ವಿಶ್ವಮಾನವತ್ವದ ದಾರ್ಶನಿಕ ನಾರಾಯಣ ಗುರು‌

ಸ್ವಾಮಿ ವಿವೇಕಾನಂದರೇ ಮನೋರೋಗಿಗಳ ಆಸ್ಫತ್ರೆ ಎಂದು ಕೈ ಚೆಲ್ಲಿದ್ದ ಕೇರಳ, ಮಹಾತ್ಮಾಗಾಂಧೀಜಿಯವರಿಗೆ ಅಸ್ಪೃಶ್ಯತೆಯ ತಿಳುವಳಿಕೆ ಮೂಡಿಸಿದ ಕೇರಳ ಜಗತ್ತಿನ ಭೂಪಟದಲ್ಲಿ ಪ್ರಜ್ವಲಿಸುವಂತೆ ಮಾಡಿದ್ದು ಬ್ರಹ್ಮಶ್ರೀ ನಾರಾಯಣಗುರುಗಳ ಸಾಧನೆ ಎಂದು ಬಣ್ಣಿಸಿದ ಪತ್ರಕರ್ತ ಕೋಲಶಿರಸಿ ಕನ್ನೇಶ್‌ ನಾರಾಯಣ ಗುರು ವಿಶ್ವಕ್ಕೇ ದಾರಿ ತೋರಿದ ದಾರ್ಶನಿಕ ಎಂದರು.

ಹೊನ್ನಾವರದ ನಾಮಧಾರಿ ವಿದ್ಯಾರ್ಥಿ ಸಭಾ ಭವನದಲ್ಲಿ ನಡೆದ ಜಿಲ್ಲಾ ಮಟ್ಟದ ನಾರಾಯಣ ಗುರು ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಅವರು ಕೇರಳ ಒಂದು ದಿನದಲ್ಲಿ ನಿರ್ಮಾಣವಾದ್ದಲ್ಲ ದೇವಾಲಯ ಪ್ರವೇಶ, ಶಾಲಾ ಪ್ರವೇಶಕ್ಕೆ ಅಡ್ಡಿ ಮಾಡಿದ್ದ ಪುರೋಹಿತಶಾಹಿಗಳ ವಿರುದ್ಧ ರಕ್ತರಹಿತ ಕ್ರಾಂತಿ ಮಾಡಿ ಕೇರಳವನ್ನು ಭಾರತದ ಅಭಿವೃದ್ಧಿ ಹೊಂದಿದ ರಾಜ್ಯ ಮಾಡಿದ ನಾರಾಯಣ ಗುರುಗಳ ವಿಶ್ವಮಾನವತ್ವದ ತತ್ವ, ಸಿದ್ಧಾಂತ,ಸಾಧನೆಗಳು ಈಗಲೂ ಮಾರ್ಗದರ್ಶಿ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಮಾತನಾಡಿ ನಾನೂ ಕೂಡಾ ನಾರಾಯಣ ಗುರುಗಳ ಮಾರ್ಗದರ್ಶನದಿಂದಲೇ ನಾಯಕನಾದವನು ಎಂದರು.

ಕಾರ್ಯಕ್ರಮದ ಸಂಯೋಜಕ ಸಂಘಟನೆಗಳಾದ ಈಡಿಗ ರಾಷ್ಟ್ರೀಯ ಮಹಾಮಂಡಳಿ ಜಿಲ್ಲಾಧ್ಯಕ್ಷ ವೀರಭದ್ರ ನಾಯ್ಕ, ಬಿ.ಎಸ್.ಎನ್ಡಿ.ಪಿ.‌ ತಾಲೂಕಾಧ್ಯಕ್ಷ ಧನಂಜಯ ನಾಯ್ಕ ಸೇರಿದಂತೆ ಕೆಲವರು ಮಾತನಾಡಿದರು.

ಪ್ರಾಸ್ಥಾವಿಕ ಭಾಷಣ ಮಾಡಿದ ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ್‌ ಅಸ್ಪೃಶ್ಯತೆ,ಶೋಷಣೆ ವಿರುದ್ಧ ಹೋರಾಡಿ ಸಮಾಜ ಸುಧಾರಣೆ ಮಾಡಿದ ನಾರಾಯಣ ಗುರು ದೇಶಕ್ಕೇ ಬೆಳಕು ನೀಡಿದ ಸಂತ ಎಂದರು.

ಇದೇ ಸಂದರ್ಭದಲ್ಲಿ ಸಚಿವ ಮಂಕಾಳು ವೈದ್ಯ ಮತ್ತು ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ್‌ ರನ್ನು ಈಡಿಗ ರಾಷ್ಟ್ರೀಯ ಮಹಾ ಮಂಡಳಿ ಪರವಾಗಿ ಅಭಿನಂದಿಸಲಾಯಿತು. ತಾಲೂಕಾ ಬಿ.ಎಸ್. ಎನ್.ಡಿ.ಪಿ. ಪರವಾಗಿ ಪತ್ರಕರ್ತ ಕನ್ನೇಶ್‌ ನಾಯ್ಕ ಕೋಲಶಿರ್ಸಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *