ಭಾರತದ ರಾಜಕೀಯ ಪಕ್ಷಗಳಲ್ಲಿ ಅತಿ ಶ್ರೀಮಂತ ಪಕ್ಷ ಯಾವುದು? ಅದರ ಒಟ್ಟೂ ಸಂಪತ್ತು ಎಷ್ಟು ಗೊತ್ತೆ?

ಬಿಜೆಪಿ ಸಂಪತ್ತು 6,046 ಕೋಟಿ ರೂ., ಕಾಂಗ್ರೆಸ್ 805 ಕೋಟಿ ರೂ. ಆಸ್ತಿ ಹೊಂದಿದೆ

ದೇಶದ ಎಂಟು ರಾಷ್ಟ್ರೀಯ ಪಕ್ಷಗಳು 2021-22ರಲ್ಲಿ ಒಟ್ಟು 8,829.16 ಕೋಟಿ ರೂ. ಆಸ್ತಿ ಘೋಷಿಸಿಕೊಂಡಿವೆ. ಈ ಪೈಕಿ ಆಡಳಿತರೂಢ ಬಿಜೆಪಿ ಅತ್ಯಂತ ಶ್ರೀಮಂತ ಪಕ್ಷವಾಗಿದ್ದು, 6,046 ಕೋಟಿ ರೂಪಾಯಿ ಆಸ್ತಿ ಘೋಷಿಸಿಕೊಂಡಿದೆ.

Congress_BJP_Casual_Images1

ನವದೆಹಲಿ: ದೇಶದ ಎಂಟು ರಾಷ್ಟ್ರೀಯ ಪಕ್ಷಗಳು 2021-22ರಲ್ಲಿ ಒಟ್ಟು 8,829.16 ಕೋಟಿ ರೂ. ಆಸ್ತಿ ಘೋಷಿಸಿಕೊಂಡಿವೆ. ಈ ಪೈಕಿ ಆಡಳಿತರೂಢ ಬಿಜೆಪಿ ಅತ್ಯಂತ ಶ್ರೀಮಂತ ಪಕ್ಷವಾಗಿದ್ದು, 6,046 ಕೋಟಿ ರೂಪಾಯಿ ಆಸ್ತಿ ಘೋಷಿಸಿಕೊಂಡಿದೆ.

2020-21ರಲ್ಲಿ ಈ ಎಂಟು ರಾಷ್ಟ್ರೀಯ ಪಕ್ಷಗಳ ಒಟ್ಟು ಆಸ್ತಿ 7,297.62 ಕೋಟಿ ರೂ.ಗಳಷ್ಟಿತ್ತು ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್(ಎಡಿಆರ್) ವರದಿ ಮಾಡಿದೆ.

Ads by

ಎಂಟು ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್, ಎನ್‌ಸಿಪಿ, ಬಿಎಸ್‌ಪಿ, ಸಿಪಿಐ, ಸಿಪಿಐ(ಎಂ), ಎಐಟಿಸಿ ಮತ್ತು ಎನ್‌ಪಿಇಪಿ ಘೋಷಿಸಿದ 2020-21 ಮತ್ತು 2021-22ನೇ ಸಾಲಿನ ಆಸ್ತಿ ಮತ್ತು ಹೊಣೆಗಾರಿಕೆಗಳನ್ನು ಎಡಿಆರ್ ವಿಶ್ಲೇಷಿಸಿದೆ. 

ಎಡಿಆರ್ ಪ್ರಕಾರ, 2020-21ರ ಆರ್ಥಿಕ ವರ್ಷದಲ್ಲಿ, ಬಿಜೆಪಿಯು 4,990 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಘೋಷಿಸಿಕೊಂಡಿತ್ತು. 2021-22 ರಲ್ಲಿ ಕೇಸರಿ ಪಕ್ಷದ ಆಸ್ತಿ 6,046.81 ಕೋಟಿಗೆ ಅಂದರೆ ಶೇ. 21.17 ರಷ್ಟು ಹೆಚ್ಚಾಗಿದೆ. 

2020-21ರಲ್ಲಿ ಕಾಂಗ್ರೆಸ್‌ ಘೋಷಿತ ಆಸ್ತಿ 691.11 ಕೋಟಿ ರೂ.ಗಳಷ್ಟಿತ್ತು. ಇದು 2021-22ರಲ್ಲಿ ಶೇ.16.58 ರಷ್ಟು ಏರಿಕೆಯಾಗಿ 805.68 ಕೋಟಿ ರೂ.ಗೆ ತಲುಪಿದೆ. ಬಿಎಸ್ಪಿ ತನ್ನ ವಾರ್ಷಿಕ ಘೋಷಿತ ಆಸ್ತಿಯಲ್ಲಿ ಇಳಿಕೆಯನ್ನು ತೋರಿಸಿರುವ ಏಕೈಕ ರಾಷ್ಟ್ರೀಯ ಪಕ್ಷವಾಗಿದೆ ಎಂದು ವರದಿ ಹೇಳಿದೆ.

2020-21 ಮತ್ತು 2021-22 ರ ನಡುವೆ BSP ಯ ಒಟ್ಟು ಆಸ್ತಿ 732.79 ಕೋಟಿಯಿಂದ 690.71 ಕೋಟಿಗೆ ಶೇಕಡಾ ಅಂದರೆ 5.74 ರಷ್ಟು ಕಡಿಮೆಯಾಗಿದೆ. ಟಿಎಂಸಿಯ ಒಟ್ಟು ಆಸ್ತಿ 2020-21ರಲ್ಲಿ ರೂ.182.001 ಕೋಟಿಯಿಂದ ರೂ.458.10 ಕೋಟಿ ರೂ.ಗೆ ಏರಿಕೆಯಾಗಿದ್ದು, ಶೇ.151.70ರಷ್ಟು ಹೆಚ್ಚಳವಾಗಿದೆ ಎಂದು ಎಡಿಆರ್ ತಿಳಿಸಿದೆ. (kpc)

https://samajamukhi.net/2023/08/29/ramakrishna-hegade-memory-sirsi-siddapur/

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *