ಹೇರೂರಿನಲ್ಲಿ ಅ.೧ಕ್ಕೆ ಅನಂತಶ್ರೀ ಪ್ರಶಸ್ತಿಪ್ರದಾನ, ರೂಪಕ

ಸಿದ್ದಾಪುರ
ಕಲೆ ಸಂಸ್ಕೃತಿಯ ಏಳ್ಗೆಯಲ್ಲಿ ತೊಡಗಿಕೊಂಡ ಇಲ್ಲಿನ ಅನಂತ ಯಕ್ಷ ಕಲಾ ಪ್ರತಿಷ್ಠಾನ ನಡೆಸುವ ಅನಂತೋತ್ಸವ ೨೦೨೩ ತಾಲೂಕಿನ ಹೇರೂರಿನ ಶ್ರೀ ಸಿದ್ಧಿವಿನಾಯಕ ದೇವಾಲಯದಲ್ಲಿ ಅ. ೧ ರ ಸಂಜೆ ೫ ರಿಂದ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ಕಾರ್ಯದರ್ಶಿ , ಭಾಗವತ ಕೇಶವ ಹೆಗಡೆ ಕೊಳಗಿ ತಿಳಿಸಿದ್ದಾರೆ.

ಸಾವಿರಕ್ಕೂ ಮಿಕ್ಕಿದ ಕಲಾವಿದರನ್ನು ಯಕ್ಷರಂಗಕ್ಕೆ ನೀಡಿದ ಯಕ್ಷ ಗುರು, ಹಿರಿಯ ಭಾಗವತ ಕೆ. ಪಿ. ಹೆಗಡೆ ಗೋಳಗೋಡ್ ಅವರಿಗೆ ಪ್ರತಿಷ್ಠಾನ ನೀಡುವ ಅನಂತ ಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಕರ‍್ಯಕ್ರಮವನ್ನು ಶಾಸಕ ಭೀಮಣ್ಣ ನಾಯ್ಕ ಉದ್ಘಾಟಿಸಿ, ಪ್ರಶಸ್ತಿ ಪ್ರದಾನ ನೆರವೇರಿಸಲಿದ್ದಾರೆ. ಅಭಿನಂದನಾ ನುಡಿಯನ್ನು ವಿದ್ಯಾವಾಚಸ್ಪತಿ ಉಮಾಕಾಂತ್ ಭಟ್ ಕೆರೆಕೈ ಅವರು ಆಡಲಿದ್ದಾರೆ.

ಅತಿಥಿಗಳಾಗಿ ಸಿದ್ದಾಪುರ ಟಿಎಂಎಸ್ ಅಧ್ಯಕ್ಷ ಆರ್.ಎಂ.ಹೆಗಡೆ ಬಾಳೇಸರ, ಯಕ್ಷಗಾನ ನಾಟ್ಯ ವಿನಾಯಕ ದೇವಸ್ಥಾನ ಪ್ರಧಾನ ವಿಶ್ವಸ್ಥ ವಿನಾಯಕ ಹೆಗಡೆ ಕಲಗದ್ದೆ, ಸಿದ್ದಾಪುರ ತಾಲೂಕು ಪತ್ರರ‍್ತರ ಸಂಘದ ಅಧ್ಯಕ್ಷ ಗಂಗಾಧರ ಕೊಳಗಿ, ಯಕ್ಷಗಾನ ಪ್ರೇಮಿ ಆರ್.ಜಿ. ಭಟ್ ರ‍್ಗಾಸರ, ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಅನಂತಮೂರ್ತಿ ಹೆಗಡೆ, ದೇವಸ್ಥಾನದ ಅಧ್ಯಕ್ಷ ನರಸಿಂಹಮೂರ್ತಿ ಹೆಗಡೆ ಪಾಲ್ಗೊಳ್ಳಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಪ್ರತಿಷ್ಠಾನದ ಅಧ್ಯಕ್ಷ ವಿ.ಎಂ. ಭಟ್ ಸಿದ್ದಾಪುರ ವಹಿಸಿಕೊಳ್ಳಲಿದ್ದಾರೆ.
ಬಳಿಕ ಇದೇ ವೇದಿಕೆಯಲ್ಲಿ ವಿಶ್ವಶಾಂತಿ ಸರಣಿಯ ಬಹು ಪ್ರಸಿದ್ಧ ರೂಪಕ ಶ್ರೀಕೃಷ್ಣಂ ವಂದೇ ಯಕ್ಷಗಾನ ನೃತ್ಯ ರೂಪಕ ಪ್ರಸ್ತುತವಾಗಲಿದೆ. ಶಿರಸಿಯ ಕು. ತುಳಸಿ ಹೆಗಡೆ ರೂಪಕವನ್ನು ಪ್ರಸ್ತುತಗೊಳಿಸಲಿದ್ದು, ಹಿನ್ನೆಲೆಯಲ್ಲಿ ಭಾಗವತರಾಗಿ ಕೇಶವ ಹೆಗಡೆ ಕೊಳಗಿ, ಮದ್ದಲೆಯಲ್ಲಿ ಶಂಕರ್ ಭಾಗವತ ಯಲ್ಲಾಪುರ, ಚಂಡೆಯಲ್ಲಿ ವಿಘ್ನೇಶ್ವರ ಗೌಡ ಕೆಸರಕೊಪ್ಪ ಸಹಕಾರ ನೀಡಲಿದ್ದು, ಪ್ರಸಾದನವನ್ನು ವೆಂಕಟೇಶ ಬಗ್ರಿಮಕ್ಕಿ ನಡೆಸಿಕೊಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. (ಕಪ್ರಡಾ)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *