ಹಾಲು ಉತ್ಫಾದಕ ಸಂಘಗಳಿಗೆ ಲಾಭ

ಸಿದ್ದಾಪುರ
ತಾಲೂಕಿನ ನಿಡಗೋಡ ಹಾಲು ಉತ್ಪಾದಕ ಸಹಕಾರಿ ಸಂಘ ಹಾಗೂ ಬಿಎಂಸಿ ಕೇಂದ್ರದ ೨೦೨೨-೨೩ನೇ ಸಾಲಿನಲ್ಲಿ ೨ಲಕ್ಷದ ೪೮ಸಾವಿರದ ೯೧೨ರೂಗಳಷ್ಟು ನಿಕ್ಕಿ ಲಾಭ ಹೊಂದಿದೆ ಎಂದು ಸಂಘದ ಅಧ್ಯಕ್ಷ ಕೆ.ಪಿ.ಗೌಡರ್ ಹೂಕಾರ ತಿಳಿಸಿದರು.
ನಿಡಗೋಡಿನ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ನಡೆದ ವಾರ್ಷಿಕ ಸರ್ವಸಾಧಾರಣ ಸಭೆಯ ಅಧ್ಯಕ್ಷತೆವಹಿಸಿ ಅವರು ಶನಿವಾರ ಮಾತನಾಡಿದರು.


ಇದೇ ಸಂದರ್ಭದಲ್ಲಿ ಸಂಘವು ಸದಸ್ಯರಿಗೆ ೨೦೧೪-೧೫ನೇ ಸಾಲಿನ ೧ಲಕ್ಷದ ೩ಸಾವಿರದ ೪೨೬ರೂಗಳ ಬೋನಸ್‌ನ್ನು ವಿತರಿಸಲಾಯಿತು.
ಧಾರವಾಡ ಹಾಲು ಒಕ್ಕೂಟದ ನಿರ್ದೇಶಕ ಪಿ.ವಿ.ನಾಯ್ಕ ಬೇಡ್ಕಣಿ, ತಾಲೂಕು ವಿಸ್ತರಣಾಧಿಕಾರಿ ಪ್ರಕಾಶ ಕೆ,
ಇದೇ ಸಂದರ್ಭದಲ್ಲಿ ನಿಡಗೋಡ ಬಿಎಂಸಿಗೆ ಉತ್ತಮ ಗುಣಮಟ್ಟದ ಹಾಲನ್ನು ನೀಡಿದ ಕೋಡ್ಸರ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಸತೀಶ ಹೆಗಡೆ ಹಾಗೂ ಮುಖ್ಯಕಾರ್ಯನಿರ್ವಾಹಕಿ ವಸುಧಾ ವಿ.ಹೆಗಡೆ ಅವರಿಗೆ ವಾಟರ್ ಪಿಲ್ಟರ್ ನೀಡಿ ಗೌರವಿಸಲಾಯಿತು. ನಿವೃತ್ತ ಶಿರಸ್ತೆದಾರರಾದ ಎನ್.ಐ. ಗೌಡ ಅವರನ್ನು ಸನ್ಮಾನಿಸಲಾಯಿತು. ಸಂಘದ ಮುಖ್ಯಕಾರ್ಯನಿರ್ವಾಹಕ ವೆಂಕಟೇಶ ಬಿ.ನಾಯ್ಕ ವಾರ್ಷಿಕ ವರದಿ ವಾಚಿಸಿದರು.
ಉಪಾಧ್ಯಕ್ಷ ಸುರೇಶ ಟಿ.ನಾಯ್ಕ, ನಿರ್ದೇಶಕರಾದ ಲಕ್ಷಿö್ಮನಾರಾಯಣ ಹೆಗಡೆ, ಷಣ್ಮುಖ ಎಸ್. ಗೌಡರ್, ಕಾಳ ಟಿ. ನಾಯ್ಕ, ರಾಮ ಜಿ.ನಾಯ್ಕ, ಗೌರಿ ಕೃಷ್ಣ ನಾಯ್ಕ, ಮಹೇಶ ಎಸ್. ಗೌಡರ್, ಮಹಾಬಲೇಶ್ವರ ವಿ.ಹೆಗಡೆ ಇತರರಿದರು.ಸಂಘದ ಸಿಬ್ಬಂದಿಗಳು ಸಹಕರಿಸಿದರು.

-ಸಿದ್ದಾಪುರ ತಾಲೂಕಿನ ಹಾರ್ಸಿಕಟ್ಟಾ ಗಜಾನನೋತ್ಸವ ಸಮಿತಿಯ ೪೧ನೇ ವರ್ಷದ ಗಣೇಶೋತ್ಸವ ಶನಿವಾರ ಸಂಪನ್ನಗೊಂಡಿದ್ದು ಶೃಂಗರಿಸಿದ ವಾಹನದಲ್ಲಿ ಗಣೇಶ ಮೂರ್ತಿಯನ್ನು ಕೂಡ್ರಿಸಿ ಸಂಭ್ರಮದಿಂದ ಭಕ್ತರು ಮೆರವಣಿಗೆಯಲ್ಲಿ ಸಾಗಿ ಮಲ್ಕಾರ-ಕಂಚಿಮನೆ ಹೊಳೆಯಲ್ಲಿ ವಿಸರ್ಜಿಸಿದರು.



ಸಿದ್ದಾಪುರ
ತಾಲೂಕಿನ ಗಾಳೀಜಡ್ಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸರ್ವಸಾಧಾರಣ ಸಭೆಯ ಪ್ರಯುಕ್ತ ಊರ ನಾಗರಿಕರ ಸಹಕಾರದೊಂದಿಗೆ ಗಾಳೀಜಡ್ಡಿ ಸಹಿಪ್ರಾ ಶಾಲೆಯ ಉಮಾಪತಿ ಹೆಗಡೆ ರಂಗಮAದಿರದಲ್ಲಿ ಸುದರ್ಶನ ವಿಜಯ ಯಕ್ಷಗಾನ ಬಯಲಾಟ ಸೆ.೨೭ರಂದು ರಾತ್ರಿ ೮.೪೫ರಿಂದ ಪ್ರದರ್ಶನಗೊಳ್ಳಲಿದೆ.
ಹಿಮ್ಮೇಳದಲ್ಲಿ ರಾಮಕೃಷ್ಣ ಹೆಗಡೆ ಹಿಲ್ಲೂರು, ಸತೀಶ ಹೆಗಡೆ ದಂಟಕಲ್, ಅನಿರುದ್ಧ ಹೆಗಡೆ ವರ್ಗಾಸರ, ಪ್ರಸನ್ನ ಹೆಗ್ಗಾರ ಸಹಕರಿಸಲಿದ್ದಾರೆ.
ಮುಮ್ಮೇಳದಲ್ಲಿ ಉದಯ ಹೆಗಡೆ ಕಡಬಾಳ, ಕಾರ್ತಿಕ ಚಿಟ್ಟಾಣಿ, ಸುಬ್ರಹ್ಮಣ್ಯ ಹೆಗಡೆ ಯಲಗುಪ್ಪ, ವಿನಯ ಬೇರೊಳ್ಳಿ, ಮಹಾಬಲೇಶ್ವರ ಗೌಡ ಪಾತ್ರ ನಿರ್ವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *