local-news-ರಾಮಚಂದ್ರ ಭಾಗವತರಿಗೆ ನುಡಿನಮನ

ಸಿದ್ದಾಪುರ
ತಾಲೂಕಿನ ಹಾರ್ಸಿಕಟ್ಟಾದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ ೨೦೨೨-೨೩ನೇ ಸಾಲಿನಲ್ಲಿ ೬ಲಕ್ಷದ ೮೧ಸಾವಿರದ ೪೮೦ರೂಗಳಷ್ಟು ಲಾಭಹೊಂದಿದೆ. ಸಂಘದ ಸದಸ್ಯರ ಮನೆ-ಮನ ಭೇಟಿ ಕಾರ್ಯಕ್ರಮ ಮುಂದುವರೆಸಿ ಪತ್ತು ಮತ್ತು ಮಾರಾಟ ಜೋಡಣೆಯಲ್ಲಿ ಸದಸ್ಯರು ಹೆಚ್ಚು ವ್ಯವಹಾರ ಮಾಡುವಂತೆ ಮನವರಿಕೆ ಮಾಡಿಕೊಳ್ಳಲಾಗುವುದು ಎಂದು ಸಂಘದ ಅಧ್ಯಕ್ಷ ಮಹಾಬಲೇಶ್ವರ ದೇವರು ಭಟ್ಟ ಅಗ್ಗೇರೆ ಹೇಳಿದರು.
ಸಂಘದ ನಿವೇಶನದ ಗೋದಾಮು ಪ್ರಾಂಗಣದಲ್ಲಿ ನಡೆದ ೮೦ನೇ ವಾರ್ಷಿಕ ಸರ್ವಸಾಧಾರಣ ಸಭೆಯ ಅಧ್ಯಕ್ಷತೆವಹಿಸಿ ಅವರು ಸೋಮವಾರ ಮಾತನಾಡಿದರು. ಸಂಘದ ಹಾಗೂ ಅಡಕೆ ಬೆಳೆಗಾರರ ಹಿತದೃಷ್ಠಿಯಿಂದ ಅಡಕೆ ಎಲೆ ಚುಕ್ಕೆ ರೋಗದ ಕುರಿತು ತೋಟಗಾರಿಕಾ ಇಲಾಖೆಯವರಿಂದ ಹಾಗೂ ತಜ್ಞರಿಂದ ರೈತರಿಗೆ ಮಾಹಿತಿ ಕಾರ್ಯಾಗಾರ ನಡೆಸಲಾಗುವುದಲ್ಲದೇ ಕಾಡುಪ್ರಾಣಿಗಳಿಂದಾಗುತ್ತಿರುವ ಬೆಳೆ ಹಾನಿಯ ಕುರಿತು ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲಾಗುವುದು ಎಂದು ಹೇಳಿದರು.


ವರ್ಷದಿಂದ ವರ್ಷಕ್ಕೆ ಸಂಘ ಪ್ರಗತಿಸಾಧಿಸುವುದರೊಂದಿಗೆ ಸದಸ್ಯರಿಗೆ ಉತ್ತಮ ಸೇವೆ ಸಲ್ಲಿಸುತ್ತಿರುವುದು ಸ್ವಾಗತಾರ್ಹ. ಮುಂದಿನ ದಿನದಲ್ಲಿ ಹೈನುಗಾರಿಕೆ, ಶಿಕ್ಷಣಕ್ಕೆ ಹೆಚ್ಚು ಆಧ್ಯತೆ ನೀಡಿ ಅರ್ಹರಿಗೆ ಸಾಲವನ್ನು ನೀಡಬೇಕೆಂದು ಸದಸ್ಯರು ಆಗ್ರಹಿಸಿದರು.
ಸಂಘದ ಹಿರಿಯ ಸದಸ್ಯರಾದ ಸೂರಪ್ಪ ಹೆಗಡೆ ಅರಶಿನಗೋಡ, ತಿಮ್ಮ ನಾಯ್ಕ ಹಲಸಗಾರ, ರಾಮಚಂದ್ರ ಭಟ್ಟ ಅಬ್ಬಿಗದ್ದೆ ಕಾರ್ಯಕ್ರಮ ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ಸಂಘದ ಮೂಲಕ ಹೆಚ್ಚು ಮಹಸೂಲು ವಿಕ್ರಿಮಾಡಿದ ಭಾಸ್ಕರ ಹೆಗಡೆ ಅರಶಿನಗೋಡು, ಮಹೇಶ ಭಟ್ಟ ಹುತ್ಗಾರ ಹಾಗೂ ಮಹೇಶ ಹೆಗಡೆ ಹೊಸ್ಮನೆ ಅವರನ್ನು ಸನ್ಮಾನಿಸಲಾಯಿತು.


ಸಂಘದ ಮುಖ್ಯಕಾರ್ಯನಿರ್ವಾಹಕ ದಿನೇಶ ಕೃಷ್ಣ ಹೆಗಡೆ ಚಳ್ಳೆಹದ್ದ ಹಾಗೂ ಅಕೌಂಟೆಂಟ್ ಮಹ್ಮದ್ ಗುಲ್ಜಾರ್ ವಾರ್ಷಿಕ ವರದಿ ವಾಚಿಸಿದರು.
ಉಪಾಧ್ಯಕ್ಷೆ ಇಂದಿರಾ ಜಿ.ಹೆಗಡೆ, ಸುಮಾ ಹೆಗಡೆ ಹೊನ್ನೆಹದ್ದ, ಅಶೋಕ ಹೆಗಡೆ ಹಿರೇಕೈ, ನಾಗರಾಜ ಹೆಗಡೆ ಹುಲಿಮನೆ, ಮಂಜುನಾಥ ನಾಯ್ಕ ತೆಂಗಿನಮನೆ, ನಾಗರಾಜ ಹೆಗಡೆ ಹೊಲಗದ್ದೆ, ಸುಧಾಕರ ಹರಿಜನ ಹೊನ್ನೆಹದ್ದ ಉಪಸ್ಥಿತರಿದ್ದರು. ನಿರ್ದೇಶಕರಾದ ಅನಂತ ಹೆಗಡೆ ಗೊಂಟನಾಳ, ಅಶೋಕ ಹೆಗಡೆ ಹೀನಗಾರ, ಅನಂತ ಹೆಗಡೆ ಹೊಸಗದ್ದೆ ಕಾರ್ಯಕ್ರಮ ನಿರ್ವಹಿಸಿದರು. ಸಂಘದ ಸಿಬ್ಬಂದಿಗಳು ಸಹಕರಿಸಿದರು.

ಸಿದ್ದಾಪುರ
ಇತ್ತೀಚೆಗೆ ನಿಧನ ಹೊಂದಿದ ಖ್ಯಾತ ಯಕ್ಷಗಾನ ಭಾಗವತ ರಾಮಚಂದ್ರ ನಾಯ್ಕ ಹೆಮ್ಮನಬೈಲ್ ಅವರಿಗೆ ಹಾರ್ಸಿಕಟ್ಟಾ ಗಣೇಶ ಮಂಟಪದಲ್ಲಿ ಅವರ ಅಭಿಮಾನಿಗಳಿಂದ ನುಡಿನಮನ ಕಾರ್ಯಕ್ರಮ ಸೋಮವಾರ ಜರುಗಿತು.
ಯಕ್ಷಗಾನ ಭಾಗವತ ಸತೀಶ ಹೆಗಡೆ ದಂಟಕಲ್, ಕಲಾವಿದ ವೆಂಕಟಗಿರಿ ಹೆಗಡೆ ಹಾರ್ಸಿಮನೆ, ತಾಳಮದ್ದಳೆ ಅರ್ಥದಾರಿ ಪಿ.ವಿ.ಹೆಗಡೆ ಹೊಸಗದ್ದೆ, ಮಹಾಬಲೇಶ್ವರ ಭಟ್ಟ ಅಗ್ಗೇರೆ, ನಾಟಿ ವೈದ್ಯ ಕೆ.ಟಿ.ಗೌಡ ಮಾದಲಮನೆ, ಪತ್ರಕರ್ತ ರಮೇಶ ಹೆಗಡೆ ಹಾರ್ಸಿಮನೆ, ಸಂಘಟಕ ಅನಂತ ಶಾನಭಾಗ ಹಾರ್ಸಿಕಟ್ಟಾ ಅವರು ರಾಮಚಂದ್ರ ನಾಯ್ಕ ಅವರ ಕುರಿತು ನುಡಿನಮನ ಸಲ್ಲಿಸಿದರು.ಎ.ಜಿ.ಹೆಗಡೆ ಹಿರೇಕೈ, ಅನಂತ ಹೆಗಡೆ ಹೊಸಗದ್ದೆ, ಡಿ.ಕೆ.ನಾಯ್ಕ ತೆಂಗಿನಮನೆ, ಅಶೋಕ ಹೆಗಡೆ ಹೀನಗಾರ, ನಾರಾಯಣ ನಾಯ್ಕ ದೇವಾಸ, ಪರಮೇಶ್ವರ ನಾಯ್ಕ ದೇವಾಸ, ಮಂಜುನಾಥ ನಾಯ್ಕ ತೆಂಗಿನಮನೆ, ಶ್ರೀಕಾಂತ ಶಾನಭಾಗ ಹಾರ್ಸಿಕಟ್ಟಾ, ಸಿ.ಎನ್.ಹೆಗಡೆ ಹೊನ್ನೆಹದ್ದ ಇತರರಿದ್ದರು. ಕಾರ್ಯಕ್ರಮದ ಪೂರ್ವದಲ್ಲಿ ಒಂದು ನಿಮಿಷದ ಮೌನಾಚರಣೆ ನಡೆಸಲಾಯಿತು.

ಸಿದ್ದಾಪುರ: ತಾಲೂಕಿನ ಕೋಡ್ಸರ(ಮುಠ್ಠಳ್ಳಿ)ಯ ಸಿದ್ಧಿವಿನಾಯಕ ರೈತಯುವಕ ಸಂಘ ಅನಂತಚತುರ್ದಶೀ ಪ್ರಯುಕ್ತ ಕೋಡ್ಸರ ಮುಠ್ಠಳ್ಳಿ ಶಾಲಾ ಆವಾರದಲ್ಲಿ ಸೆ.೨೮ರಂದು ಮಧ್ಯಾಹ್ನ ೩.೩೦ರಿಂದ ಶಲ್ಯ ಸಾರಥ್ಯ ಯಕ್ಷಗಾನ ತಾಳಮದ್ದಳೆ ಆಯೋಜಿಸಿದೆ.
ಹಿಮ್ಮೇಳದಲ್ಲಿ ರಾಮಕೃಷ್ಣ ಹೆಗಡೆ ಹಿಲ್ಲೂರು, ಶಂಕರ ಭಾಗವತ ಯಲ್ಲಾಪುರ, ಗಜಾನನ ಕತಗಾಲ ಸಹಕರಿಸಲಿದ್ದಾರೆ.
ಮುಮ್ಮೇಳದಲ್ಲಿ ಅರ್ಥಧಾರಿಗಳಾಗಿ ವಿ.ಉಮಾಕಾಂತ ಭಟ್ಟ ಕೆರೆಕೈ, ವಾಸುದೇವ ರಂಗಾ ಭಟ್ಟ ಮಧೂರು, ಗೊರಮನೆ ಮಂಜುನಾಥ ಪಾಲ್ಗೊಳ್ಳಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *