ಕಾರವಾರ ಶಾಸಕ ಸತೀಶ್‌ ಶೈಲ್‌ ವಿರುದ್ಧ ಚು.ಆಯೋಗಕ್ಕೆ ದೂರು

ಚುನಾವಣಾ ಅಫಿಡವಿಟ್‌ನಲ್ಲಿ ತಪ್ಪು ಮಾಹಿತಿ: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ವಿರುದ್ಧ ದೂರು ದಾಖಲು

ಕರ್ನಾಟಕದಲ್ಲಿ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆ ವೇಳೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಕೆಲ ಆಸ್ತಿ ವಿವರಗಳನ್ನು ಮರೆಮಾಚಿದ್ದಾರೆ ಎಂಬ ಆರೋಪದ ಮೇಲೆ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ.

ಬೆಂಗಳೂರು: ಕರ್ನಾಟಕದಲ್ಲಿ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆ ವೇಳೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಕೆಲ ಆಸ್ತಿ ವಿವರಗಳನ್ನು ಮರೆಮಾಚಿದ್ದಾರೆ ಎಂಬ ಆರೋಪದ ಮೇಲೆ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ.

ಬೆಂಗಳೂರಿನ ಶೇಷಾದ್ರಿಪುರಂ ನಿವಾಸಿ ಶ್ರೀನಿವಾಸ ಎಂಬುವವರು ಈ ಸಂಬಂಧ ಚುನಾವಣಾ ಆಯೋಗಕ್ಕೆ ಸೆಪ್ಟೆಂಬರ್ 20ರಂದು ದೂರು ದಾಖಲಿಸಿದ್ದಾರೆ.

ದೂರುದಾರರ ಪ್ರಕಾರ, ಸತೀಶ್ ಸೈಲ್ ಮತ್ತು ಅವರ ಪತ್ನಿ ಕಲ್ಪನಾ ಅವರ ಒಡೆತನದಲ್ಲಿರುವ ಮಲ್ಲಿಕಾರ್ಜುನ ಶಿಪ್ಪಿಂಗ್ ಪ್ರೈವೇಟ್ ಲಿ. ಕಂಪನಿಯ ಕುರಿತು ಯಾವುದೇ ಮಾಹಿತಿಯನ್ನು ಅಫಿಡವಿಟ್‌ನಲ್ಲಿ ಉಲ್ಲೇಖಿಸಿಲ್ಲ. ಅಲ್ಲದೆ, ಅಫಿಡವಿಟ್‌ನಲ್ಲಿ ಕಂಪನಿಯ ಬ್ಯಾಂಕ್ ವಹಿವಾಟುಗಳನ್ನು ಸಹ ನಮೂದಿಸದಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದು ದೂರಿದ್ದಾರೆ.

ಮಲ್ಲಿಕಾರ್ಜುನ ಶಿಪ್ಪಿಂಗ್ ಪ್ರೈವೇಟ್ ಲಿಮಿಟೆಡ್ ಹೆಸರಿನಲ್ಲಿ ಶಾಸಕ ಸೈಲ್ ಅವರು 63,90,19,813 ರೂ. ಸಾಲ ಪಡೆದಿದ್ದಾರೆ. ರಾಜ್ಯ ಸರ್ಕಾರದಿಂದ 30 ವರ್ಷಗಳ ಅವಧಿಗೆ ಲೀಸ್ ಪಡೆದ ಬಂದರು ಇಲಾಖೆಗೆ ಸೇರಿದ ಜಟ್ಟಿಯನ್ನು ಅಡವಿಟ್ಟು ಬ್ಯಾಂಕ್ ಸಾಲ ಪಡೆದಿರುವುದು ಕಾನೂನಿಗೆ ವಿರುದ್ಧವಾಗಿದೆ. ಅಫಿಡವಿಟ್‌ನಲ್ಲಿ ಈ ಬಗ್ಗೆಯೂ ಯಾವುದೇ ಉಲ್ಲೇಖವಿಲ್ಲ ಎಂದು ದೂರುದಾರರು ಆರೋಪಿಸಿದ್ದಾರೆ. 

ಮಲ್ಲಿಕಾರ್ಜುನ ಶಿಪ್ಪಿಂಗ್ ಕಂಪನಿ ಹೆಸರಿನಲ್ಲಿ ಹೊರರಾಜ್ಯದ ಕೆಲ ಬ್ಯಾಂಕುಗಳಲ್ಲಿ ಪಡೆದ ಸಾಲದ ಮಾಹಿತಿಯನ್ನು ನಮೂದಿಸಿಲ್ಲ. ಉಳಿತಾಯ ಖಾತೆಯ ವಿವರಗಳನ್ನು ಮಾತ್ರ ನೀಡಲಾಗಿದೆ. ಹೀಗಾಗಿ, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ದೂರುದಾರರು ಒತ್ತಾಯಿಸಿದ್ದಾರೆ.

ಮಾಹಿತಿ ಮರೆಮಾಚಿದ್ದಾರೆ ಎನ್ನುವ ಆರೋಪದ ಮೇಲೆ ಇತ್ತೀಚೆಗಷ್ಟೇ ಕರ್ನಾಟಕ ಹೈಕೋರ್ಟ್ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರ ಮೊಮ್ಮಗ, ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ಹೊರಡಿಸಿತ್ತು. ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.

ಮತದಾರರಿಗೆ ಕುಕ್ಕರ್ ಮತ್ತು ಐರನ್ ಬಾಕ್ಸ್ ಹಂಚುವ ಮೂಲಕ ಚುನಾವಣಾ ಅವ್ಯವಹಾರ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧವೂ ದೂರು ದಾಖಲಾಗಿದೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *