ಸಾಂಬಾರ ಸೊಪ್ಪಿನ ಬಳಕೆ & ಉಪಯೋಗಗಳು

ಮನೆಯಲ್ಲಿಯೇ ಬೆಳೆಸಿ ದೊಡ್ಡಪತ್ರೆ: ದೂರ ಮಾಡಿ ಹಲವು ಆರೋಗ್ಯ ತಾಪತ್ರೆ; ಪುಟ್ಟ ಎಲೆಗಳ ದೊಡ್ಡ ಪ್ರಯೋಜನಗಳು!

ನಮ್ಮ ಮನೆಯ ಹಿತ್ತಲಲ್ಲೇ ಸಿಗುವ ಗಿಡಗಳು ಅನೇಕ ಖಾಯಿಲೆಗಳನ್ನು ಶಮನ ಮಾಡುವ ಶಕ್ತಿ ಹೊಂದಿರುತ್ತವೆ. ಹಿಂದಿನ ಕಾಲದ ಜನರು ಆಯುರ್ವೇದ ಔಷಧಗಳನ್ನು ಇಂತಹ ಗಿಡ ಗಂಟಿ, ಬೇರುಗಳಿಂದಲೇ ತಯಾರಿಸುತ್ತಿದ್ದರು. ಅಂತಹ ಒಂದು ಗಿಡಗಳಲ್ಲಿ ದೊಡ್ಡಪತ್ರೆಯೂ ಒಂದು.

doddapatre

ನಮ್ಮ ಮನೆಯ ಹಿತ್ತಲಲ್ಲೇ ಸಿಗುವ ಗಿಡಗಳು ಅನೇಕ ಖಾಯಿಲೆಗಳನ್ನು ಶಮನ ಮಾಡುವ ಶಕ್ತಿ ಹೊಂದಿರುತ್ತವೆ. ಹಿಂದಿನ ಕಾಲದ ಜನರು ಆಯುರ್ವೇದ ಔಷಧಗಳನ್ನು ಇಂತಹ ಗಿಡ ಗಂಟಿ, ಬೇರುಗಳಿಂದಲೇ ತಯಾರಿಸುತ್ತಿದ್ದರು. ಅಂತಹ ಒಂದು ಗಿಡಗಳಲ್ಲಿ ದೊಡ್ಡಪತ್ರೆಯೂ ಒಂದು.

ಮನೆಯ ಹಿತ್ತಲಿನಲ್ಲಿರುವ ಅದೆಷ್ಟೋ ಸಸ್ಯಗಳು ಸಾಮಾನ್ಯ ಕಾಯಿಲೆಗಳಿಗೆ ಪರಿಣಾಮಕಾರಿ ಪರಿಹಾರವನ್ನು ನೀಡುತ್ತದೆ. ಹೂವಿನ ಗಿಡಗಳ ನಡುವೆಯೇ ಬೆಳೆದು ಆರೋಗ್ಯ ವೃದ್ಧಿಸುವ ಕೆಲಸ ಮಾಡುವ ಪುಟ್ಟ ಪುಟ್ಟ ಗಿಡಗಳ ಆರೋಗ್ಯ ಗುಣ ಮಾತ್ರ ಬಹು ದೊಡ್ಡದು. ಅದರಲ್ಲಿ ದೊಡ್ಡ ಪತ್ರೆ ಗಿಡ ಕೂಡ ಒಂದು. ಸಾಮಾನ್ಯವಾಗಿ ಎಲ್ಲರ ಮನೆಯ ಹಿತ್ತಲಿನಲ್ಲಿ ಈ ದೊಡ್ಡ ಪತ್ರೆ ಗಿಡ ಕಂಡು ಬರುತ್ತದೆ. ಇದನ್ನು ಪುಟ್ಟ ಪಾಟ್‌ನಲ್ಲಿಯೂ ಇಟ್ಟು ಬೆಳೆಸಬಹುದಾಗಿದೆ. ಇದನ್ನು ಸಾಂಬಾರ ಸೊಪ್ಪು ಅಥವಾ ಅಜವನ ಗಿಡ ಎಂದೂ ಕರೆಯುತ್ತಾರೆ.

ದೊಡ್ಡಪತ್ರೆಯು ಸುಮಾರು ಮೂವತ್ತರಿಂದ ತೊಂಬತ್ತು ಸೆ.ಮೀ ಎತ್ತರದವರೆಗೆ ಬೆಳೆಯಬಲ್ಲದು, ಇದರ ಎಲೆಗಳು ದೊಡ್ಡ ಮತ್ತು ದಪ್ಪವಾಗಿದ್ದು ಕಡು ಸುವಾಸನೆಯನ್ನು ಹೊಂದಿರುತ್ತವೆ, ದೊಡ್ಡಪತ್ರೆಯ ರಂಬೆಗಳು ಮತ್ತು ಹೂಗಳು ಚಿಕ್ಕದಾಗಿದೆ.

ಆಫ್ರಿಕಾ ದೇಶಗಳಲ್ಲಿ ಇದನ್ನು ಪುದೀನಾದ ಬದಲಿಗೆ  ಖಾದ್ಯಗಳಲ್ಲಿ ಬಳಸುತ್ತಾರೆ. ದಕ್ಷಿಣಭಾರತದಲ್ಲಿ ಸಾಮಾನ್ಯವಾಗಿ ಇದನ್ನು ಜ್ವರ, ಶೀತ, ಕೆಮ್ಮುಗಳಿಗೆ ಮನೆಮದ್ದಾಗಿ ಬಳಸಲಾಗುತ್ತದೆ. ಗಾಯ ಅಥವಾ ಚೇಳು ಕಡಿತವಾದಾಗ ಪ್ರಥಮ ಚಿಕಿತ್ಸೆಯಾಗಿ ಇದರ ಎಲೆಗಳನ್ನು ಜಜ್ಜಿ ಬಳಸಲಾಗುತ್ತದೆ. ದಕ್ಷಿಣ ಕರ್ನಾಟಕದಲ್ಲಿ ದೊಡ್ಡಪತ್ರೆಯ ಚಟ್ನಿ, ತಂಬುಳಿ ಮಾಡಲಾಗುತ್ತದೆ. ಈಗ ಈ ದೊಡ್ಡ ಪತ್ರೆ ಸೊಪ್ಪು ಯಾವೆಲ್ಲಾ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ ಎನ್ನುವ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳಿ ಇಲ್ಲಿದೆ ನೋಡಿ.

ಸಾಮಾನ್ಯವಾಗಿ ಆಹಾರ ಸೇವನೆಯಲ್ಲಿ ಬದಲಾವಣೆ, ಹವಾಮಾನದಲ್ಲಿನ ವ್ಯತ್ಯಾಸದಿಂದ ಶ್ವಾಸಕೋಶದಲ್ಲಿ ಕಫ ಕಟ್ಟಿಕೊಳ್ಳುತ್ತದೆ. ಇದರಿಂದ ಶೀತವಾದರೆ ಎಷ್ಟು ದಿನವಾದರೂ ಕಡಿಮೆಯಾಗುವುದಿಲ್ಲ. ಇದಕ್ಕೆ ದೊಡ್ಡ ಪತ್ರೆ ಸೊಪ್ಪು ಉತ್ತಮ ಮನೆಮದ್ದಾಗಿದೆ. ದೊಡ್ಡಪತ್ರೆ ಎಲೆ, ತುಳಸಿ ಎಲೆ ಮತ್ತು ವೀಳ್ಯದೆಲೆಯನ್ನು ಅರೆದು ರಸ ತೆಗೆದು ಅದಕ್ಕೆ ಜೇನುತುಪ್ಪ ಬೆರೆಸಿ ಕುಡಿದರೆ ನೆಗಡಿ, ಕೆಮ್ಮು ದೂರವಾಗುತ್ತದೆ. ಚಿಕ್ಕ ಮಕ್ಕಳಿಗೂ ಕೂಡ ಈ ದೊಡ್ಡ ಪತ್ರೆ ಸೊಪ್ಪನ್ನು ಔಷಧವಾಗಿ ಬಳಸಬಹುದಾಗಿದೆ.

ದೊಡ್ಡ ಪತ್ರೆ ಸೊಪ್ಪನ್ನು ಕೊಯ್ದು ತಂದು ಬೆಂಕಿಯಲ್ಲಿ ಸುಟ್ಟು ಅದರ ರಸವನ್ನು ತೆಗದು ಅದಕ್ಕೆ ಅರ್ಧ ಚಮಚ ಬೆಲ್ಲ ಸೇರಿಸಿ ಕುಡಿದರೆ ಒಂದೆ ದಿನದಲ್ಲಿ ಶೀತ, ಕಟ್ಟಿದ ಮೂಗಿನ ಸಮಸ್ಯೆ ನಿವಾರಣೆಯಾಗುತ್ತದೆ.

ದೊಡ್ಡ ಪತ್ರೆ ಸೊಪ್ಪನ್ನು ಬೆಂಕಿಯ ಮೇಲೆ ಇಟ್ಟು ಬಾಡಿಸಿ ನಂತರ ಅದನ್ನು ನೆತ್ತಿಗೆ ಹಾಕಿದರೆ ದೇಹದಲ್ಲಿನ ತಣ್ಣನೆಯ ಅಂಶ ನಿವಾರಣೆಯಾಗಿ ಜ್ವರ, ಶೀತ ಕಡಿಮೆಯಾಗುತ್ತದೆ. ಮಕ್ಕಳಿಗೆ ಇದು ಬೆಸ್ಟ್‌ ಔಷಧವಾಗಿದೆ.

ಮಕ್ಕಳಿಗೆ ಜ್ವರ ಬಂದಾಗ ದೊಡ್ಡಪತ್ರೆ ಎಲೆ ಬಾಡಿಸಿ ನೆತ್ತಿಯ ಮೇಲೆ ಇಡುತ್ತಾರೆ. ಈ ಎಲೆಗಳ ಪೇಸ್ಟ್ ತಯಾರಿಸಿ ಅದನ್ನು ಚೇಳು ಕಚ್ಚಿದ ಗಾಯಕ್ಕೆ ಹಚ್ಚಿದರೆ ನೋವು ದೂರವಾಗುತ್ತದೆ. ಒಂದು ವಾರದವರೆಗೆ ದೊಡ್ಡ ಪತ್ರೆಯ ಎಲೆಗಳನ್ನು ತಿಂದರೆ ಅರಿಶಿಣ ಕಾಮಾಲೆ ವಾಸಿಯಾಗುತ್ತದೆ. ದೊಡ್ಡಪತ್ರೆಯನ್ನು ಜೀರಿಗೆ, ಎಳ್ಳಿನೊಂದಿಗೆ ಹುರಿದು ಕಾಯಿತುರಿ ಜೊತೆ ರುಬ್ಬಿ ಅದಕ್ಕೆ ಉಪ್ಪು, ಮಜ್ಜಿಗೆ ಹಾಕಿ ತಂಬುಳಿ ಮಾಡಿ ಕುಡಿದರೆ ಪಿತ್ತದ ಖಾಯಿಲೆಗಳು ಗುಣಮುಖವಾಗುವುದು.

ದೊಡ್ಡಪತ್ರೆ ಎಲೆಯನ್ನು ಉಪ್ಪಿನ ಸಹಿತ ತಿಂದರೆ ಜೀರ್ಣಶಕ್ತಿ ಅಧಿಕವಾಗುತ್ತದೆ. ದೊಡ್ಡ ಪತ್ರೆ ಎಲೆಯನ್ನು ಹುಳುಕಡ್ಡಿಯ ಭಾಗಕ್ಕೆ ತಿಕ್ಕುತ್ತಿದ್ದರೆ ಹುಳುಕಡ್ಡಿಯ ನಿವಾರಣೆಯಾಗುತ್ತದೆ. ದೊಡ್ಡ ಪತ್ರೆಯಲ್ಲಿ ವಿಟಮಿನ್‌ ಸಿ, ಫೈಬರ್‌ ಮತ್ತು ಕ್ಯಾಲ್ಸಿಯಂ ಗುಣ ಹೇರಳವಾಗಿದೆ. ಇದು ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಬಲಗೊಳಿಸಲು ಸಹಾಯ ಮಾಡುತ್ತದೆ.

ದೊಡ್ಡ ಪತ್ರೆ ಸೊಪ್ಪನ್ನು ಚಟ್ನಿ, ತಂಬುಳಿ ಅಥವಾ ಕರಕಲಿ ಮಾಡುವ ಮೂಲಕ ಸೇವಿಸಬಹುದಾಗಿದೆ. ಅಲ್ಲದೆ ದೋಸೆ ಮಾಡುವಾಗಲೂ ದೊಡ್ಡ ಪತ್ರೆ ಎಲೆಯನ್ನು ಬಳಸಬಹುದಾಗಿದೆ. ಇದು ಹೆಚ್ಚು ರುಚಿಯೊಂದಿಗೆ ಆರೋಗ್ಯವನ್ನೂ ವೃದ್ಧಿಸುತ್ತದೆ.

ದೊಡ್ಡ ಪತ್ರೆಯ ಗಿಡದ ಎಲೆಯನ್ನು ತಂದು ಬಾಡಿಸಿ ರಸ ತೆಗೆದು ಜೇನುತುಪ್ಪ ಸೇರಿಸಿ ಕುಡಿದರೆ ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆ. ಅರಿಸಿನ ಕಾಮಾಲೆ ಇದ್ದವರಿಗೂ ದೊಡ್ಡ ಪತ್ರೆ ಸೊಪ್ಪು ಉತ್ತಮ ಮನೆ ಮದ್ದಾಗಿದೆ. ಈ ಎಲೆಯನ್ನು ಆಹಾರ ರೂಪದಲ್ಲಿ ಅಂದರೆ ಚಟ್ನಿ, ತಂಬುಳಿ ಮಾಡಿ ಸೇವಿಸಿದರೆ ಕೆಲವೇ ದಿನಗಳಲ್ಲಿ ಕಾಯಿಲೆ ಚೇತರಿಕೆಯನ್ನು ಕಾಣುತ್ತದೆ. ಕಂಬಳಿ ಹುಳ, ಇಸುಬು ಇಂತಹ ಕೀಟಗಳು ಕಚ್ಚಿದ್ದರೆ ಸಹಿಸಲಾರದ ಉರಿ ಚರ್ಮಕ್ಕಾಗುತ್ತದೆ. ಇದನ್ನು ತಡೆಯಲು ಈ ದೊಡ್ಡ ಪತ್ರೆ ಸೊಪ್ಪು ಸಹಾಯಕವಾಗಿದೆ.

ದೊಡ್ಡ ಪತ್ರೆ ಎಲೆಯ ರಸಕ್ಕೆ ಬೆಲ್ಲ ಸೇರಿಸಿ ಕುಡಿದಾಗ ಬೆಲ್ಲ ಕೂಡ ದೇಹಕ್ಕೆ ಒಳ್ಳೆಯ ಪದಾರ್ಥವಾಗಿದೆ. ಇದು ದೇಹದಿಂದ ವಿಷಯುಕ್ತ ಪದಾರ್ಥವನ್ನು ಹೊರಹಾಕಲು ನೆರವಾಗುತ್ತದೆ. ಆದ್ದರಿಂದ ನಿಮ್ಮ ಮನೆಯ ಹಿತ್ತಲಿನಲ್ಲಿ ದೊಡ್ಡ ಪತ್ರೆ ಸೊಪ್ಪಿದ್ದರೆ ಜೋಪಾನ ಮಾಡಿ ಉಳಿಸಿಕೊಳ್ಳಿ. (ಕಪ್ರಡಾ)

ಚಿತ್ರದ ಪೋಸ್ಟರ್
ಸನಾತನ ಕಿಚ್ಚು
ಚಿತ್ರದ ಪೋಸ್ಟರ್
ಚಿತ್ರದ ಪೋಸ್ಟರ್
ಚಿತ್ರದ ಪೋಸ್ಟರ್
ನಿದ್ರೆಗೆ ಜಾರಿದ್ದ ವಿಕ್ರಮ್ ಗೆ ದಿಢೀರ್ ಟಾಸ್ಕ್

ಭಾರತದಲ್ಲಿ ಸೆಪ್ಟೆಂಬರ್ 9 ಮತ್ತು 10 ರಂದು ಜಿ20 ಶೃಂಗಸಭೆ ನಡೆಯಲಿದ್ದು ಇದಕ್ಕಾಗಿ ಜಗತ್ತಿನ ಪ್ರಮುಖ ರಾಷ್ಟ್ರಗಳ ಅಧ್ಯಕ್ಷರು, ಪ್ರಧಾನಿಗಳು ಭೇಟಿ ನೀಡಲಿದ್ದಾರೆ.
ಇಸ್ರೋ ಅಧ್ಯಕ್ಷ ಸೋಮನಾಥ್ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಚಂದ್ರನ ಮೇಲೆ ಮೊದಲ ಬಾರಿಗೆ ಇಳಿದ ರೋವರ್ ಚಿತ್ರವನ್ನು ಉಡುಗೋರೆಯಾಗಿ ನೀಡಿದರು.
77ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ಮಾಡಿದರು. ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಮಾಣಿಕ್ ಷಾ ಪರೇಡ್ ಮೈದಾನ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಕಾಮಿಡಿ ಕಿಲಾಡಿಗಳು ಖ್ಯಾತಿಯ ಸಂಜು ಬಸಯ್ಯ ಅವರು ಪಲ್ಲವಿ ಬಳ್ಳಾರಿ ಅವರೊಂದಿಗೆ ಕಳೆದ ಜುಲೈ 30 ರಂದು ದಾಂಪತ್ಯ ಜೀವನಕ್ಕೆ ಕಾಲಿಟಿದ್ದು, ಇದೀಗ ಈ ಜೋಡಿಯ ಆರತಕ್ಷತೆಯು ಅದ್ದೂರಿಯಾಗಿ ನಡೆದಿದೆ.
ಪ್ರತಿ ವರ್ಷ, ಆಗಸ್ಟ್ 10 ರಂದು, ವಿಶ್ವ ಸಿಂಹ ದಿನವು ಈ ವಿಸ್ಮಯಕಾರಿ, ವೈಭವದ ಪ್ರಾಣಿ ಮೇಲೆ ಗಮನ ಸೆಳೆಯುತ್ತದೆ, ಅವುಗಳು ಈ ಜಗತ್ತಿನ ಪ್ರಾಣಿ-ಮನುಷ್ಯ ಸಂಕುಲದಲ್ಲಿ ಎಷ್ಟು ಮುಖ್ಯ ಎಂಬ ಮಹತ್ವವನ್ನು ಎತ್ತಿ ತೋರಿಸುತ್ತದೆ. ಅವುಗಳ ಅಸ್ತಿತ್ವವನ್ನು ರಕ್ಷಿಸಲು ಜಾಗತಿಕ ಸಮುದಾಯವನ್ನು ಒಟ್ಟುಗೂಡಿಸುತ್ತದೆ. 'ಕಾಡಿನ
ಮುಂಬೈನ ಸ್ಟಾರ್ ಬ್ಯಾಟರ್ ಸರ್ಫರಾಜ್ ಖಾನ್ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಹುಡುಗಿಯನ್ನು ವಿವಾಹವಾಗಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *