


ಸಿದ್ಧಾಪುರದ ಶಿರಳಗಿ ಭವ್ಯ ಸಾವಿಗೆ ಕಾರಣನಾದ ಪ್ರದೀಪ ಎನ್ನುವ ವ್ಯಕ್ತಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಮೃತ ಭವ್ಯಳ ತಂದೆ ನಾಗು ಮೂಕ ಹರಿಜನ ಆಗ್ರಹಿಸಿದ್ದಾರೆ. ಸಾಗರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ತಮ್ಮ ಅಮಾಯಕ ಪ್ರತಿಭಾವಂತ ಮಗಳಿಗೆ ವಿಷ ಕುಡಿಸಿದ ವ್ಯಕ್ತಿ ಜಾಮೀನು ಪಡೆದು ಆರಾಂ ಆಗಿದ್ದಾನೆ. ಮಗಳ ಮುಗ್ಧತೆ ಬಳಸಿಕೊಂಡು ಅವಳ ಸಾವಿಗೆ ಕಾರಣನಾದ ವ್ಯಕ್ತಿಯ ವಿರುದ್ಧ ಶೀಘ್ರ ಸೂಕ್ತ ಕ್ರಮ ಜರುಗಿಸಿ ತಮಗೆ ನ್ಯಾಯ ಒದಗಿಸಬೇಕೆಂದು ಅವರು ಆಗ್ರಹಿಸಿದರು.

ಸಾಗರದ ಇಂದಿರಾಗಾಂಧಿ ಕಾಲೇಜಿನಲ್ಲಿ ಬಿಎಸ್ಸಿ ಓದುತಿದ್ದ ತಮ್ಮ ಮಗಳು ಭವ್ಯ ಳಿಗೆ ಪ್ರೀತಿಸಬೇಕೆಂದು ಪುಸಲಾಯಿಸಿ ವಿಷಪ್ರಾಶನ ಮಾಡಿಸಿದ ವ್ಯಕ್ತಿ ತಮಗೂ ಹಲವು ಬಾರಿ ಕರೆಮಾಡಿ ಮಾತನಾಡಿ ಮಾಹಿತಿ ನೀಡಿದ್ದಾನೆ. ಈತನೇ ಭವ್ಯಳ ಸಾವಿಗೆ ನೇರ ಕಾರಣನಾಗಿದ್ದು ಅವನಿಗೆ ಉಗ್ರ ಶಿಕ್ಷೆ ನೀಡುವ ಮೂಲಕ ತಮ್ಮ ಬಾಧಿತ ಕುಟುಂಬಕ್ಕೆ ಸಹಕರಿಸಲು ಆಡಳಿತ ವ್ಯವಸ್ಥೆಗೆ ಅವರು ಮನವಿ ಮಾಡಿದ್ದಾರೆ.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
