


ಸಿದ್ದಾಪುರ: ಮಳೆಯ ಕೊರತೆ, ಹವಾಮಾನ ವೈಪರಿತ್ಯಗಳಿಂದ ಭತ್ತ ಹಾಗೂ ಅಡಿಕೆ ಮೇಲೆ ತುಂಬಾ ದುಷ್ಪರಿಣಾಮ ಉಂಟಾಗುತ್ತಿದ್ದು, ರೈತರು ಒಂದೇ ಬೆಳೆಗೆ ಸೀಮಿತರಾಗದೆ ವಿವಿಧ ಬೆಳೆಗಳನ್ನು ಬೆಳೆಯಬೇಕು ಎಂದು ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ಕರೆ ನೀಡಿದರು.
ತೋಟಗಾರಿಕಾ ಇಲಾಖೆ, ತೋಟಗಾರಿಕಾ ಕಾಲೇಜು ಶಿರಸಿ ವತಿಯಿಂದ 2023-24ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ ಬಿಳಗಿಯ ಮಧುವನ ಹಾಗೂ ಜೇನುಗಾರಿಕಾ ತರಬೇತಿ ಕೇಂದ್ರದಲ್ಲಿ ಜೇನುಗಾರಿಕಾ ಕೌಶಲ್ಯ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಕೃಷಿಯಲ್ಲಿ ಎಲ್ಲರೂ ಶ್ರದ್ಧೆಯಿಂದ ಕೆಲಸ ಮಾಡಬೇಕು. ರೈತರು ಕೇವಲ ಒಂದು ಬೆಳೆಯನ್ನು ಮಾತ್ರ ಅವಲಂಬಿ ಸಿರಬಾರದು. ಜೇನುಗಾರಿಕೆ, ಮೀನುಗಾರಿಕೆ ಮುಂತಾದ ಉಪ ಕೃಷಿಗೆ ಆದ್ಯತೆ ನೀಡಬೇಕು. ನಿತ್ಯದ ಚಟುವಟಿಕೆಯ ಜತೆಗೆ ಜೇನು ಕೃಷಿಯನ್ನು ಕೈಗೊಳ್ಳಿ. ಸರ್ಕಾರದಿಂದ ಜೇನು ಕೃಷಿಗೆ ಹೆಚ್ಚಿನ ಸಹಾಯಧನ ನೀಡುತ್ತಿದ್ದು, ಕೃಷಿಕರು ಸದುಪಯೋಗ ಪಡೆದುಕೊಂಡು ಆರ್ಥಿಕ ಸ್ವಾವಲಂಬ ನೆ ಸಾಧಿಸಬೇಕು. ಮಹಿಳೆಯರು ಕೂಡ ಆಸಕ್ತಿ ವಹಿಸಿ ಜೇನುಕೃಷಿಯಲ್ಲಿ ತೋಡಗುವಂತೆ ಕರೆ ನೀಡಿದರು.


ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಬಿ.ಪಿ.ಸತೀಶ ಪ್ರಾಸ್ತಾವಿಕ ಮಾತನಾಡಿ, ಮಾರಣಾಂತಿಕ ರೋಗದಿಂದಾಗಿ 90ರ ದಶಕದಲ್ಲಿ ಜೇನು ಸಂತತಿ ನಾಶವಾಗಿತ್ತು. ಕ್ರಮೇಣ ಚೇತರಿಸಿಕೊಂಡಿದೆ. ತೋಟಗಾರಿಕಾ ಬೆಳೆಗಳಲ್ಲಿ ಜೇನಿನಿಂದಲೆ 80% ಪರಾಗಸ್ಪರ್ಷವಾಗುತ್ತದೆ. ಇತ್ತೀಚೆಗೆ ಜೇನು ಕೃಷಿಗೆ ಇಲಾಖೆಯಿಂದ 75% ಸಹಾಯಧನ ನೀಡಲಾಗುತ್ತಿದ್ದು, ರೈತರು ಪ್ರಯೋಜನ ಪಡೆದುಕೊಳ್ಳಬೇಕು ಎಂದರು.
ಬಿಳಗಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಮಹೇಶ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ಗ್ರಾಪಂ ಉಪಾಧ್ಯಕ್ಷೆ ಸುವರ್ಣಾ ನಾಯ್ಕ, ಸದಸ್ಯರಾದ ವಸಂತ ನಾಯ್ಕ, ರಾಜು ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಅರುಣ್ ಎಚ್.ಜಿ., ಸ್ವಾಗತಿಸಿದರು. ಇಲಾಖೆಯ ಅಧಿಕಾರಿ ಮಹಾಬಲೇಶ್ವರ ನಿರೂಪಿಸಿದರು.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
