


ಸಿದ್ದಾಪುರ
ಪಟ್ಟಣದ ಶಂಕರಮಠದ ಸಭಾಂಗಣದಲ್ಲಿ ಯಕ್ಷಾಭ್ಯುದಯ ಬಳಗ ಇಟಗಿ ಆಶ್ರಯದಲ್ಲಿ ವಿವಿಧ ಸಂಘಟನೆಗಳ ಹಾಗೂ ಯಕ್ಷಗಾನ ಅಭಿಮಾನಿಗಳ ಮತ್ತು ಸಂಸ್ಕೃತಿ ಸಂಪದ ಶೃಂಗೇರಿ ಶಂಕರ ಮಠ ಸಿದ್ದಾಪುರ ಸಹಕಾರದೊಂದಿಗೆ ಯಕ್ಷರಾಘವ ಜನ್ಸಾಲೆ ಪ್ರತಿಷ್ಠಾನ ದಿಂದ ಪ್ರದರ್ಶನಗೊಂಡ ಸುದರ್ಶನ ವಿಜಯ-ಚಂದ್ರಾವಳಿ ವಿಲಾಸ ಯಕ್ಷಗಾನ ಮೆಚ್ಚುಗೆಗಳಿಸಿತು.
ಹಿಮ್ಮೇಳದಲ್ಲಿ ರಾಘವೇಂದ್ರ ಆಚಾರ್ಯ ಜನ್ಸಾಲೆ ಅವರ ಭಾಗವತಿಕೆಗೆ ಸುನೀಲ್ ಭಂಡಾರಿ ಕಡತೋಕಾ ಮದ್ದಳೆಯಲ್ಲಿ ಹಾಗೂ ಪ್ರಜ್ವಲ್ ಮುಂಡಾಡಿ ಚಂಡೆಯಲ್ಲಿ ಉತ್ತಮ ಸಾಥ ನೀಡಿದರು.
ಮುಮ್ಮೇಳದಲ್ಲಿ ಉದಯ ಹೆಗಡೆ ಕಡಬಾಳ, ಸುಬ್ರಹ್ಮಣ್ಯ ಹೆಗಡೆ ಯಲಗುಪ್ಪ, ವಿನಯ ಭಟ್ಟ ಬೇರೊಳ್ಳಿ, ಕಾರ್ತಿಕ ಚಿಟ್ಟಾಣಿ, ಅಣ್ಣಪ್ಪ ಗೌಡ ಮಾಗೋಡು, ನಾಗರಾಜ ಕುಂಕಿಪಾಲ, ರವೀಂದ್ರ ದೇವಾಡಿಗ, ಪುರಂಧರ ಮೂಡ್ಕಣಿ, ದರ್ಶನ ಭಟ್ಟ ವಿವಿಧ ಪಾತ್ರ ನಿರ್ವಹಿಸಿದರು.

_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
