ನಗುವನ್ನು ಹರಾಜಿಗಿಡಲಾಗಿದೆ…..ಮಧುರ ಕಾವ್ಯ

ಕವನ ಸುಂದರಿ: ನಾಗರೇಖಾ ಗಾಂವಕರ: ನಗುವನ್ನು ಹರಾಜಿಗಿಡಲಾಗಿದೆ

ಭಾರತ, ಭುವನ ಸುಂದರಿ ಮುಕುಟ ತೊಟ್ಟು ಸಂಭ್ರಮಿಸುತ್ತಿರುವ ಈ ಹೊತ್ತಿನಲ್ಲಿ, ಹೆಣ್ಣಿನ ಅಂದಚಂದವಲ್ಲದೆ ಅವಳ ಅಂತರಂಗ ದೈವವನ್ನೂ ಗುರುತಿಸುವ, ಗೌರವಿಸುವ ಪ್ರಯತ್ನ, ಕವನ ಸುಂದರಿ 


ನಗುವನ್ನು ಹರಾಜಿಗಿಡಲಾಗಿದೆ

ಈ ನಗರದಲ್ಲಿ ನಗುವನ್ನೂ ಹರಾಜಿಗೆ ಇಡುತ್ತಾರೆ
ಅದು ಸೂಸುವ ಕಂಪಿಗೂ
ಬಲೆ ನಿಗದಿ ಇದೆ.
 

ನಸುಗೆಂಪು ಕೆನ್ನೆಗಳ ಕಿರು ಮಂದಹಾಸ
ಕಾವಿಗೆ ಒಡೆಯುತ್ತವೆ ಮೊಟ್ಟೆಗಳು
ಸ್ಮೈಲ್ ಬಿಗ್ ಆಫರ್‌ಗಳಲ್ಲಿ
ಸೆಲ್ ಮೋರ್ ಎನ್ನುತ್ತವೆ..
 

ನಗುವಿನ ನಸೀಬು
ನಕ್ಕವಳ ನಸೀಬು ಎರಡೂ ಬದಲಾಗುವುದು
ಯಾರದೋ ಬೆರಳಿಗೆ ಮೀಟಿದ ತಂತಿ
ಚಡಪಡಿಸಿದಾಗ.
ಆ ನಗುವಲ್ಲಿ ಗಾಳಿ
ಮಳೆ, ಕೆಲವೊಮ್ಮೆ ಬೆಂಕಿಗಳು
ಅರಳಲೂಬಹುದು
ಇಲ್ಲ… ಬೆಳಕು
ಬೆಳದಿಂಗಳು ನಾಟ್ಯವಾಡಬಹುದು.
 

ಗೋಡೆಯಲ್ಲಿ ತೂಗುಬಿದ್ದ
ದರ್ಪಣ ಸುಂದರಿಯ ತುಟಿಯಂಚಲ್ಲಿ
ಟ್ರೈಫೋಲ್ಡ್ ಕನ್ನಡಿಗಳಲ್ಲಿ
ಪ್ರತಿಫಲಿಸಲೂಬಹುದು
 

ಯಾರೂ ಬೇಕಾದರೂ
ಕೊಂಡುಕೊಳ್ಳಬಹುದಂತೆ..
 

ಸಣ್ಣಗೆ ಉರಿಯುವ ಪೆಟ್ರೊಮ್ಯಾಕ್ಸ್
ಪಕ್ಕದಲ್ಲಿ ನಿಂತ ಸ್ಮಿತವದನೆ
ಮೊಗದ ದುಮ್ಮಾನ
ಸೆಲ್ ಮೋರ್ ಬರಹಗಳ ಹೊತ್ತ
ಗ್ಲೋಸಿ ಫ್ಲಾಯರ್‌ಗಳಲ್ಲಿ ಹುದುಗಿದಂತೆ.
 

ಬಾರ್ಗೆನು ಮಾಡುವುದು ಮರ್ಯಾದೆಯ
ಪ್ರಶ್ನೆ ಇಲ್ಲಿ !!
ನಾಜೂಕು ಹವಳದ ತುಟಿಗಳಲ್ಲಿ
ನಗು ತುಂಬಿಕೊಂಡ
ಯವನಿಕೆಯರು ನಿಮ್ಮನ್ನೆ ನೋಡುತ್ತಾರೆ..
 

ನೀವಿಲ್ಲಿ ನಗುವಿನ
ಹರಾಜಿನಲ್ಲಿ ಏನೂ ಬೇಕಾದರೂ ಕೊಳ್ಳಬಹುದು.
ಕಿಸೆಯಲ್ಲಿ ಹಣವಿರುವ ತನಕ
ಹರಾಜು ಮುಗಿದ ಮೇಲೆ ಈ
ನಗುವನ್ನು ದರ್ಪಣದಲ್ಲಿ ಬಂಧಿಸಿಡಲಾಗುತ್ತದೆ  (kpc)
 



ಕವಯಿತ್ರಿ, ಕತೆಗಾರ್ತಿ ನಾಗರೇಖಾ ಗಾಂವಕರ ಅವರು ಮೂಲತಃ ಉತ್ತರ ಕನ್ನಡದವರು. ಕನ್ನಡ ಹಾಗೂ ಇಂಗ್ಲೀಷ್‌ ಸ್ನಾತಕೋತ್ತರ ಪದವೀಧರೆಯಾದ ಇವರು ಪ್ರಸ್ತುತ ದಾಂಡೇಲಿಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ‘ಏಣಿ’ ಕವನ ಸಂಕಲನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಮತಿ ಶಾರದಾ ರಾಮಲಿಂಗಪ್ಪ ದತ್ತಿ ಪ್ರಶಸ್ತಿ, ಬರ್ಫದ ಬೆಂಕಿ ಸಂಕಲನಕ್ಕೆ ಬೆಟಗೇರಿ ಕೃಷ್ಣಶರ್ಮ ಯುವ ಕಾವ್ಯ ಪ್ರಶಸ್ತಿ ಲಭಿಸಿದೆ. ಆಕಾಶವಾಣಿ ಧಾರವಾಡ, ಕಾರವಾರಗಳಲ್ಲಿ ಚಿಂತನ ಕಾರ್ಯಕ್ರಮಗಳಲ್ಲಿ ಕತಾವಾಚನ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಹೆಗ್ಗಳಿಕೆ ಅವರದು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *