ಸನಾತನ ಹಿಂದೂ ಧರ್ಮ….!? ಪ್ರೀಯಾಂಕ್‌,ಸಂತೋಷ್‌ ಟ್ವೀಟ್‌ ವಾರ್!‌

ಸಮಾಜದಲ್ಲಿ ಈ ನಿಯಮಗಳನ್ನು ಮಾಡಿದವರು ಯಾರು?
    ಕೆಲವರಿಗೆ ಇತರರಿಗೆ ಹೆಚ್ಚು ಹಕ್ಕುದಾರಿಕೆ ಸಿಗಲು ಕಾರಣವಾಗಿದ್ದು ಏನು?
    ನಮ್ಮನ್ನು ಜಾತಿಯ ಆಧಾರದಲ್ಲಿ ವಿಭಜನೆ ಮಾಡಿದವರು ಯಾರು?
    ಕೆಲವು ಮನುಷ್ಯರು ಯಾಕೆ ಅಸ್ಪೃಶ್ಯರು?
    ಅವರು ಇವತ್ತಿಗೂ ದೇವಸ್ಥಾನ ಪ್ರವೇಶಿಸುವಂತಿಲ್ಲ ಯಾಕೆ?
    ಮಹಿಳೆಯರನ್ನು ಕೀಳಾಗಿ ಕಾಣುವ ಪದ್ಧತಿಗಳನ್ನು ಆರಂಭ ಮಾಡಿದ್ದು ಯಾರು?
    ಅಸಮಾನತೆ ಮತ್ತು ದಮನಕಾರಿ ನೀತಿಗೆ ಕಾರಣವಾದ ಸಾಮಾಜಿಕ ಸ್ವರೂಪ ಆಧರಿತ ಜಾತಿ ಪದ್ಧತಿಯನ್ನು ಜಾರಿಗೆ ತಂದವರು ಯಾರು?

ಒಂದು ವೇಳೆ ಹೊಟ್ಟೆಯಲ್ಲಿ ಸೋಂಕು ಇದ್ದರೆ ನೀವು ತಲೆಯನ್ನೇ ಕತ್ತರಿಸುತ್ತೀರಾ? ಸಂತೋಷ್ ಟ್ವೀಟ್ – ಖರ್ಗೆ ತಿರುಗೇಟು!

ಬಿ.ಎಲ್‌. ಸಂತೋಷ್‌ ಜಿ.. ಸೋಂಕು ಇದೆ ಎನ್ನುವುದನ್ನು ಒಪ್ಪಿಕೊಂಡ್ರಲ್ವಾ? ಅಷ್ಟು ಸಾಕು ಎಂದಿದ್ದಾರೆ. ಯಾವ ಧರ್ಮವು ಸಮಾನತೆಯನ್ನು ಪ್ರತಿಪಾದಿಸುವುದಿಲ್ಲವೋ? ಯಾವುದು ಮಾನವ ಘನತೆಯನ್ನು ಖಾತ್ರಿಪಡಿಸುವುದಿಲ್ಲವೋ ನನ್ನ ಪ್ರಕಾರ ಅದು ಧರ್ಮವೇ ಅಲ್ಲ.

B L santhosh and priyank kharge

ಬೆಂಗಳೂರು: ಸಚಿವ ಉದಯನಿಧಿ ಸ್ಟಾಲಿನ್ ಅವರು ‘ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು’ ಎಂಬ ಹೇಳಿಕೆಗೆ ಸಚಿವ ಪ್ರಿಯಾಂಕ್ ಖರ್ಗೆ ಅವರ ಪ್ರತಿಕ್ರಿಯೆಯ ಕುರಿತು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಆಕ್ರೋಶ ಹೊರ ಹಾಕಿ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಸಮಾನತೆಯನ್ನು ಉತ್ತೇಜಿಸದ ಅಥವಾ ಮಾನವನ ಘನತೆಯನ್ನು ಖಚಿತಪಡಿಸಿಕೊಳ್ಳದ ಯಾವುದೇ ಧರ್ಮ ನನ್ನ ಪ್ರಕಾರ ಧರ್ಮವಲ್ಲ. ಸಮಾನ ಹಕ್ಕುಗಳನ್ನು ನೀಡದ ಅಥವಾ ನಿಮ್ಮನ್ನು ಮನುಷ್ಯರಂತೆ ನಡೆಸಿಕೊಳ್ಳದ ಯಾವುದೇ ಧರ್ಮವು ರೋಗದಷ್ಟೇ ಕೆಟ್ಟದ್ದು” ಎಂದು ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದರು. ತಿರುಗೇಟು ನೀಡಿರುವ ಬಿ.ಎಲ್. ಸಂತೋಷ್ ‘ಹಾಗಾದರೆ ಯಾರಿಗಾದರೂ ಹೊಟ್ಟೆಯಲ್ಲಿ ಸೋಂಕು ಇದ್ದರೆ, ನೀವು ತಲೆಯನ್ನು ಕತ್ತರಿಸುತ್ತೀರಾ??’ ಎಂದು ಪ್ರಶ್ನಿಸಿದ್ದಾರೆ.

ಬಿಎಲ್ ಸಂತೋಷ್ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಗ್ರಾಮೀಣಾಭಿವೃದ್ಧ ಸಚಿವ ಪ್ರಿಯಾಂಕ್ ಖರ್ಗೆ, ʻಬಿ.ಎಲ್‌. ಸಂತೋಷ್‌ಜಿ.. ಸೋಂಕು ಇದೆ ಎನ್ನುವುದನ್ನು ಒಪ್ಪಿಕೊಂಡ್ರಲ್ವಾ? ಅಷ್ಟು ಸಾಕುʼʼ ಎಂದಿದ್ದಾರೆ. ಯಾವ ಧರ್ಮವು ಸಮಾನತೆಯನ್ನು ಪ್ರತಿಪಾದಿಸುವುದಿಲ್ಲವೋ? ಯಾವುದು ಮಾನವ ಘನತೆಯನ್ನು ಖಾತ್ರಿಪಡಿಸುವುದಿಲ್ಲವೋ ನನ್ನ ಪ್ರಕಾರ ಅದು ಧರ್ಮವೇ ಅಲ್ಲ. ಯಾವ ಧರ್ಮವು ಸಮಾನವಾದ ಹಕ್ಕುಗಳನ್ನು ನೀಡುವುದಿಲ್ಲವೋ, ಯಾವುದು ನಿಮ್ಮನ್ನು ಮನುಷ್ಯರಂತೆ ನೋಡುವುದಿಲ್ಲವೋ ಅದು ಒಂದು ರೋಗವೇ.. ಎಂದು ಪ್ರಿಯಾಂಕ್‌ ಖರ್ಗೆ ಹೇಳಿದ್ದರು.

‘ಹಾಗಾದರೆ ಯಾರಿಗಾದರೂ ಹೊಟ್ಟೆಯಲ್ಲಿ ಸೋಂಕು ಇದ್ದರೆ, ನೀವು ತಲೆಯನ್ನು ಕತ್ತರಿಸುತ್ತೀರಾ? ಎಂದು ಸಂತೋಷ್ ಪ್ರಶ್ನಿಸಿದ್ದರು. ಬಿ.ಎಲ್‌. ಸಂತೋಷ್‌ ಅವರು ಸಮಸ್ಯೆ ಇರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

“ದಯವಿಲ್ಲದ ಧರ್ಮವಾವುದಯ್ಯಾ ? ದಯವೇ ಬೇಕು ಸಕಲ ಪ್ರಾಣಿಗಳಲ್ಲಿಯೂ ದಯವೇ ಧರ್ಮದ ಮೂಲವಯ್ಯಾ ಕೂಡಲಸಂಗಯ್ಯನಂತಲ್ಲದೊಲ್ಲನಯ್ಯಾ.” ಎಂದು ಟ್ವೀಟ್‌ ಆರಂಭಿಸಿರುವ ಅವರು, ಬಿ.ಎಲ್‌.ಸಂತೋಷ್‌ ಅವರೇ ಟ್ರೀಟ್‌ ಮೆಂಟ್‌ ಮಾಡಬೇಕಾದ ಒಂದು ಸೋಂಕು ಇರುವುದನ್ನು ಒಪ್ಪಿಕೊಂಡಿರುವುದು ಸಂತೋಷದ ಸಂಗತಿ ಎಂದಿದ್ದಾರೆ.

ಕಳೆದ ಸಾವಿರಾರು ವರ್ಷಗಳಿಂದ ಹಲವಾರು ಸೋಂಕುಗಳು ಇದ್ದವು. ಈಗಲೂ ನಮ್ಮ ನಡುವೆ ಅವುಗಳು ಇವೆ. ಮನುಷ್ಯರ ನಡುವೆ ತಾರತಮ್ಯ ಮಾಡುವ ಸೋಂಕು, ಮನುಷ್ಯರಾಗಿ ಗೌರವವನು ನೀಡದ ಸೋಂಕು ಎಂದು ಪ್ರಿಯಾಂಕ್‌ ಹೇಳಿದ್ದಾರೆ. ನಾನು ನಿಮ್ಮಷ್ಟು ಬುದ್ಧಿವಂತನಲ್ಲ.. ಹೀಗಾಗ ಕೆಲವು ವಿಚಾರಗಳಿಗೆ ಸಂಬಂಧಿಸಿ ನನಗೆ ಜ್ಞಾನ ಕೊಡಿ ಎಂದು ಕೇಳಿರುವ ಪ್ರಿಯಾಂಕ್‌ ಖರ್ಗೆ ಕೆಲವು ಪ್ರಶ್ನೆಗಳನ್ನು ಕೇಳಿದ್ದಾರೆ.

    ಸಮಾಜದಲ್ಲಿ ಈ ನಿಯಮಗಳನ್ನು ಮಾಡಿದವರು ಯಾರು?
    ಕೆಲವರಿಗೆ ಇತರರಿಗೆ ಹೆಚ್ಚು ಹಕ್ಕುದಾರಿಕೆ ಸಿಗಲು ಕಾರಣವಾಗಿದ್ದು ಏನು?
    ನಮ್ಮನ್ನು ಜಾತಿಯ ಆಧಾರದಲ್ಲಿ ವಿಭಜನೆ ಮಾಡಿದವರು ಯಾರು?
    ಕೆಲವು ಮನುಷ್ಯರು ಯಾಕೆ ಅಸ್ಪೃಶ್ಯರು?
    ಅವರು ಇವತ್ತಿಗೂ ದೇವಸ್ಥಾನ ಪ್ರವೇಶಿಸುವಂತಿಲ್ಲ ಯಾಕೆ?
    ಮಹಿಳೆಯರನ್ನು ಕೀಳಾಗಿ ಕಾಣುವ ಪದ್ಧತಿಗಳನ್ನು ಆರಂಭ ಮಾಡಿದ್ದು ಯಾರು?
    ಅಸಮಾನತೆ ಮತ್ತು ದಮನಕಾರಿ ನೀತಿಗೆ ಕಾರಣವಾದ ಸಾಮಾಜಿಕ ಸ್ವರೂಪ ಆಧರಿತ ಜಾತಿ ಪದ್ಧತಿಯನ್ನು ಜಾರಿಗೆ ತಂದವರು ಯಾರು?

ಇಲ್ಲಿ ಯಾರೂ ತಲೆ ಕಡಿಯಿರಿ ಎಂದು ಹೇಳುತ್ತಿಲ್ಲ. ಈ ಸೋಂಕುಗಳನ್ನು ಸಮಾನ ಹಕ್ಕು ಮತ್ತು ಗೌರವಗಳ ಮೂಲಕ ಚಿಕಿತ್ಸೆಗೆ ಒಳಪಡಿಸಬೇಕು ಎಂದು ಹೇಳುತ್ತಿದ್ದಾರೆ ಅಷ್ಟೆ. ಈ ಎಲ್ಲ ಸಮಸ್ಯೆಗಳಿಗೆ ಪರಿಹಾರವಾಗಿರುವುದು ಸಂವಿಧಾನ ಮತ್ತು ನೀವು ಹಾಗೂ ನಿಮ್ಮ ಸಂಘಟನೆ ಅದಕ್ಕೆ ವಿರುದ್ಧವಾಗಿದ್ದೀರಿ.

ಸಂತೋಷ್‌ ಜಿ ಅವರೇ ನೀವು ಕರ್ನಾಟಕದವರಿದ್ದೀರಿ. ದಯವಿಟ್ಟು ಗುರು ಬಸವಣ್ಣರ ಸಂದೇಶವನ್ನು ಪ್ರಚಾರ ಮಾಡಿ. ಇದರಿಂದ ನಮಗೆ ಸಮ ಸಮಾಜದ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ. “ಇವನಾರವ, ಇವನಾರವ, ಇವನಾರವ ನೆಂದೆನಿಸದಿರಯ್ಯಾ, ಇವ ನಮ್ಮವ, ಇವ ನಮ್ಮವ, ಇವ ನಮ್ಮವ ನೆಂದೆನಿಸಯ್ಯಾ ಕೂಡಲ ಸಂಗಮದೇವ ನಿಮ್ಮ ಮಹಾ ಮನೆಯ ಮಗನೆಂದೆನಿಸಯ್ಯಾ ಎಂದು ಪ್ರಿಯಾಂಕ್ ಟ್ವೀಟ್ ಮಾಡಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *