ಸಹಕಾರಿ ಸಂಘಗಳು ರೈತರ ಆಧಾರ ಸ್ಥಂಭ mla bheemanna feliciated in bedkani

ಸಿದ್ದಾಪುರ: ರೈತರ ಜೀವನಾಡಿಯಾಗಿರುವ ಸಹಕಾರಿ ಸಂಘಗಳು ಶಿರಸಿ-ಸಿದ್ದಾಪುರ ತಾಲೂಕಿನಲ್ಲಿ ಸದಸ್ಯರ ಆಧಾರಸ್ತಂಬವಾಗಿ ಕೆಲಸ ಮಾಡುತ್ತಿವೆ ಎಂದು ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.
ತಾಲೂಕಿನ ಬೇಡ್ಕಣಿಯ ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಕಟ್ಟಡ, ಸಿಮೆಂಟ್ ಹಾಗೂ ಕಬ್ಬಿಣದ ವ್ಯಾಪಾರ ಮಳಿಗೆಗೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದ ಅವರು ಸಹಕಾರಿ ಸಂಘದ ಅಭಿವೃದ್ಧಿಯಾಗಬೇಕಾದರೆ ಪ್ರಾಮಾಣಿಕತೆ ಹಾಗೂ ಪಾರದರ್ಶಕತೆ ಇರಬೇಕು. ಬೇಡ್ಕಣಿ ಸೊಸೈಟಿ ಆ ನಿಟ್ಟಿನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದರಿಂದಲೇ ಲಾಭ ಗಳಿಸಲು ಸಾಧ್ಯವಾಗಿದೆ. ಇದೇ ರೀತಿಯ ಪ್ರಾಮಾಣಿಕತೆ ಹಾಗೂ ಪಾರದರ್ಶಕತೆ ಮುಂದುವರೆಸಿ ಸಂಘವನ್ನು ಉತ್ತುಂಗಕ್ಕೆ ಕೊಂಡೊಯ್ದು ಸದಸ್ಯರ ಹಿತ ಕಾಪಾಡಿ ಎಂದ ಅವರು, ರೈತಾಪಿ ಸಮುದಾಯ ನೆಮ್ಮದಿಯ ಬದುಕು ನಡೆಸಲು ಸಮರ್ಪಕ ಮಳೆಯಾಗಲಿ ಎಂದು ಎಲ್ಲರು ಪ್ರಾರ್ಥಿಸೋಣ ಎಂದರು.

ನೂತನ ಶಾಸಕ ಭೀಮಣ್ಣ ನಾಯ್ಕ ಇವರಿಗೆ ವ್ಯವಸಾಯ ಸೇವಾ ಸಹಕಾರಿ ಸಂಘ, ಕೋಟೆ ಹನುಮಂತ ದೇವಸ್ಥಾನ ಹಾಗೂ ಬೇಡ್ಕಣಿ ಗ್ರಾಮ ಪಂಚಾಯ್ತಿ ಕಾಂಗ್ರೆಸ್ ಘಟಕದ ವತಿಯಿಂದ ಸನ್ಮಾನಿಸಲಾಯಿತು.


ಸಂಘದ ಅಧ್ಯಕ್ಷ ಪ್ರಶಾಂತ ನಾಯ್ಕ ಪ್ರಾಸ್ತಾವಿಕ ಮಾತನಾಡಿ, 1965-66 ರಲ್ಲಿ ಸ್ಥಾಪನೆಯಾದ ಸಂಘ ಸಾಕಷ್ಟು ಏರುಪೇರುಗಳ ನಡುವೆ ಬೆಳೆದು ಬಂದ ಇದೀಗ 46 ವರ್ಷ ಪೂರೈಸಿದ್ದು, ಸದಸ್ಯರ ಅನುಕೂಲಕ್ಕಾಗಿ ಸಿಮೆಂಟ್ ಹಾಗೂ ಕಬ್ಬಿಣದ ವ್ಯಾಪಾರ ಮಳಿಗೆ ಪ್ರಾರಂಭಿಸಲಾಗಿದೆ ಎಂದರು.
ಟಿಎಂಎಸ್ ಅಧ್ಯಕ್ಷ ಆರ್.ಎಂ.ಹೆಗಡೆ ಬಾಳೇಸರ ಮಾತನಾಡಿ, ಸಹಕಾರಿ ಕ್ಷೇತ್ರ ಜನಸೇವೆ ಮಾಡಲು ಇರುವ ಶ್ರೇಷ್ಠವಾದ ಕ್ಷೇತ್ರವಾಗಿದೆ. ರೈತರು ಅವಲಂಭಿಸಿರುವ ಸಹಕಾರಿ ಸಂಘ ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕು. ಬೇಡ್ಕಣಿ ಸೊಸೈಟಿ ಸದಸ್ಯರ ಹಿತದೃಷ್ಟಿಯಿಂದ ಉತ್ತಮ ಹೆಜ್ಜೆ ಇಡುತ್ತಿದೆ ಎಂದರು.

ಸಂಘದ ಅಧ್ಯಕ್ಷ ಪ್ರಶಾಂತ ನಾಯ್ಕ ಕುಂಬ್ರಿಗದ್ದೆ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ಸಂಘದ ಉಪಾಧ್ಯಕ್ಷ ಬಾಬು ನಾಯ್ಕ ಕಡಕೇರಿ, ಬೇಡ್ಕಣಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಉಲ್ಲಾಸ ಗೌಡರ್, ಕೋಟೆ ಆಂಜನೇಯ ದೇವಾಲಯದ ಅಧ್ಯಕ್ಷ ವಿ.ಎನ್.ನಾಯ್ಕ, ಶನೇಶ್ವರ ದೇವಸ್ಥಾನದ ಅಧ್ಯಕ್ಷ ಜಿ.ಕೆ.ನಾಯ್ಕ, ರೈತ ಸಂಘದ ಜಿಲ್ಲಾಧ್ಯಕ್ಷ ಕೆರಿಯಪ್ಪ ನಾಯ್ಕ, ಭುವನಗಿರಿ ದೇವಾಲಯದ ಅಧ್ಯಕ್ಷ ಶ್ರೀಕಾಂತ ಹೆಗಡೆ, ಸಾಮಾಜಿಕ ಧುರೀಣ ವಸಂತ ನಾಯ್ಕ, ಗ್ರಾಮ ಪಂಚಾಯ್ತಿ ಮಾಜಿ ಉಪಾಧ್ಯಕ್ಷ ಉಮೇಶ ನಾಯ್ಕ ಕಡಕೇರಿ ಉಪಸ್ಥಿತರಿದ್ದರು. ಉಪನ್ಯಾಸಕ ಎನ್.ಟಿ.ನಾಯ್ಕ ನಿರೂಪಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *