ಮಾಲ್ಗುಡಿ ಡೇಸ್‌ ನ ಅರಸಾಳು & ಕೃಷ್ಣಪ್ಪ

ತಾಳಗುಪ್ಪಕ್ಕೆ ರೈಲು ಸಂಚಾರ ನಿಂತು ಕೇವಲ ಡಬಲ್ ಡೆಕ್ಕರ್ ನಂತಹ ಎರಡು ಭೋಗಿಗಳು ಮಾತ್ರ ಹೊಂದಿದ್ದ ರೈಲು ಟಿಲ್ಲರ್ ನಷ್ಟು ವೇಗದಲ್ಲಿ ಬೆಳಿಗ್ಗೆ ಹೋಗಿ ಸಂಜೆ ಬರುತ್ತಿತ್ತು. ಇದರಲ್ಲಿ ಒಮ್ಮೆಯಾದರೂ ಹೋಗಿ ಬರಬೇಕು ಎಂಬ ಬಯಕೆ ಈಡೇರುವುದರ ಒಳಗೆ ಅದು ನಿಂತು ಹೋಯಿತು. ನಂತರ ಶಿವಮೊಗ್ಗವೇ ಕೊನೆಯ ನಿಲ್ದಾಣವಾಯಿತು. ಶಿವಮೊಗ್ಗದಿಂದ ಬೆಂಗಳೂರು, ಮೈಸೂರಿಗೆ, ಬೆಂಗಳೂರು, ಮೈಸೂರಿನಿಂದ ಶಿವಮೊಗ್ಗದವರೆಗೆ ಮಾತ್ರ ರೈಲಿತ್ತು. ಹಿರಿಯ ಸಾಹಿತಿಗಳಾದ ನಾ.ಡಿಸೋಜ, ವಿಲಿಯಂ ಮುಂತಾದವರ ರೈಲ್ವೆ ಇಲಾಖೆಯೊಂದಿಗಿನ ಹೋರಾಟದಲ್ಲಿ ಮತ್ತೆ ತಾಳಗುಪ್ಪದವರೆಗೆ ರೈಲುಗಳು ಹೋಗಿ ಬರಲು ಆರಂಭವಾಯಿತು. ಇದರಿಂದ ಈ ಭಾಗದ ಜನರಿಗೆ ಖುಷಿಯಾದರೂ ಒಂದು ಕೊರಗಿತ್ತು. ಅದೇನೆಂದರೆ ಶಿವಮೊಗ್ಗ ಮತ್ತು ತಾಳಗುಪ್ಪ ನಡುವೆ ಬ್ರಿಟಿಷರ ಕಾಲದಲ್ಲೂ ಇದ್ದ ಕೆಲವು ನಿಲ್ದಾಣಗಳಲ್ಲಿನ ರೈಲು ನಿಲುಗಡೆ ಹೊಸದಾಗಿ ರೈಲು ಆರಂಭವಾದಾಗ ಇರಲಿಲ್ಲ. ಅದರಲ್ಲಿ ಮುಖ್ಯವಾಗಿದ್ದು ರಿಪ್ಪನ್ ಪೇಟೆ ಸಮೀಪದ ಅರಸಾಳು ರೈಲ್ವೇ ಸ್ಟೇಷನ್.

‘ಅರಸಾಳು’ ಎಂಬ ಈ ಊರಿಗೂ ಕನ್ನಡಮೂಲದ ಇಂಗ್ಲಿಷ್ ಲೇಖಕ ಕೆ.ಆರ್.ನಾರಾಯಣ್ ಅವರ ‘ಮಾಲ್ಗುಡಿ ಡೇಸ್’ ಕೃತಿಯನ್ನಾಧರಿಸಿ ಕನ್ನಡ ಚಲನಚಿತ್ರನಟ ನಿರ್ದೇಶಕ ಶಂಕರ್ ನಾಗ್ ನಿರ್ದೇಶನದಲ್ಲಿ ಮೂಡಿಬಂದ ಅದೇ ಹೆಸರಿನ ಟಿವಿ ಧಾರವಾಹಿಗೂ ಸಂಬಂಧವಿದೆ. ನಾರಾಯಣ್ ಕಲ್ಪನೆಯ ಮಾಲ್ಗುಡಿ, ಕಲಾವಿದ ಜಾನ್ ದೇವರಾಜ್ ಅವರ ಕಲೆಯ ಕುಸುರಿಯಲ್ಲಿ ಅರಸಾಳು ರೈಲ್ವೇ ನಿಲ್ದಾಣದಲ್ಲಿ ಮೂರ್ತರೂಪ ಪಡೆದಿದೆ. ಈ ಪ್ರಯತ್ನದ ಹಿಂದೆ ಸಂಸದ ಬಿ.ವೈ ರಾಘವೇಂದ್ರ ಅವರ ದೊಡ್ಡ ಪಾತ್ರವಿದೆ. ಅರಸಾಳು ರೈಲ್ವೇ ನಿಲ್ದಾಣಕ್ಕೆ ‘ಮಾಲ್ಗುಡಿ ರೈಲ್ವೆ ನಿಲ್ದಾಣ’ ಎಂದು ಮರುನಾಮಕರಣ ಮಾಡಬೇಕೆಂಬ ಸಲಹೆಯಿದ್ದರೂ ಅದಕ್ಕೆ ಸ್ಥಳೀಯರ ವಿರೋಧವಿದೆ. ಸದ್ಯ ಇದು ‘ಅರಸಾಳು ರೈಲ್ವೆ ನಿಲ್ದಾಣ’ವಾಗಿಯೇ ಮುಂದುವರೆದಿದೆ.

ತಾಳಗುಪ್ಪಕ್ಕೆ ಅರಸಾಳು ಮೂಲಕ ರೈಲು ಸಂಚರಿಸುವುದು ಆರಂಭವಾದರೂ ಇಲ್ಲಿ ನಿಲುಗಡೆ ಕೊಡುತ್ತಿಲ್ಲ. ಇಲ್ಲಿ ನಿಲುಗಡೆ ಕೊಡಬೇಕು ಎಂದು ಹೋರಾಟಗಾರ ರಿಪ್ಪನ್ ಪೇಟೆಯ ಟಿ.ಆರ್.ಕೃಷ್ಣಪ್ಪ ಹಲವು ಹೋರಾಟಗಳನ್ನು ನಡೆಸಿದ್ದರು. ರೈಲಿಗೆ ತಡೆ ಒಡ್ಡಿದ್ದರು. ರೈಲು ಹಳಿಗಳ ಮೇಲೆ ಮಲಗಿ ಪ್ರತಿಭಟಿಸಿದ್ದರು. ಆದರೆ ಯಾವುದೂ ಫಲ ಕೊಟ್ಟಿರಲಿಲ್ಲ. ತಿಂಗಳ ಹಿಂದೆ ಅವರಿಗೆ ಯೋಚನೆಯೊಂದು ಬಂದಿದೆ. ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದೆ. ಈ ಸಂದರ್ಭದಲ್ಲಿ ರಾಜಕಾರಣಿಗಳು ತುಂಬ ಜಾಗರೂಕರಾಗಿರುತ್ತಾರೆ ಎಂದು ಮನಸ್ಸಿಗೆ ಬಂದ ತಕ್ಷಣ ಕೃಷ್ಣಪ್ಪನವರು ಸಂಸದ ಬಿ.ವೈ ರಾಘವೇಂದ್ರ ಅವರಿಗೆ ಫೋನ್ ಮಾಡಿದ್ದಾರೆ. ಅವರು ಸ್ವೀಕರಿಸಿಲ್ಲ. ಅವರ ಆಪ್ತ ಕಾರ್ಯದರ್ಶಿಗಳಿಗೆ ಫೋನ್ ಮಾಡಿದ್ದಾರೆ. ಸಂಸದರಿಗೆ ಸಂಪರ್ಕ ಕೊಡಲು ವಿನಂತಿಸಿದ್ದಾರೆ. ಅದು ಸಾಧ್ಯವಾಗಿಲ್ಲ. ಮತ್ತೆ ಆಪ್ತ ಕಾರ್ಯದರ್ಶಿಗಳಿಗೆ ಫೋನ್ ಮಾಡಿ ಅರಸಾಳುವಿನಲ್ಲಿ ರೈಲು ನಿಲುಗಡೆ ಕೊಡದಿದ್ದರೆ ತಾನು ಕೇಂದ್ರ ಸರ್ಕಾರದ ಬೇಜವಾಬ್ದಾರಿಯ ಬಗ್ಗೆ ದಿನನಿತ್ಯ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಬಹುಷಃ ಇದು ಸಂಸದರ ಗಮನ ಸೆಳೆದಿರಬೇಕು. ಅವರು ತಕ್ಷಣ ಕೇಂದ್ರ ರೈಲ್ವೆ ಇಲಾಖೆಗೆ ಪತ್ರ ಬರೆದು ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ರೈಲು ನಿಲುಗಡೆ ಕೊಡಲು ವಿನಂತಿಸಿದ್ದಾರೆ. ರೈಲ್ವೆ ಇಲಾಖೆ ಅನುಮತಿ ನೀಡಿದೆ.

ಮೊನ್ನೆ ಅರಸಾಳು ಮತ್ತು ಕುಂಸಿಯಲ್ಲಿ ರೈಲು ನಿಲುಗಡೆ ಕೊಡಲು ಅನುಮತಿ ಸಿಕ್ಕ ಬಗ್ಗೆ ಜನ ವಿಜಯೋತ್ಸವ ಆಚರಿಸಿದ್ದಾರೆ. ಸಂಸದರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಕೃಷ್ಣಪ್ಪ ಅನಾಮಿಕರಾಗಿಯೇ ಉಳಿದಿದ್ದಾರೆ. ಆ ಕಾರಣಕ್ಕೆ ಈ ಟಿಪ್ಪಣಿ ಬರೆಯಬೇಕಾಯಿತು! (sarjashankar harlimath)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *