ಶಿವಕುಮಾರ ನಿರ್ಮಿಸಿರುವ ಪರಿಸರ ಸ್ನೇಹಿ ಗಣಪ ಈ ವರ್ಷದ ವಿಶೇಶ!

ಪ್ಲಾಸ್ಟರ್‌ ಆಫ್‌ ಪ್ಯಾರೀಸ್‌ ಗುಂಗಿನಿಂದ ಹೊರಬರದ ಜನರಿಗೆ ಇಲ್ಲೊಬ್ಬ ಕಲಾವಿದ ಪರಿಸರ ಪೂರಕ ಗಣಪತಿ ಮಾಡುವ ಪರ್ಯಾಯ ವಿಧಾನ ಪರಿಚಯಿಸಿದ್ದಾರೆ.

ಪರಿಸರ ಸ್ನೇಹಿ ಗಣಪ, ಪರಿಸರ ಪೂರಕ ಗೌರಿ-ಗಣೇಶ ಹಬ್ಬ ಎನ್ನುವ ವಿಚಾರಕ್ಕೆ ಈಗ ಹೆಚ್ಚಿನ ಪ್ರಚಾರ ದೊರೆಯುತ್ತಿದೆ. ಹಬ್ಬ,ದೇವರು-ಭಕ್ತಿಯ ಹೆಸರಿನಲ್ಲಿ ಪರಿಸರಕ್ಕೆ ಹಾನಿಯಾಗುವ ಸಾಧ್ಯತೆ ಹೆಚ್ಚಿರುವುದರಿಂದ ಪರಿಸರಸ್ನೇಹಿ ಗಣೇಶ ಉತ್ಸವಕ್ಕೆ ಈಗ ಹೆಚ್ಚಿನ ಪ್ರಾಮುಖ್ಯತೆ.ಇಂಥ ಪರಿಸರ ಸ್ನೇಹಿ ಗಣಪನ ಬಗ್ಗೆ ಯೋಚಿಸುವ ಜನರಿಗೆ ಉತ್ತರ ಕನ್ನಡ ಜಿಲ್ಲೆಯ ಯುವ ಕಲಾವಿದರೊಬ್ಬರು ಸಂತೋಷದ ಸುದ್ದಿ ನೀಡಿದ್ದಾರೆ.
ಸಿದ್ಧಾಪುರದ ಕಲಾವಿದ ಶಿವಕುಮಾರ ಮೂರ್ತಿ ರಚನೆ ಮಾಡುವುದರಲ್ಲಿ ಸಿದ್ಧ ಹಸ್ತರು. ಕೃಷ್ಣ ಮೂರ್ತಿ, ಸರಸ್ವತಿ, ಲಕ್ಷ್ಮೀ, ಗೌರಿ ಗಣೇಶ್ ನ ಮಣ್ಣಿನ ಮೂರ್ತಿ ಮಾಡುವ ಕಲಾವಿದರಾದ ಇವರು ಕೆಲವು ವರ್ಷಗಳಿಂದ ಪ್ಲಾಸ್ಟರ್‌ ಆಫ್‌ ಪ್ಯಾರೀಶ್‌ ಗೆ ಬದಲು ದೇಶೀ ಮಣ್ಣಿನ ಗಣಪನನ್ನು ಮಾಡುತ್ತಾ ಅಬ್ಬರವಿಲ್ಲದೆ ಪರಿಸರಸ್ನೇಹಿ ಹಬ್ಬವನ್ನು ಉತ್ತೇಜಿಸುತಿದ್ದಾರೆ.


ಸ್ಥಳೀಯವಾಗಿ ದೊರೆಯುವ ವಸ್ತುಗಳನ್ನು ಬಳಸಿ, ಪರಿಸರಕ್ಕೆ ಮಾರಕವಾಗದಂತೆ ಎಚ್ಚರವಹಿಸಿ ಶಿವಕುಮಾರ ತಯಾರಿಸುವ ಪರಿಸರಸ್ನೇಹಿ ವಿಗ್ರಹಗಳು ಈಗ ಗಮನ ಸೆಳೆಯುತ್ತಿವೆ.ಕಡಿಮೆ ಪ್ರಮಾಣದ ಮಣ್ಣು, ಉಮಿ(ಜೊಳ್ಳುಭತ್ತ) ಜೊತೆಗೆ ಒಳಗಿದ ಬಿಳಿಹುಲ್ಲು ಬಳಸಿ ಶಿವಕುಮಾರ ಮಾಡಿವ ಪರಿಸರ ಸ್ನೇಹಿ ವಿಗ್ರಹಗಳು ನಿಷೇಧಿತ ಪ್ಲಾಸ್ಟರ್‌ ಆಫ್‌ ಪ್ಯಾರೀಸ್‌ ಪ್ರತಿಮೆಗಳಿಗೆ ಪರ್ಯಾಯವಾಗಿ ಹೆಸರುಮಾಡುತ್ತಿವೆ.

ಸದಾ ಹೊಸತನ್ನು ಯೋಚಿಸುವ ಶಿವಕುಮಾರ್‌ ನಿರ್ಮಿಸುವ ಆಕರ್ಷಕ ಮಣ್ಣಿನ ಮೂರ್ತಿಗಳಿಗೆ ಸ್ಥಳೀಯವಾಗಿ ಹೆಚ್ಚು ಬೇಡಿಕೆ.
ಈಗ ಇವರು ಪರಿಚಯಿಸಿರುವ ಪಿ.ಪಿ.ಗೆ ಪರ್ಯಾಯ ಸ್ಥಳೀಯ ವಿಧಾನದ ಪರಿಸರಸ್ನೇಹಿ ಗಣಪ ಎಲ್ಲರ ಆಕರ್ಷಣೆಯ ಕೇಂದ್ರಗಳಾಗಿವೆ.ಪರಿಸರಕ್ಕೆ ಪೂರಕವಾದ ಮಣ್ಣಿನ ಗಣೇಶ್‌ ವಿಗ್ರಹ ರಚಿಸುವ ಶಿವಕುಮಾರ ಹಬ್ಬ,ದೇವರ ಹೆಸರಿನಲ್ಲಿ ಪರಿಸರಕ್ಕೆ ಹಾನಿ ಮಾಡಬಾರದೆನ್ನುವ ತಿಳುವಳಿಕೆ ಈ ಪರಿಸರ ಸ್ನೇಹಿ ಗಣಪನ ಸೃಷ್ಟಿಯ ಹಿಂದಿನ ವಿಶೇಶ ಎನ್ನುತ್ತಾರೆ.ಸರಳವಾಗಿ,ಮರುಬಳಕೆ ಮಾಡಬಹುದಾದ ಪರಿಸರಸ್ನೇಹಿ ಮೂರ್ತಿ ರಚಿಸುವ ಶಿವಕುಮಾರ ಹೊಸ ಕಲಾವಿದರಿಗೆ ಮಾದರಿಯಾಗಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ನಮಗೆ ಗ್ಯಾರಂಟಿ ಸಹಾಯಕ…

ಸರ್ಕಾರದ ಗ್ಯಾರಂಟಿ ಯೋಜನೆಗಳು ನನ್ನ ಗೆಲುವಿಗೆ ಸಹಕಾರಿಯಾಗಲಿದೆ: ಗೀತಾ ಶಿವರಾಜ್’ಕುಮಾರ್ (ಸಂದರ್ಶನ) ಬೆಂಗಳೂರು: 2014ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಭವಗೊಂಡಿದ್ದ ಗೀತಾ ಶಿವರಾಜಕುಮಾರ್ ಅವರು,...

ಸಚಿವ ಮಧು ಬಂಗಾರಪ್ಪ ಮತ್ತೊಮ್ಮೆ ಪ್ರಾಥಮಿಕ ಶಿಕ್ಷಣ ಓದುವ ಅಗತ್ಯವಿದೆ: ಕುಮಾರ್ ಬಂಗಾರಪ್ಪ

ಹಿರಿಯರಿಗೆ ಗೌರವ ನೀಡದ ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ವಿವಿಧ ವಿಷಯಗಳ ಬಗ್ಗೆ ಮಾಹಿತಿ ಇಲ್ಲದಾಗಿದ್ದು, ಮತ್ತೊಮ್ಮೆ ಅವರು ಪ್ರಾಥಮಿಕ ಶಿಕ್ಷಣ...

modi namskar!- ಮೋದಿ ನಮಸ್ಕಾರ! ಇದು ಪಂಗನಾಮ….?

ಸುಳ್ಳು ಮತ್ತು ಅಹಂಕಾರದಿಂದ ಮೋದಿ ಜನರಿಗೆ ದ್ರೋಹ ಮಾಡುತಿದ್ದಾರೆ ಎಂದು ಆರೋಪಿಸಿರುವ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್‌ ಮೋದಿ...

ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು ಮತದಾನ ಹೆಚ್ಚಳ: ಅಭ್ಯರ್ಥಿಗಳ ಮಧ್ಯೆ ತೀವ್ರ ಪೈಪೋಟಿ ನಿರೀಕ್ಷೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಲ್ಲವ ಅಂಶ, ಸೌಜನ್ಯಾ ಹತ್ಯೆ ಪ್ರಕರಣದಿಂದಾಗಿ ಮತದಾನದಲ್ಲಿ ಮತದಾರರಿಂದ ಹೆಚ್ಚಿನ ಪ್ರಮಾಣದಲ್ಲಿ ನೋಟಾ ಅಭಿಯಾನ, ಎಸ್‌ಡಿಪಿಐ ಸ್ಪರ್ಧೆಯಲ್ಲಿ ಇಲ್ಲದಿರುವುದು ಮತ್ತು...

ಅಂಜಲಿ ನಿಂಬಾಳ್ಕರ್ ಭರ್ಜರಿ ಪ್ರಚಾರ

ಶಿರಸಿಯಲ್ಲಿ ಕಾಗೇರಿ ವಿರುದ್ಧ ವಾಗ್ದಾಳಿ ನಡೆಸಿದ ಆರ್ ವಿ ದೇಶಪಾಂಡೆ. ಪರೇಶ್ ಮೆಸ್ತಾ ಸಾವಿನ ಪ್ರಕರಣವನ್ನು ಮುಂದಿಟ್ಟುಕೊಂಡು ನಮ್ಮ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಅವರ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *