರೆ. ಸಂಸದರಿಗೆ ಸಂಪರ್ಕ ಕೊಡಲು ವಿನಂತಿಸಿದ್ದಾರೆ. ಅದು ಸಾಧ್ಯವಾಗಿಲ್ಲ. ಮತ್ತೆ ಆಪ್ತ ಕಾರ್ಯದರ್ಶಿಗಳಿಗೆ ಫೋನ್ ಮಾಡಿ ಅರಸಾಳುವಿನಲ್ಲಿ ರೈಲು ನಿಲುಗಡೆ ಕೊಡದಿದ್ದರೆ ತಾನು ಕೇಂದ್ರ ಸರ್ಕಾರದ ಬೇಜವಾಬ್ದಾರಿಯ ಬಗ್ಗೆ ದಿನನಿತ್ಯ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಬಹುಷಃ ಇದು ಸಂಸದರ ಗಮನ ಸೆಳೆದಿರಬೇಕು. ಅವರು ತಕ್ಷಣ ಕೇಂದ್ರ ರೈಲ್ವೆ ಇಲಾಖೆಗೆ ಪತ್ರ ಬರೆದು ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ರೈಲು ನಿಲುಗಡೆ ಕೊಡಲು ವಿನಂತಿಸಿದ್ದಾರೆ. ರೈಲ್ವೆ ಇಲಾಖೆ ಅನುಮತಿ ನೀಡಿದೆ.

ಮೊನ್ನೆ ಅರಸಾಳು ಮತ್ತು ಕುಂಸಿಯಲ್ಲಿ ರೈಲು ನಿಲುಗಡೆ ಕೊಡಲು ಅನುಮತಿ ಸಿಕ್ಕ ಬಗ್ಗೆ ಜನ ವಿಜಯೋತ್ಸವ ಆಚರಿಸಿದ್ದಾರೆ. ಸಂಸದರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಕೃಷ್ಣಪ್ಪ ಅನಾಮಿಕರಾಗಿಯೇ ಉಳಿದಿದ್ದಾರೆ. ಆ ಕಾರಣಕ್ಕೆ ಈ ಟಿಪ್ಪಣಿ ಬರೆಯಬೇಕಾಯಿತು! (sarjashankar harlimath)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *