ವಾಜಗದ್ದೆಯಲ್ಲಿ ೩೬ ಅಲ್ಲ ೬೩ ನಾಟಕ ಪ್ರದರ್ಶನ


ಸಿದ್ದಾಪುರ
ರಂಗಭೂಮಿಯ ಹಿರಿಮೆ ಬಹುದೊಡ್ಡದು. ರಂಗಸಂಸ್ಥೆಯನ್ನು ಸಂಘಟಿಸಿ, ಅದರ ಮೂಲಕ ನಾಟಕ ಪ್ರದರ್ಶಿಸುವದು ಸುಲಭದ ಕಾರ್ಯವಲ್ಲ. ಗ್ರಾಮೀಣ ಪ್ರದೇಶದಲ್ಲಿ ನಾಟಕಗಳನ್ನು ಪ್ರದರ್ಶಿಸುವ ಮೂಲಕ ರಂಗಭೂಮಿಯನ್ನು ಎಲ್ಲೆಡೆ ಪಸರಿಸುವ ರಂಗ ಸೌಗಂಧದ ಕಾರ್ಯ ನಿಜಕ್ಕೂ ಶಾಘ್ಲನೀಯ ಎಂದು ಸಾಂಸ್ಕೃತಿಕ ಚಿಂತಕ ಗೋಪಾಲ ಹೆಗಡೆ ಹುಲೀಮನೆ ಹೇಳಿದರು.
ಅವರು ತಾಲೂಕಿನ ವಾಜಗದ್ದೆಯ ಶ್ರೀ ದುರ್ಗಾವಿನಾಯಕ ದೇವಾಲಯ ಆಡಳಿತ ಮಂಡಳಿ, ಶ್ರೀ ದುರ್ಗಾ ವಿನಾಯಕ ಕೃಷಿಕ ಯುವಕ ಸಂಘ, ಶ್ರೀ ದುರ್ಗಾವಿನಾಯಕ ಯಕ್ಷಮಿತ್ರ ಮಂಡಳಿ ಹಾಗೂ ಗ್ರಾಮಸ್ಥರ ಸಹಕಾರದಲ್ಲಿ ಸೆ.೮ರಂದು ಆಯೋಜಿಸಿದ ರಂಗ ಸೌಗಂಧ ತಂಡದ ೨೦೨೩-೨೪ನೇ ಸಾಲಿನಲ್ಲಿ ರಂಗಸಂಚಾರಕ್ಕಾಗಿ ಸಿದ್ಧಪಡಿಸಿದ ೩೬ ಅಲ್ಲ ೬೩ ಎನ್ನುವ ಹವ್ಯಕ ನಗೆ ನಾಟಕ ಪ್ರದರ್ಶನದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿ ಕರ್ನಾಟಕದ ರಂಗಭೂಮಿಯಲ್ಲಿ ದಂತ ಕಥೆಯಾಗಿರುವವರು ದಿ|ಹುಲಿಮನೆ ಸೀತಾರಾಮ ಶಾಸ್ತಿçಗಳು. ಅವರ ಕುಟುಂಬದ ಗಣಪತಿ ಹೆಗಡೆ ರಂಗ ಸೌಗಂಧ ರಂಗಸಂಸ್ಥೆಯ ಮೂಲಕ ರಂಗಭೂಮಿಯನ್ನು ಸಕ್ರೀಯಗೊಳಿಸುತ್ತಿರುವದು ಸಂತಸದ ಸಂಗತಿ ಎಂದರು.


ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಶ್ರೀ ದುರ್ಗಾವಿನಾಯಕ ದೇವಾಲಯದ ಮೋಕ್ತೇಸರ ಶ್ರೀಧರ ಎಂ.ಹೆಗಡೆ ಪೇಟೆಸರ ಮಾತನಾಡಿ ಸಾಂಸ್ಕೃತಿಕ ಚಟುವಟಿಕೆಗಳಿಗೆ ಈ ಪ್ರದೇಶ ಸದಾ ಕ್ರಿಯಾಶೀಲವಾಗಿದೆ. ಇಲ್ಲಿನ ಪ್ರೇಕ್ಷಕರೂ ಸ್ಪಂದಿಸುತ್ತಾರೆ. ಇಂಥ ಚಟುವಟಿಕೆಗಳಿಗೆ ಎಲ್ಲರ ಸಹಕಾರವೂ ದೊರೆಯುತ್ತದೆ. ಹವ್ಯಕ ಕನ್ನಡದ ಈ ನಾಟಕವನ್ನು ಇಲ್ಲಿ ಪ್ರದರ್ಶನಮಾಡುವಲ್ಲಿ ಎಲ್ಲರ ಸಹಕಾರ ದೊರಕಿದೆ ಎಂದರು.
ಅತಿಥಿಗಳಾದ ಹಿರಿಯ ಕೃಷಿಕ, ಸಾಂಸ್ಕೃತಿಕ ಪ್ರೋತ್ಸಾಹಕ ಸುಬ್ರಾಯ ಹೆಗಡೆ ಮತ್ತೀಗಾರ ಮಾತನಾಡಿ ರಂಗ ಸೌಗಂಧ ತಂಡ ಪ್ರತಿವರ್ಷವೂ ಹೊಸಬಗೆಯ ನಾಟಕಗಳನ್ನು ಸಿದ್ಧಗೊಳಿಸಿ ಪ್ರದರ್ಶಿಸಿ ಎಲ್ಲೆಡೆಗೂ ಪ್ರದರ್ಶಿಸುತ್ತಿದೆ. ನಾವೆಲ್ಲ ಅವರಿಗೆ ಸಹಕರಿಸಬೇಕು ಎಂದರು.
ರಂಗ ಸೌಗಂಧ ತಂಡದ ಮುಖ್ಯಸ್ಥ ಗಣಪತಿ ಹೆಗಡೆ ಹುಲೀಮನೆ ಪ್ರಾಸ್ತಾವಿಕ ಮಾತನಾಡಿದರು. ವಿನಾಯಕ ಹೆಗಡೆ ಪೇಟೆಸರ ಸ್ವಾಗತಿಸಿ ವಂದಿಸಿದರು.
ನಂತರ ನಾಟಕ ಪ್ರದರ್ಶನಗೊಂಡಿತು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *