ಪ್ರಣವಾನಂದ ಶ್ರೀ ಈಡಿಗ ಸ್ವಾಮೀಜಿ ಅಲ್ಲವೇ ಅಲ್ಲ, ಬುರುಡೆ ಬಿಟ್ಟುಕೊಂಡೇ ಬಂದಿದ್ದಾರೆ: ಸಚಿವ ಮಧು ಬಂಗಾರಪ್ಪ

ಪ್ರಣವಾನಂದ ಶ್ರೀ ಈಡಿಗ ಸ್ವಾಮೀಜಿ ಅಲ್ಲವೇ ಅಲ್ಲ. ಸುಮ್ಮನೆ ಬುರುಡೆ ಬಿಟ್ಟುಕೊಂಡೇ ಬಂದಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸ್ವಾಮೀಜಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

File photo

ಶಿವಮೊಗ್ಗ: ಪ್ರಣವಾನಂದ ಶ್ರೀ ಈಡಿಗ ಸ್ವಾಮೀಜಿ ಅಲ್ಲವೇ ಅಲ್ಲ. ಸುಮ್ಮನೆ ಬುರುಡೆ ಬಿಟ್ಟುಕೊಂಡೇ ಬಂದಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸ್ವಾಮೀಜಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪ್ರಣವಾನಂದ ಶ್ರೀಗಳ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪ್ರಣವಾನಂದ ಶ್ರೀ ಈಡಿಗ ಸ್ವಾಮೀಜಿ ಅಲ್ಲವೇ ಅಲ್ಲ ಎಂದು ಮತ್ತೊಮ್ಮೆ ಗುಡುಗಿದರು.

ಅವರು ಕಣ್ಣೀರು ಯಾಕೆ ಹಾಕಿದ್ದಾರೆ ತಪ್ಪು ಮಾಡಿದ್ದಾರಾ? ಅವರನ್ನು ಬೇಕಾದಷ್ಟು ನೋಡಿದ್ದೇವೆ. ಇಂತಹ ಬುರುಡೆ ಬಿಟ್ಟುಕೊಂಡೇ ಬಂದಿದ್ದಾರೆ. ಕಳ್ಳತನ ಮಾಡಿದ್ದರೆ, ತಪ್ಪು ಮಾಡಿದ್ದರೆ ಕಣ್ಣೀರು ಹಾಕೋದು ಎಂದು ಕಿಡಿಕಾರಿದರು.

ಪ್ರಣವಾನಂದ ಶ್ರೀಗಳೇನು ಈಡಿಗ ಸಮಾಜದವರಾ? ನಾನೇನು ಅವರ ಜಾತಕ ನೋಡಿಕೊಂಡು ಇರಲಾ. ಅವರ ಹಿನ್ನೆಲೆ ಕೆದುಕಿ ನಿಮಗೆ ಗೊತ್ತಾಗುತ್ತದೆ. ನನ್ನ ವಿರುದ್ದ ಕಮೀಷನರ್, ಸ್ಪೀಕರ್, ಖರ್ಗೆ ಯಾರಿಗೆ ಬೇಕಾದರೂ ದೂರು‌ ಕೊಡಲಿ. ನನಗೆ ಮಾಡಲು ಬೇಕಾದಷ್ಟು ಕೆಲಸ ಇದೆ. ಸ್ವಾಮೀಜಿ ಅವರು ಸುಮ್ಮನೆ ಪಬ್ಲಿಸಿಟಿ ತಗೊಳ್ಳುತ್ತಾರೆ. ಇಂತಹವರಿಗೆಲ್ಲಾ ಏಕೆ ಪ್ರಚಾರ ಕೊಡುತ್ತೀರಾ? ಹರಿಪ್ರಸಾದ್ ಅವರು ಹಿರಿಯರಿದ್ದಾರೆ ಅವರಿಗೆ ಸ್ಥಾನ ಮಾನ ಕೊಡಬೇಡಿ ಅನ್ನೋಕೆ ನಾನು ಯಾರು? ಎಂದು ಪ್ರಶ್ನಿಸಿದರು.

ಕಾಗೋಡು ತಿಮ್ಮಪ್ಪ ಮಾರ್ಗದರ್ಶನದಲ್ಲಿ ಪಕ್ಷಾತೀತವಾಗಿ ಎಲ್ಲರೂ ಕೆಲಸ ಮಾಡಬೇಕು . ಕೇಂದ್ರ ಮತ್ತು ರಾಜ್ಯದಲ್ಲಿ ಬೇರೆ ಬೇರೆ ಪಕ್ಷಗಳ ಸರಕಾರ ಅಧಿಕಾರ ಇದೆ. ಎಲ್ಲ ವಿರೋಧ ಮರೆತು ಬಡವರ ಪರ ಕೆಲಸ ಆಗಬೇಕಿದೆ. ಆಡಳಿತ ಮತ್ತು ವಿರೋಧ ಪಕ್ಷ ತಮ್ಮ ಲಾಭಕ್ಕೆ ಏನು ಕೇಳುತ್ತಿಲ್ಲ. ಬಡವರ ಸಮಸ್ಯೆಯಾಗಿ ಎರಡು ಪಕ್ಷಗಳು ಒಟ್ಟಾಗಬೇಕಿದೆ ಎಂದು ತಿಳಿಸಿದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *