ನಗುವನ್ನು ಹರಾಜಿಗಿಡಲಾಗಿದೆ…..ಮಧುರ ಕಾವ್ಯ

ಕವನ ಸುಂದರಿ: ನಾಗರೇಖಾ ಗಾಂವಕರ: ನಗುವನ್ನು ಹರಾಜಿಗಿಡಲಾಗಿದೆ

ಭಾರತ, ಭುವನ ಸುಂದರಿ ಮುಕುಟ ತೊಟ್ಟು ಸಂಭ್ರಮಿಸುತ್ತಿರುವ ಈ ಹೊತ್ತಿನಲ್ಲಿ, ಹೆಣ್ಣಿನ ಅಂದಚಂದವಲ್ಲದೆ ಅವಳ ಅಂತರಂಗ ದೈವವನ್ನೂ ಗುರುತಿಸುವ, ಗೌರವಿಸುವ ಪ್ರಯತ್ನ, ಕವನ ಸುಂದರಿ 


ನಗುವನ್ನು ಹರಾಜಿಗಿಡಲಾಗಿದೆ

ಈ ನಗರದಲ್ಲಿ ನಗುವನ್ನೂ ಹರಾಜಿಗೆ ಇಡುತ್ತಾರೆ
ಅದು ಸೂಸುವ ಕಂಪಿಗೂ
ಬಲೆ ನಿಗದಿ ಇದೆ.
 

ನಸುಗೆಂಪು ಕೆನ್ನೆಗಳ ಕಿರು ಮಂದಹಾಸ
ಕಾವಿಗೆ ಒಡೆಯುತ್ತವೆ ಮೊಟ್ಟೆಗಳು
ಸ್ಮೈಲ್ ಬಿಗ್ ಆಫರ್‌ಗಳಲ್ಲಿ
ಸೆಲ್ ಮೋರ್ ಎನ್ನುತ್ತವೆ..
 

ನಗುವಿನ ನಸೀಬು
ನಕ್ಕವಳ ನಸೀಬು ಎರಡೂ ಬದಲಾಗುವುದು
ಯಾರದೋ ಬೆರಳಿಗೆ ಮೀಟಿದ ತಂತಿ
ಚಡಪಡಿಸಿದಾಗ.
ಆ ನಗುವಲ್ಲಿ ಗಾಳಿ
ಮಳೆ, ಕೆಲವೊಮ್ಮೆ ಬೆಂಕಿಗಳು
ಅರಳಲೂಬಹುದು
ಇಲ್ಲ… ಬೆಳಕು
ಬೆಳದಿಂಗಳು ನಾಟ್ಯವಾಡಬಹುದು.
 

ಗೋಡೆಯಲ್ಲಿ ತೂಗುಬಿದ್ದ
ದರ್ಪಣ ಸುಂದರಿಯ ತುಟಿಯಂಚಲ್ಲಿ
ಟ್ರೈಫೋಲ್ಡ್ ಕನ್ನಡಿಗಳಲ್ಲಿ
ಪ್ರತಿಫಲಿಸಲೂಬಹುದು
 

ಯಾರೂ ಬೇಕಾದರೂ
ಕೊಂಡುಕೊಳ್ಳಬಹುದಂತೆ..
 

ಸಣ್ಣಗೆ ಉರಿಯುವ ಪೆಟ್ರೊಮ್ಯಾಕ್ಸ್
ಪಕ್ಕದಲ್ಲಿ ನಿಂತ ಸ್ಮಿತವದನೆ
ಮೊಗದ ದುಮ್ಮಾನ
ಸೆಲ್ ಮೋರ್ ಬರಹಗಳ ಹೊತ್ತ
ಗ್ಲೋಸಿ ಫ್ಲಾಯರ್‌ಗಳಲ್ಲಿ ಹುದುಗಿದಂತೆ.
 

ಬಾರ್ಗೆನು ಮಾಡುವುದು ಮರ್ಯಾದೆಯ
ಪ್ರಶ್ನೆ ಇಲ್ಲಿ !!
ನಾಜೂಕು ಹವಳದ ತುಟಿಗಳಲ್ಲಿ
ನಗು ತುಂಬಿಕೊಂಡ
ಯವನಿಕೆಯರು ನಿಮ್ಮನ್ನೆ ನೋಡುತ್ತಾರೆ..
 

ನೀವಿಲ್ಲಿ ನಗುವಿನ
ಹರಾಜಿನಲ್ಲಿ ಏನೂ ಬೇಕಾದರೂ ಕೊಳ್ಳಬಹುದು.
ಕಿಸೆಯಲ್ಲಿ ಹಣವಿರುವ ತನಕ
ಹರಾಜು ಮುಗಿದ ಮೇಲೆ ಈ
ನಗುವನ್ನು ದರ್ಪಣದಲ್ಲಿ ಬಂಧಿಸಿಡಲಾಗುತ್ತದೆ  (kpc)
 



ಕವಯಿತ್ರಿ, ಕತೆಗಾರ್ತಿ ನಾಗರೇಖಾ ಗಾಂವಕರ ಅವರು ಮೂಲತಃ ಉತ್ತರ ಕನ್ನಡದವರು. ಕನ್ನಡ ಹಾಗೂ ಇಂಗ್ಲೀಷ್‌ ಸ್ನಾತಕೋತ್ತರ ಪದವೀಧರೆಯಾದ ಇವರು ಪ್ರಸ್ತುತ ದಾಂಡೇಲಿಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ‘ಏಣಿ’ ಕವನ ಸಂಕಲನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಮತಿ ಶಾರದಾ ರಾಮಲಿಂಗಪ್ಪ ದತ್ತಿ ಪ್ರಶಸ್ತಿ, ಬರ್ಫದ ಬೆಂಕಿ ಸಂಕಲನಕ್ಕೆ ಬೆಟಗೇರಿ ಕೃಷ್ಣಶರ್ಮ ಯುವ ಕಾವ್ಯ ಪ್ರಶಸ್ತಿ ಲಭಿಸಿದೆ. ಆಕಾಶವಾಣಿ ಧಾರವಾಡ, ಕಾರವಾರಗಳಲ್ಲಿ ಚಿಂತನ ಕಾರ್ಯಕ್ರಮಗಳಲ್ಲಿ ಕತಾವಾಚನ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಹೆಗ್ಗಳಿಕೆ ಅವರದು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *