ಶಿವಕುಮಾರ ನಿರ್ಮಿಸಿರುವ ಪರಿಸರ ಸ್ನೇಹಿ ಗಣಪ ಈ ವರ್ಷದ ವಿಶೇಶ!

ಪ್ಲಾಸ್ಟರ್‌ ಆಫ್‌ ಪ್ಯಾರೀಸ್‌ ಗುಂಗಿನಿಂದ ಹೊರಬರದ ಜನರಿಗೆ ಇಲ್ಲೊಬ್ಬ ಕಲಾವಿದ ಪರಿಸರ ಪೂರಕ ಗಣಪತಿ ಮಾಡುವ ಪರ್ಯಾಯ ವಿಧಾನ ಪರಿಚಯಿಸಿದ್ದಾರೆ.

ಪರಿಸರ ಸ್ನೇಹಿ ಗಣಪ, ಪರಿಸರ ಪೂರಕ ಗೌರಿ-ಗಣೇಶ ಹಬ್ಬ ಎನ್ನುವ ವಿಚಾರಕ್ಕೆ ಈಗ ಹೆಚ್ಚಿನ ಪ್ರಚಾರ ದೊರೆಯುತ್ತಿದೆ. ಹಬ್ಬ,ದೇವರು-ಭಕ್ತಿಯ ಹೆಸರಿನಲ್ಲಿ ಪರಿಸರಕ್ಕೆ ಹಾನಿಯಾಗುವ ಸಾಧ್ಯತೆ ಹೆಚ್ಚಿರುವುದರಿಂದ ಪರಿಸರಸ್ನೇಹಿ ಗಣೇಶ ಉತ್ಸವಕ್ಕೆ ಈಗ ಹೆಚ್ಚಿನ ಪ್ರಾಮುಖ್ಯತೆ.ಇಂಥ ಪರಿಸರ ಸ್ನೇಹಿ ಗಣಪನ ಬಗ್ಗೆ ಯೋಚಿಸುವ ಜನರಿಗೆ ಉತ್ತರ ಕನ್ನಡ ಜಿಲ್ಲೆಯ ಯುವ ಕಲಾವಿದರೊಬ್ಬರು ಸಂತೋಷದ ಸುದ್ದಿ ನೀಡಿದ್ದಾರೆ.
ಸಿದ್ಧಾಪುರದ ಕಲಾವಿದ ಶಿವಕುಮಾರ ಮೂರ್ತಿ ರಚನೆ ಮಾಡುವುದರಲ್ಲಿ ಸಿದ್ಧ ಹಸ್ತರು. ಕೃಷ್ಣ ಮೂರ್ತಿ, ಸರಸ್ವತಿ, ಲಕ್ಷ್ಮೀ, ಗೌರಿ ಗಣೇಶ್ ನ ಮಣ್ಣಿನ ಮೂರ್ತಿ ಮಾಡುವ ಕಲಾವಿದರಾದ ಇವರು ಕೆಲವು ವರ್ಷಗಳಿಂದ ಪ್ಲಾಸ್ಟರ್‌ ಆಫ್‌ ಪ್ಯಾರೀಶ್‌ ಗೆ ಬದಲು ದೇಶೀ ಮಣ್ಣಿನ ಗಣಪನನ್ನು ಮಾಡುತ್ತಾ ಅಬ್ಬರವಿಲ್ಲದೆ ಪರಿಸರಸ್ನೇಹಿ ಹಬ್ಬವನ್ನು ಉತ್ತೇಜಿಸುತಿದ್ದಾರೆ.


ಸ್ಥಳೀಯವಾಗಿ ದೊರೆಯುವ ವಸ್ತುಗಳನ್ನು ಬಳಸಿ, ಪರಿಸರಕ್ಕೆ ಮಾರಕವಾಗದಂತೆ ಎಚ್ಚರವಹಿಸಿ ಶಿವಕುಮಾರ ತಯಾರಿಸುವ ಪರಿಸರಸ್ನೇಹಿ ವಿಗ್ರಹಗಳು ಈಗ ಗಮನ ಸೆಳೆಯುತ್ತಿವೆ.ಕಡಿಮೆ ಪ್ರಮಾಣದ ಮಣ್ಣು, ಉಮಿ(ಜೊಳ್ಳುಭತ್ತ) ಜೊತೆಗೆ ಒಳಗಿದ ಬಿಳಿಹುಲ್ಲು ಬಳಸಿ ಶಿವಕುಮಾರ ಮಾಡಿವ ಪರಿಸರ ಸ್ನೇಹಿ ವಿಗ್ರಹಗಳು ನಿಷೇಧಿತ ಪ್ಲಾಸ್ಟರ್‌ ಆಫ್‌ ಪ್ಯಾರೀಸ್‌ ಪ್ರತಿಮೆಗಳಿಗೆ ಪರ್ಯಾಯವಾಗಿ ಹೆಸರುಮಾಡುತ್ತಿವೆ.

ಸದಾ ಹೊಸತನ್ನು ಯೋಚಿಸುವ ಶಿವಕುಮಾರ್‌ ನಿರ್ಮಿಸುವ ಆಕರ್ಷಕ ಮಣ್ಣಿನ ಮೂರ್ತಿಗಳಿಗೆ ಸ್ಥಳೀಯವಾಗಿ ಹೆಚ್ಚು ಬೇಡಿಕೆ.
ಈಗ ಇವರು ಪರಿಚಯಿಸಿರುವ ಪಿ.ಪಿ.ಗೆ ಪರ್ಯಾಯ ಸ್ಥಳೀಯ ವಿಧಾನದ ಪರಿಸರಸ್ನೇಹಿ ಗಣಪ ಎಲ್ಲರ ಆಕರ್ಷಣೆಯ ಕೇಂದ್ರಗಳಾಗಿವೆ.ಪರಿಸರಕ್ಕೆ ಪೂರಕವಾದ ಮಣ್ಣಿನ ಗಣೇಶ್‌ ವಿಗ್ರಹ ರಚಿಸುವ ಶಿವಕುಮಾರ ಹಬ್ಬ,ದೇವರ ಹೆಸರಿನಲ್ಲಿ ಪರಿಸರಕ್ಕೆ ಹಾನಿ ಮಾಡಬಾರದೆನ್ನುವ ತಿಳುವಳಿಕೆ ಈ ಪರಿಸರ ಸ್ನೇಹಿ ಗಣಪನ ಸೃಷ್ಟಿಯ ಹಿಂದಿನ ವಿಶೇಶ ಎನ್ನುತ್ತಾರೆ.ಸರಳವಾಗಿ,ಮರುಬಳಕೆ ಮಾಡಬಹುದಾದ ಪರಿಸರಸ್ನೇಹಿ ಮೂರ್ತಿ ರಚಿಸುವ ಶಿವಕುಮಾರ ಹೊಸ ಕಲಾವಿದರಿಗೆ ಮಾದರಿಯಾಗಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *